Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...