Homeಮುಖಪುಟ'ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ' | ಸಿಧು ಪ್ರತಿಪಾದನೆ ನಿರಾಕರಿಸಿದ ಕ್ಯಾನ್ಸರ್ ತಜ್ಞರು

‘ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ’ | ಸಿಧು ಪ್ರತಿಪಾದನೆ ನಿರಾಕರಿಸಿದ ಕ್ಯಾನ್ಸರ್ ತಜ್ಞರು

- Advertisement -
- Advertisement -

ಬೇವು, ನಿಂಬೆ ರಸ, ಅರಿಶಿನ ಮತ್ತು ದಾಲ್ಚಿನ್ನಿಯಂತಹ ಪದಾರ್ಥಗಳನ್ನು ಸೇವಿಸಿದ ಕಾರಣಕ್ಕೆ ತಮ್ಮ ಪತ್ನಿಯ ಸ್ತನ ಕ್ಯಾನ್ಸರ್ ಗುಣವಾಗಿದೆ ಎಂದಿದ್ದ ಮಾಜಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಹೇಳಿಕೆಗೆ ಆಂಕೊಲಾಜಿಸ್ಟ್‌ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯವಾಗಿ ಸಾಬಿತಾಗದ ಪರಿಹಾರಗಳನ್ನು ಅವಲಂಬಿಸಬೇಡಿ ಎಂದು ದೇಶದ ಹಲವಾರು ಉನ್ನತ ವೈದ್ಯರು ಟಿಪ್ಪಣಿ ಬಿಡುಗಡೆ ಮಾಡಿದ್ದಾರೆ. ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ

ಕಳೆದ ವಾರ ಮಾಧ್ಯಮಗೋಷ್ಠಿಯಲ್ಲಿ ಸಿಧು ಈ ಹೇಳಿಕೆ ನೀಡಿದ್ದರು. ಇದರ ನಂತರ, ದೇಶದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಯಾಗಿರುವ ಟಾಟಾ ಮೆಮೋರಿಯಲ್ ಸೆಂಟರ್ (ಟಿಎಂಸಿ)ಯ 262 ಕ್ಕೂ ಹೆಚ್ಚು ಹಾಲಿ ಮತ್ತು ಮಾಜಿ ಆಂಕೊಲಾಜಿಸ್ಟ್‌ಗಳು ಸಿಧು ಅವರ ಪ್ರತಿಪಾದನೆಗೆ ಯಾವುದೇ ಆಧಾರಗಳಿಲ್ಲ ಎಂದು ಪ್ರತ್ಯೇಕ ಹೇಳಿಕೆಗಳಲ್ಲಿ ತಿಳಿಸಿದ್ದಾರೆ. ತಜ್ಞರೊಂದಿಗೆ ಚಿಕಿತ್ಸೆ ಪಡೆಯಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಂಭವನೀಯ ಕ್ಯಾನ್ಸರ್‌ನ ಲಕ್ಷಣಗಳು ಕಂಡುಬಂದಲ್ಲಿ ಸೂಕ್ತ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿ. ಕ್ಯಾನ್ಸರ್ ರೋಗ ಆಗಿರುವುದು ಕಂಡುಬಂದರೆ, ತರಬೇತಿ ಪಡೆದ ವೈದ್ಯರು ಸಲಹೆ ನೀಡಿದ ಸಾಕ್ಷ್ಯ ಆಧಾರಿತ ಚಿಕಿತ್ಸೆಯನ್ನು ತೆಗೆದುಕೊಳ್ಳುವಂತೆ ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ” ಎಂದು ಟಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

“ಈ ಉತ್ಪನ್ನಗಳ ಬಗ್ಗೆ ಕೆಲವು ಸಂಶೋಧನೆಗಳು ನಡೆಯುತ್ತಿದೆ. ಅವುಗಳನ್ನು ಕ್ಯಾನ್ಸರ್ ವಿರೋಧಿ ಚಿಕಿತ್ಸೆಯಲ್ಲಿ ಬಳಸುವಂತೆ ಶಿಫಾರಸು ಮಾಡಲು ಯಾವುದೇ ವೈದ್ಯಕೀಯ ಆಧಾರ ಇಲ್ಲ. ಸಾಬೀತಾಗದ ಪರಿಹಾರಗಳನ್ನು ಅನುಸರಿಸುವ ಮೂಲಕ ರೋಗಿಗಳ ಚಿಕಿತ್ಸೆಯನ್ನು ವಿಳಂಬ ಮಾಡದಂತೆ ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ. ಅದರ ಬದಲಿಗೆ ವೈದ್ಯರನ್ನು ಸಂಪರ್ಕಿಸಿ, ಮೇಲಾಗಿ ಕ್ಯಾನ್ಸರ್ ತಜ್ಞರನ್ನು ಸಂಪರ್ಕಿಸಿ,” ಎಂದು ಟಿಎಂಸಿಯ ಹಳೆ ವಿದ್ಯಾರ್ಥಿಗಳ ಹೇಳಿಕೆಯು ಸಾರ್ವಜನಿಕರನ್ನು ಎಚ್ಚರಿಸಿದೆ.

ಸಕ್ಕರೆ, ಹಾಲಿನ ಉತ್ಪನ್ನಗಳು, ಸಂಸ್ಕರಿಸಿದ ಎಣ್ಣೆ, ಗೋಧಿ ಮತ್ತು ಸಂಸ್ಕರಿಸಿದ ಗೋಧಿ, ನಿಂಬೆ ರಸ, ಅರಿಶಿನ, ದಾಲ್ಚಿನ್ನಿ, ಬೇವಿನ ಎಲೆಗಳು, ಗೂಸ್್ಬೆರ್ರಿಸ್ ಮತ್ತು ಕ್ವಿನೋವಾ ಬಳಕೆ ಸೇರಿದಂತೆ ಆಹಾರದ ಬದಲಾವಣೆಗಳು ತಮ್ಮ ಪತ್ನಿ ನಾಲ್ಕನೇ ಹಂತದ ಕ್ಯಾನ್ಸರ್ ಅನ್ನು ಗುಣಪಡಿಸಿದೆ ಎಂದು ಸಿಧು ಈ ಹಿಂದೆ ಹೇಳಿದ್ದರು.

ತಮ್ಮ ಹೇಳಿಕೆಗಳನ್ನು ವಿರೋಧಿಸಿ ವೈದ್ಯಕೀಯ ಸಂಘಟನೆಗಳು ಮುನ್ನಲೆಗೆ ಬಂದ ನಂತರ ಸೋಮವಾರ (ನವೆಂಬರ್ 25) X ನಲ್ಲಿ ಸಿಧು ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಡಯಟ್ ಯೋಜನೆಯನ್ನು” ಚಿಕಿತ್ಸೆಯ ಅನುಕೂಲತೆಯಾಗಿ ನೋಡಬೇಕು ಮತ್ತು ವೈದ್ಯರೊಂದಿಗೆ ಸಮಾಲೋಚಿಸಿದ ನಂತರ ಅದನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ.

ಅದಾಗ್ಯೂ, ಸ್ವತಃ ವೈದ್ಯೆಯಾಗಿರುವ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರು ಆಹಾರದ ಬದಲಾವಣೆಯಿಂದ ನಾನು ಪ್ರಯೋಜನ ಪಡೆದಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...