Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...