Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...