Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರೀನ್ ಕೇವ್ ನಿಂದ ಪ್ರವಾಸಿಗರನ್ನು ದೂರವಿಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಪರಿಸರವಾದಿಗಳ ಎಚ್ಚರಿಕೆ

ರಾಯ್‌ಪುರ: ಒಂದು ಕಾಲದಲ್ಲಿ ಮಾವೋವಾದಿ ಪೀಡಿತ ಬಸ್ತಾರ್ ಜಿಲ್ಲೆಯ ಕಾಂಗರ್ ಕಣಿವೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಅಪರೂಪದ ಮತ್ತು ಪರಿಸರ ಸೂಕ್ಷ್ಮ 'ಹಸಿರು ಗುಹೆ'ಯನ್ನು ಪ್ರವಾಸಿಗರಿಗೆ ತೆರೆಯಲು ಛತ್ತೀಸ್‌ಗಢ ಸರ್ಕಾರ ನಿರ್ಧರಿಸಿದ್ದು, ಈ ಕ್ರಮಕ್ಕೆ...

ಅಹಮದಾಬಾದ್: ಅಮೃತಸರದಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಭಾರೀ ಮೌಲ್ಯದ ಕೊಕೇನ್ ಜಾಲ ಪತ್ತೆ

ಅಹಮದಾಬಾದ್: ಅಮೃತಸರ-ಮುಂಬೈ ಗೋಲ್ಡನ್ ಟೆಂಪಲ್ ಮೇಲ್ ರೈಲಿನ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಮಿಜೋರಾಂ ಯುವಕನೊಬ್ಬ 2.19 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕೊಕೇನ್ ಮತ್ತು ಮೆಥಾಂಫೆಟಮೈನ್‌ನೊಂದಿಗೆ ಸಿಕ್ಕಿಬಿದ್ದ ನಂತರ ಬಹು ನಗರ,...

ನಿಲುವು ಬದಲಿಸಿದ ಸಿಪಿಐ(ಎಂ) : ವಿಎಸ್ ಅಚ್ಯುತಾನಂದನ್ ಅವರ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಲು ನಿರ್ಧಾರ

ತನ್ನ ದೀರ್ಘಕಾಲದ ಸೈದ್ಧಾಂತಿಕ ನಿಲುವಿಗಿಂತ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಿಪಿಐ(ಎಂ), ಪಕ್ಷದ ದಂತಕಥೆ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ ಅವರಿಗೆ ಮರಣೋತ್ತರವಾಗಿ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರ್ಧರಿಸಿದೆ. ಕಮ್ಯುನಿಸ್ಟರು ಆಡಳಿತ ಅಥವಾ...

2024ರ ಪ್ರತಿಭಟನೆ ದಮನ ಪ್ರಕರಣ: ಬಾಂಗ್ಲಾದೇಶದ ಮಾಜಿ ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್‌ಗೆ ಮರಣದಂಡನೆ

ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಳ್ವಿಕೆಯಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶ ನ್ಯಾಯಾಲಯವು ಸೋಮವಾರ ಢಾಕಾದ ಮಾಜಿ ಪೊಲೀಸ್ ಮುಖ್ಯಸ್ಥ ಮತ್ತು ಇಬ್ಬರು ಹಿರಿಯ ಸಹೋದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ.  ರಾಜಧಾನಿಯ...

ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 'ಪದ್ಮ ಪ್ರಶಸ್ತಿ'ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ...

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...