Homeಮುಖಪುಟ'ಸ್ಪೀಕರ್ ಸ್ಥಾನವನ್ನು ಪಡೆಯಿರಿ..'; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

‘ಸ್ಪೀಕರ್ ಸ್ಥಾನವನ್ನು ಪಡೆಯಿರಿ..’; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

- Advertisement -
- Advertisement -

ಶಿವಸೇನಾ (ಯುಬಿಟಿ) ಪಕ್ಷವು ಎನ್‌ಡಿಎಗೆ ಮರಳಲಿದೆ ಎಂಬ ಊಹಾಪೋಗಳ ನಡುವೆಯೆ, ಯುವ ನಾಯಕ ಆದಿತ್ಯ ಠಾಕ್ರೆ ಅವರು ಕೇಂದ್ರದಲ್ಲಿ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿರುವ ಬಿಜೆಪಿ ಮಿತ್ರಪಕ್ಷಗಳಿಗೆ ತಮ್ಮ ಸಲಹೆಯನ್ನು ನೀಡಿದ್ದು, ‘ಸ್ಪೀಕರ್ ಸ್ಥಾನ ಪಡೆಯಿರಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಜೆಪಿ ಹೊಸದಾಗಿ ನೆನಪಿಸಿಕೊಳ್ಳುತ್ತಿರುವ ಎನ್‌ಡಿಎ ಸಂಭಾವ್ಯ ಮಿತ್ರಪಕ್ಷಗಳಿಗೆ ಒಂದು ವಿನಮ್ರ ಸಲಹೆ, ಸ್ಪೀಕರ್ ಹುದ್ದೆಯನ್ನು ಪಡೆಯಿರಿ. ಬಿಜೆಪಿಯ ತಂತ್ರಗಳನ್ನು ಅನುಭವಿಸಿದ್ದೇವೆ, ಅವರು ನಿಮ್ಮೊಂದಿಗೆ ಸರ್ಕಾರವನ್ನು ರಚಿಸುವ ನಿಮಿಷದಲ್ಲಿ ಭರವಸೆಗಳನ್ನು ಮುರಿದು, ನಿಮ್ಮ ಪಕ್ಷಗಳನ್ನೂ ಒಡೆಯಲು ಪ್ರಯತ್ನಿಸುತ್ತಾರೆ” ಎಂದು ಅವರು ಟಿಡಿಪಿ ಮತ್ತು ಜೆಡಿಯು ಪಕ್ಷಗಳನ್ನು ಟ್ಯಾಗ್ ಮಾಡಿದ್ದಾರೆ.

ಇಂದು ಬೆಳಿಗ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ, ಭಾನುವಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ನರೇಂದ್ರ ಮೋದಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಹೊಸದಾಗಿ ಚುನಾಯಿತ ಸಂಸದರ ಸಭೆ ನಡೆಸಿತು.

ದೆಹಲಿಯಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಮತ್ತು ಎಚ್‌ಎಎಂ (ಎಸ್) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಸೇರಿದಂತೆ ಬಿಜೆಪಿ ಮಿತ್ರಪಕ್ಷಗಳು ಮೋದಿಯನ್ನು ಎನ್‌ಡಿಎ ಬಣದ ನಾಯಕರಾಗಿ ಆಯ್ಕೆ ಮಾಡುವ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅವರ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ.

“ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಸಮತೋಲನಗೊಳಿಸುವುದು ಸಮಾನಾಂತರವಾಗಿ ಸಾಗಬೇಕು ಮತ್ತು ಸಮಾಜದ ಎಲ್ಲಾ ಸ್ತರಗಳ ಸಮಗ್ರ ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ, “ಮೋದಿ ಭಾರತವನ್ನು ದೊಡ್ಡ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತಾರೆ ಮತ್ತು ನಾವು ಪ್ರತಿದಿನ ಅವರನ್ನು ಪೂರ್ಣ ಹೃದಯದಿಂದ ಬೆಂಬಲಿಸುತ್ತೇವೆ ಎಂದು ನಮಗೆ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಬಿಜೆಪಿಗೆ ಸರ್ಕಾರ ರಚಿಸಲು ಬೇಕಾದ ಬಹುಮತದ ಕೊರತೆಯಿಂದಾಗಿ, ಟಿಡಿಪಿ ಮತ್ತು ಜೆಡಿಯು ಬೆಂಬಲವು ನರೇಂದ್ರ ಮೋದಿಯವರ ಮೂರನೇ ಅವಧಿಗೆ ಪ್ರಧಾನಿಯಾಗಲು ನಿರ್ಣಾಯಕವಾಗಿದೆ. ಎನ್‌ಡಿಎ 293 ಸ್ಥಾನಗಳನ್ನು ಹೊಂದಿದೆ, ಬಿಜೆಪಿಯು 240 ಸ್ಥಾನಗಳನ್ನು ಪಡೆದುಕೊಂಡಿದೆ. ಜೆಡಿಯು 12 ಸಂಸದರನ್ನು ಹೊಂದಿದೆ, ಇದು 16 ಸಂಸದರನ್ನು ಹೊಂದಿರುವ ಟಿಡಿಪಿ ನಂತರ ಎರಡನೇ ಅತಿದೊಡ್ಡ ಬಿಜೆಪಿ ಮಿತ್ರ ಪಕ್ಷವಾಗಿದೆ.

ಇದನ್ನೂ ಓದಿ; ಹಳೆ ಸಂಸತ್ ಭನದಲ್ಲಿ ಎನ್‌ಡಿಎ ನಾಯಕರ ಸಭೆ; ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...