Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....