Homeಮುಖಪುಟ'ಸ್ಪೀಕರ್ ಸ್ಥಾನವನ್ನು ಪಡೆಯಿರಿ..'; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

‘ಸ್ಪೀಕರ್ ಸ್ಥಾನವನ್ನು ಪಡೆಯಿರಿ..’; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

- Advertisement -
- Advertisement -

ಶಿವಸೇನಾ (ಯುಬಿಟಿ) ಪಕ್ಷವು ಎನ್‌ಡಿಎಗೆ ಮರಳಲಿದೆ ಎಂಬ ಊಹಾಪೋಗಳ ನಡುವೆಯೆ, ಯುವ ನಾಯಕ ಆದಿತ್ಯ ಠಾಕ್ರೆ ಅವರು ಕೇಂದ್ರದಲ್ಲಿ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿರುವ ಬಿಜೆಪಿ ಮಿತ್ರಪಕ್ಷಗಳಿಗೆ ತಮ್ಮ ಸಲಹೆಯನ್ನು ನೀಡಿದ್ದು, ‘ಸ್ಪೀಕರ್ ಸ್ಥಾನ ಪಡೆಯಿರಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಜೆಪಿ ಹೊಸದಾಗಿ ನೆನಪಿಸಿಕೊಳ್ಳುತ್ತಿರುವ ಎನ್‌ಡಿಎ ಸಂಭಾವ್ಯ ಮಿತ್ರಪಕ್ಷಗಳಿಗೆ ಒಂದು ವಿನಮ್ರ ಸಲಹೆ, ಸ್ಪೀಕರ್ ಹುದ್ದೆಯನ್ನು ಪಡೆಯಿರಿ. ಬಿಜೆಪಿಯ ತಂತ್ರಗಳನ್ನು ಅನುಭವಿಸಿದ್ದೇವೆ, ಅವರು ನಿಮ್ಮೊಂದಿಗೆ ಸರ್ಕಾರವನ್ನು ರಚಿಸುವ ನಿಮಿಷದಲ್ಲಿ ಭರವಸೆಗಳನ್ನು ಮುರಿದು, ನಿಮ್ಮ ಪಕ್ಷಗಳನ್ನೂ ಒಡೆಯಲು ಪ್ರಯತ್ನಿಸುತ್ತಾರೆ” ಎಂದು ಅವರು ಟಿಡಿಪಿ ಮತ್ತು ಜೆಡಿಯು ಪಕ್ಷಗಳನ್ನು ಟ್ಯಾಗ್ ಮಾಡಿದ್ದಾರೆ.

ಇಂದು ಬೆಳಿಗ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ, ಭಾನುವಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ನರೇಂದ್ರ ಮೋದಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಹೊಸದಾಗಿ ಚುನಾಯಿತ ಸಂಸದರ ಸಭೆ ನಡೆಸಿತು.

ದೆಹಲಿಯಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಮತ್ತು ಎಚ್‌ಎಎಂ (ಎಸ್) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಸೇರಿದಂತೆ ಬಿಜೆಪಿ ಮಿತ್ರಪಕ್ಷಗಳು ಮೋದಿಯನ್ನು ಎನ್‌ಡಿಎ ಬಣದ ನಾಯಕರಾಗಿ ಆಯ್ಕೆ ಮಾಡುವ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅವರ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ.

“ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಸಮತೋಲನಗೊಳಿಸುವುದು ಸಮಾನಾಂತರವಾಗಿ ಸಾಗಬೇಕು ಮತ್ತು ಸಮಾಜದ ಎಲ್ಲಾ ಸ್ತರಗಳ ಸಮಗ್ರ ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ, “ಮೋದಿ ಭಾರತವನ್ನು ದೊಡ್ಡ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತಾರೆ ಮತ್ತು ನಾವು ಪ್ರತಿದಿನ ಅವರನ್ನು ಪೂರ್ಣ ಹೃದಯದಿಂದ ಬೆಂಬಲಿಸುತ್ತೇವೆ ಎಂದು ನಮಗೆ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಬಿಜೆಪಿಗೆ ಸರ್ಕಾರ ರಚಿಸಲು ಬೇಕಾದ ಬಹುಮತದ ಕೊರತೆಯಿಂದಾಗಿ, ಟಿಡಿಪಿ ಮತ್ತು ಜೆಡಿಯು ಬೆಂಬಲವು ನರೇಂದ್ರ ಮೋದಿಯವರ ಮೂರನೇ ಅವಧಿಗೆ ಪ್ರಧಾನಿಯಾಗಲು ನಿರ್ಣಾಯಕವಾಗಿದೆ. ಎನ್‌ಡಿಎ 293 ಸ್ಥಾನಗಳನ್ನು ಹೊಂದಿದೆ, ಬಿಜೆಪಿಯು 240 ಸ್ಥಾನಗಳನ್ನು ಪಡೆದುಕೊಂಡಿದೆ. ಜೆಡಿಯು 12 ಸಂಸದರನ್ನು ಹೊಂದಿದೆ, ಇದು 16 ಸಂಸದರನ್ನು ಹೊಂದಿರುವ ಟಿಡಿಪಿ ನಂತರ ಎರಡನೇ ಅತಿದೊಡ್ಡ ಬಿಜೆಪಿ ಮಿತ್ರ ಪಕ್ಷವಾಗಿದೆ.

ಇದನ್ನೂ ಓದಿ; ಹಳೆ ಸಂಸತ್ ಭನದಲ್ಲಿ ಎನ್‌ಡಿಎ ನಾಯಕರ ಸಭೆ; ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...