Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...