Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪ್ರಸ್‌ಮೀಟ್

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...