Homeಮುಖಪುಟ‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

- Advertisement -
- Advertisement -

ಕೇರಳದಲ್ಲಿ ನಡೆಯುತ್ತಿರುವ ಸರ್ಕಾರ ವರ್ಸಸ್‌ ರಾಜ್ಯಪಾಲರ ಸಂಘರ್ಷದ ಸರಣಿ ಮುಂದುವರೆದಿದ್ದು, ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಎರಡು ಮಲಯಾಳಂ ಸುದ್ದಿ ವಾಹಿನಿಗಳ ಪತ್ರಕರ್ತರು ಹೊರ ಹೋಗುವವರೆಗೂ ಗೋಷ್ಠಿಯಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ನಡೆದಿದೆ.

ಆರಿಫ್ ಖಾನ್ ಅವರು ಇಂದು ಕೊಚ್ಚಿಯ ಎರ್ನಾಕುಲಂ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಅವರು ಕೈರಲಿ ಟಿವಿ ಮತ್ತು ಮೀಡಿಯಾ ಒನ್ ಚಾನೆಲ್ ಅನ್ನು ಹೊರಹೋಗುವಂತೆ ಆಕ್ರೋಶಭರಿತರಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೈರಲಿ ಟಿವಿ ಸಿಪಿಐಎಂ ಬೆಂಬಲಿತವಾಗಿದ್ದು, ಮೀಡಿಯಾ ಒನ್‌ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಚಾನೆಲ್ ಆಗಿದೆ. ಈ ವರ್ಷದ ಆರಂಭದಲ್ಲಿ “ಭದ್ರತಾ ಕಾಳಜಿ” ಆರೋಪದಲ್ಲಿ ಒಕ್ಕೂಟ ಸರ್ಕಾರವು ಮೀಡಿಯಾ ಒನ್‌ ಪ್ರಸಾರ ಮಾಡುವುದನ್ನು ನಿರ್ಬಂಧಿಸಿತ್ತು.

ಇದನ್ನೂ ಓದಿ: ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ಮೈಕ್ ಮತ್ತು ಕ್ಯಾಮೆರಾಗಳನ್ನು ಹಿಡಿದಿದ್ದ ಪತ್ರಕರ್ತರ ಮಧ್ಯೆ ನಿಂತಿದ್ದ ಆರೀ‌ಫ್‌ ಖಾನ್, “ನಾನು ಕೈರಾಲಿ ಮತ್ತು ಮೀಡಿಯಾ ಒನ್‌ ನೊಂದಿಗೆ ಮಾತನಾಡುವುದಿಲ್ಲ … ಒಂದು ವೇಳೆ ಇದ್ದರೆ ನಾನು ಹೊರನಡೆಯುತ್ತೇನೆ. ಇಲ್ಲಿ ಕೈರಳಿ ಮತ್ತು ಮೀಡಿಯಾ ಒನ್‌ ಇಲ್ಲ ಎಂದು ನಾನು ಭಾವಿಸುತ್ತೇನೆ. ಈ ಚಾನೆಲ್‌ಗಳ ಯಾವುದಾದರೂ ಇಲ್ಲಿ ಇದ್ದಾರೆಯೆ?” ಎಂದು ಅವರು ಪ್ರಶ್ನಿಸಿದ್ದಾರೆ. ಎಂದು ಮೀಡಿಯಾ ಒನ್ ಇದೆಯೇ?”

ಈ ವೇಳೆ ಅಲ್ಲಿದ್ದ ಚಾನೆಲ್‌ನ ಪತ್ರಕರ್ತರೊಬ್ಬರು,“ಹೌದು, ಸರ್” ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಆರಿಫ್‌ ಖಾನ್‌, “ನಾನು ನಿಮ್ಮೊಂದಿಗೆ ಮಾತನಾಡಲು ಬಯಸುವುದಿಲ್ಲ. ಗೆಟ್‌ ಔಟ್‌, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಆಕ್ರೋಶ ಭರಿತರಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

“ನಾನು ಕೈರಾಲಿಯೊಂದಿಗೆ ಮಾತನಾಡುವುದಿಲ್ಲ. ದಯವಿಟ್ಟು ಹೊರಟುಹೋಗಿ. ನಾನು ಮೀಡಿಯಾ ಒನ್ ಜೊತೆ ಮಾತನಾಡುವುದಿಲ್ಲ…ಈ ಬಗ್ಗೆ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಕಳೆದ 25 ದಿನಗಳಿಂದ ನಾನು ಪದೇ ಪದೇ ಇದನ್ನು ಹೇಳುತ್ತಿದ್ದೇನೆ. ನಾನು ದೂರ ಹೋಗಬೇಕೆಂದು ನೀವು ಬಯಸಿದರೆ, ನಾನು ಹೋಗುತ್ತೇನೆ. ನಾನು ಈ ಬಗ್ಗೆ ವಾದ ಮಾಡಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಕಾಂಗ್ರೆಸ್ ಬೆಂಬಲಿತ ಟಿವಿ ಚಾನೆಲ್‌ ‘ಜೈಹಿಂದ್‌’ ಸುದ್ದಿ ವಾಹಿನಿಗೆ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್‌ ಹೇಳಿದ್ದಾರೆ.

ಕಳೆದ ತಿಂಗಳು, ಅವರು ನಾಲ್ಕು ಸುದ್ದಿ ವಾಹಿನಿಗಳಾದ ಕೈರಾಲಿ, ಮೀಡಿಯಾ ಒನ್, ಜೈ ಹಿಂದ್ ಮತ್ತು ರಿಪೋರ್ಟರ್ ಟಿವಿಯನ್ನು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದರು.

2019ರ ಕಾರ್ಯಕ್ರಮವೊಂದರಲ್ಲಿ ಅವಮಾನಿಸಿದ್ದಾಗಿ ಆರೋಪಿಸಿರುವುದರಿಂದ ಹಿಡಿದು ಉಪಕುಲಪತಿಗಳ ನೇಮಕದ ವರೆಗೆ ಹಲವಾರು ಘಟನೆಗಳ ಕುರಿತು ಆರಿಫ್‌ ಖಾನ್ ಅವರು ಪ್ರಸ್ತುತ ರಾಜ್ಯದಲ್ಲಿ ಪಿಣರಾಯಿ ವಿಜಯನ್ ಸರ್ಕಾರದೊಂದಿಗೆ ಸಂಘರ್ಷದಲ್ಲಿದ್ದಾರೆ. ಕೇರಳ ಸರ್ಕಾರವು ಆರಿಫ್‌ ಖಾನ್ ಅವರು ಆರ್‌ಎಸ್‌ಎಸ್ ಕೈಯಲ್ಲಿರುವ ಸಾಧನ ಎಂದು ಆರೋಪಿಸಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಈ ನಡುವೆ, ರಾಜ್ಯಪಾಲರ ವರ್ತನೆಯನ್ನು ‘ನಿರಂಕುಶ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟವು, ಅವರ ವಿರುದ್ಧ ನಾಳೆ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...