Homeಮುಖಪುಟಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ: ರಾಹುಲ್‍ ಗಾಂಧಿಗೆ ಮನವಿ ಮಾಡಿದ ಸಚಿವ ರವಿಶಂಕರ್ ಪ್ರಸಾದ್‍

'ರಾಹುಲ್ ಗಾಂಧಿ ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಕೇಂದ್ರದ ಲಸಿಕೆ ನೀತಿಯ ಬಗ್ಗೆ ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೋಮವಾರ ಮನವಿ ಮಾಡಿದ್ದಾರೆ.

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ” ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಹಾರದ ಪಾಟ್ನಾದಲ್ಲಿ ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

‘ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ಹೇಳಿದೆ.

ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ  ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ” ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ.

ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡರು. “ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಕ್ಸಿನೇಷನ್ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ವಕ್ತಾರರು ಮತ್ತು ಸಚಿವರು, ‘ನಾನು ಯಾಕೆ ಲಸಿಕೆ ತೆಗೆದುಕೊಳ್ಳಲಿಲ್ಲ ಮತ್ತು ರಾಹುಲ್, ಪ್ರಿಯಾಂಕಾ ಅವರಿಗೆ ಭಾರತೀಯ ಲಸಿಕೆಗಳ ಬಗ್ಗೆ ನಂಬಿಕೆ ಇಲ್ಲ’ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅವರು ಸತ್ಯಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ವಾದ್ರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಸೋಂಕು ತಗುಲಿ ನಂತರ ಗುಣಮುಖರಾದರು. ಈಗ ಅವರು ಲಸಿಕೆ ಪಡೆಯಲು ನಿಗದಿತ ಸಮಯಕ್ಕಾಗಿ ಕಾಯಬೇಕಾಗಿದೆ. ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಲಸಿಕೆ ತೆಗೆದುಕೊಂಡಿದ್ದಾರೆ’ ಎಂದು  ರಾಬರ್ಟ್ ವಾರ್ದಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧವೇ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...