Homeಮುಖಪುಟ'ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ' | ಸಿಧು ಪ್ರತಿಪಾದನೆ ನಿರಾಕರಿಸಿದ ಕ್ಯಾನ್ಸರ್ ತಜ್ಞರು

‘ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ’ | ಸಿಧು ಪ್ರತಿಪಾದನೆ ನಿರಾಕರಿಸಿದ ಕ್ಯಾನ್ಸರ್ ತಜ್ಞರು

- Advertisement -
- Advertisement -

ಬೇವು, ನಿಂಬೆ ರಸ, ಅರಿಶಿನ ಮತ್ತು ದಾಲ್ಚಿನ್ನಿಯಂತಹ ಪದಾರ್ಥಗಳನ್ನು ಸೇವಿಸಿದ ಕಾರಣಕ್ಕೆ ತಮ್ಮ ಪತ್ನಿಯ ಸ್ತನ ಕ್ಯಾನ್ಸರ್ ಗುಣವಾಗಿದೆ ಎಂದಿದ್ದ ಮಾಜಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಹೇಳಿಕೆಗೆ ಆಂಕೊಲಾಜಿಸ್ಟ್‌ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯವಾಗಿ ಸಾಬಿತಾಗದ ಪರಿಹಾರಗಳನ್ನು ಅವಲಂಬಿಸಬೇಡಿ ಎಂದು ದೇಶದ ಹಲವಾರು ಉನ್ನತ ವೈದ್ಯರು ಟಿಪ್ಪಣಿ ಬಿಡುಗಡೆ ಮಾಡಿದ್ದಾರೆ. ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ

ಕಳೆದ ವಾರ ಮಾಧ್ಯಮಗೋಷ್ಠಿಯಲ್ಲಿ ಸಿಧು ಈ ಹೇಳಿಕೆ ನೀಡಿದ್ದರು. ಇದರ ನಂತರ, ದೇಶದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಯಾಗಿರುವ ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ)ಯ 262 ಕ್ಕೂ ಹೆಚ್ಚು ಹಾಲಿ ಮತ್ತು ಮಾಜಿ ಆಂಕೊಲಾಜಿಸ್ಟ್‌ಗಳು ಸಿಧು ಅವರ ಪ್ರತಿಪಾದನೆಗೆ ಯಾವುದೇ ಆಧಾರಗಳಿಲ್ಲ ಎಂದು ಪ್ರತ್ಯೇಕ ಹೇಳಿಕೆಗಳಲ್ಲಿ ತಿಳಿಸಿದ್ದಾರೆ. ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಂಭವನೀಯ ಕ್ಯಾನ್ಸರ್‌ನ ಲಕ್ಷಣಗಳು ಕಂಡುಬಂದಲ್ಲಿ ಸೂಕ್ತ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿ. ಕ್ಯಾನ್ಸರ್ ರೋಗ ಆಗಿರುವುದು ಕಂಡುಬಂದರೆ, ತರಬೇತಿ ಪಡೆದ ವೈದ್ಯರು ಸಲಹೆ ನೀಡಿದ ಸಾಕ್ಷ್ಯ ಆಧಾರಿತ ಚಿಕಿತ್ಸೆಯನ್ನು ತೆಗೆದುಕೊಳ್ಳುವಂತೆ ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ” ಎಂದು ಟಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

“ಈ ಉತ್ಪನ್ನಗಳ ಬಗ್ಗೆ ಕೆಲವು ಸಂಶೋಧನೆಗಳು ನಡೆಯುತ್ತಿದೆ. ಅವುಗಳನ್ನು ಕ್ಯಾನ್ಸರ್ ವಿರೋಧಿ ಚಿಕಿತ್ಸೆಯಲ್ಲಿ ಬಳಸುವಂತೆ ಶಿಫಾರಸು ಮಾಡಲು ಯಾವುದೇ ವೈದ್ಯಕೀಯ ಆಧಾರ ಇಲ್ಲ. ಸಾಬೀತಾಗದ ಪರಿಹಾರಗಳನ್ನು ಅನುಸರಿಸುವ ಮೂಲಕ ರೋಗಿಗಳ ಚಿಕಿತ್ಸೆಯನ್ನು ವಿಳಂಬ ಮಾಡದಂತೆ ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ. ಅದರ ಬದಲಿಗೆ ವೈದ್ಯರನ್ನು ಸಂಪರ್ಕಿಸಿ, ಮೇಲಾಗಿ ಕ್ಯಾನ್ಸರ್ ತಜ್ಞರನ್ನು ಸಂಪರ್ಕಿಸಿ,” ಎಂದು ಟಿಎಂಸಿಯ ಹಳೆ ವಿದ್ಯಾರ್ಥಿಗಳ ಹೇಳಿಕೆಯು ಸಾರ್ವಜನಿಕರನ್ನು ಎಚ್ಚರಿಸಿದೆ.

ಸಕ್ಕರೆ, ಹಾಲಿನ ಉತ್ಪನ್ನಗಳು, ಸಂಸ್ಕರಿಸಿದ ಎಣ್ಣೆ, ಗೋಧಿ ಮತ್ತು ಸಂಸ್ಕರಿಸಿದ ಗೋಧಿ, ನಿಂಬೆ ರಸ, ಅರಿಶಿನ, ದಾಲ್ಚಿನ್ನಿ, ಬೇವಿನ ಎಲೆಗಳು, ಗೂಸ್್ಬೆರ್ರಿಸ್ ಮತ್ತು ಕ್ವಿನೋವಾ ಬಳಕೆ ಸೇರಿದಂತೆ ಆಹಾರದ ಬದಲಾವಣೆಗಳು ತಮ್ಮ ಪತ್ನಿ ನಾಲ್ಕನೇ ಹಂತದ ಕ್ಯಾನ್ಸರ್ ಅನ್ನು ಗುಣಪಡಿಸಿದೆ ಎಂದು ಸಿಧು ಈ ಹಿಂದೆ ಹೇಳಿದ್ದರು.

ತಮ್ಮ ಹೇಳಿಕೆಗಳನ್ನು ವಿರೋಧಿಸಿ ವೈದ್ಯಕೀಯ ಸಂಘಟನೆಗಳು ಮುನ್ನಲೆಗೆ ಬಂದ ನಂತರ ಸೋಮವಾರ (ನವೆಂಬರ್ 25) X ನಲ್ಲಿ ಸಿಧು ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಡಯಟ್ ಯೋಜನೆಯನ್ನು” ಚಿಕಿತ್ಸೆಯ ಅನುಕೂಲತೆಯಾಗಿ ನೋಡಬೇಕು ಮತ್ತು ವೈದ್ಯರೊಂದಿಗೆ ಸಮಾಲೋಚಿಸಿದ ನಂತರ ಅದನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ.

ಅದಾಗ್ಯೂ, ಸ್ವತಃ ವೈದ್ಯೆಯಾಗಿರುವ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರು ಆಹಾರದ ಬದಲಾವಣೆಯಿಂದ ನಾನು ಪ್ರಯೋಜನ ಪಡೆದಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...