Homeಮುಖಪುಟ‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

- Advertisement -
- Advertisement -

ಕೇರಳದಲ್ಲಿ ನಡೆಯುತ್ತಿರುವ ಸರ್ಕಾರ ವರ್ಸಸ್‌ ರಾಜ್ಯಪಾಲರ ಸಂಘರ್ಷದ ಸರಣಿ ಮುಂದುವರೆದಿದ್ದು, ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಎರಡು ಮಲಯಾಳಂ ಸುದ್ದಿ ವಾಹಿನಿಗಳ ಪತ್ರಕರ್ತರು ಹೊರ ಹೋಗುವವರೆಗೂ ಗೋಷ್ಠಿಯಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ನಡೆದಿದೆ.

ಆರಿಫ್ ಖಾನ್ ಅವರು ಇಂದು ಕೊಚ್ಚಿಯ ಎರ್ನಾಕುಲಂ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಅವರು ಕೈರಲಿ ಟಿವಿ ಮತ್ತು ಮೀಡಿಯಾ ಒನ್ ಚಾನೆಲ್ ಅನ್ನು ಹೊರಹೋಗುವಂತೆ ಆಕ್ರೋಶಭರಿತರಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೈರಲಿ ಟಿವಿ ಸಿಪಿಐಎಂ ಬೆಂಬಲಿತವಾಗಿದ್ದು, ಮೀಡಿಯಾ ಒನ್‌ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಚಾನೆಲ್ ಆಗಿದೆ. ಈ ವರ್ಷದ ಆರಂಭದಲ್ಲಿ “ಭದ್ರತಾ ಕಾಳಜಿ” ಆರೋಪದಲ್ಲಿ ಒಕ್ಕೂಟ ಸರ್ಕಾರವು ಮೀಡಿಯಾ ಒನ್‌ ಪ್ರಸಾರ ಮಾಡುವುದನ್ನು ನಿರ್ಬಂಧಿಸಿತ್ತು.

ಇದನ್ನೂ ಓದಿ: ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ಮೈಕ್ ಮತ್ತು ಕ್ಯಾಮೆರಾಗಳನ್ನು ಹಿಡಿದಿದ್ದ ಪತ್ರಕರ್ತರ ಮಧ್ಯೆ ನಿಂತಿದ್ದ ಆರೀ‌ಫ್‌ ಖಾನ್, “ನಾನು ಕೈರಾಲಿ ಮತ್ತು ಮೀಡಿಯಾ ಒನ್‌ ನೊಂದಿಗೆ ಮಾತನಾಡುವುದಿಲ್ಲ … ಒಂದು ವೇಳೆ ಇದ್ದರೆ ನಾನು ಹೊರನಡೆಯುತ್ತೇನೆ. ಇಲ್ಲಿ ಕೈರಳಿ ಮತ್ತು ಮೀಡಿಯಾ ಒನ್‌ ಇಲ್ಲ ಎಂದು ನಾನು ಭಾವಿಸುತ್ತೇನೆ. ಈ ಚಾನೆಲ್‌ಗಳ ಯಾವುದಾದರೂ ಇಲ್ಲಿ ಇದ್ದಾರೆಯೆ?” ಎಂದು ಅವರು ಪ್ರಶ್ನಿಸಿದ್ದಾರೆ. ಎಂದು ಮೀಡಿಯಾ ಒನ್ ಇದೆಯೇ?”

ಈ ವೇಳೆ ಅಲ್ಲಿದ್ದ ಚಾನೆಲ್‌ನ ಪತ್ರಕರ್ತರೊಬ್ಬರು,“ಹೌದು, ಸರ್” ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಆರಿಫ್‌ ಖಾನ್‌, “ನಾನು ನಿಮ್ಮೊಂದಿಗೆ ಮಾತನಾಡಲು ಬಯಸುವುದಿಲ್ಲ. ಗೆಟ್‌ ಔಟ್‌, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಆಕ್ರೋಶ ಭರಿತರಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

“ನಾನು ಕೈರಾಲಿಯೊಂದಿಗೆ ಮಾತನಾಡುವುದಿಲ್ಲ. ದಯವಿಟ್ಟು ಹೊರಟುಹೋಗಿ. ನಾನು ಮೀಡಿಯಾ ಒನ್ ಜೊತೆ ಮಾತನಾಡುವುದಿಲ್ಲ…ಈ ಬಗ್ಗೆ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಕಳೆದ 25 ದಿನಗಳಿಂದ ನಾನು ಪದೇ ಪದೇ ಇದನ್ನು ಹೇಳುತ್ತಿದ್ದೇನೆ. ನಾನು ದೂರ ಹೋಗಬೇಕೆಂದು ನೀವು ಬಯಸಿದರೆ, ನಾನು ಹೋಗುತ್ತೇನೆ. ನಾನು ಈ ಬಗ್ಗೆ ವಾದ ಮಾಡಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಕಾಂಗ್ರೆಸ್ ಬೆಂಬಲಿತ ಟಿವಿ ಚಾನೆಲ್‌ ‘ಜೈಹಿಂದ್‌’ ಸುದ್ದಿ ವಾಹಿನಿಗೆ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್‌ ಹೇಳಿದ್ದಾರೆ.

ಕಳೆದ ತಿಂಗಳು, ಅವರು ನಾಲ್ಕು ಸುದ್ದಿ ವಾಹಿನಿಗಳಾದ ಕೈರಾಲಿ, ಮೀಡಿಯಾ ಒನ್, ಜೈ ಹಿಂದ್ ಮತ್ತು ರಿಪೋರ್ಟರ್ ಟಿವಿಯನ್ನು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದರು.

2019ರ ಕಾರ್ಯಕ್ರಮವೊಂದರಲ್ಲಿ ಅವಮಾನಿಸಿದ್ದಾಗಿ ಆರೋಪಿಸಿರುವುದರಿಂದ ಹಿಡಿದು ಉಪಕುಲಪತಿಗಳ ನೇಮಕದ ವರೆಗೆ ಹಲವಾರು ಘಟನೆಗಳ ಕುರಿತು ಆರಿಫ್‌ ಖಾನ್ ಅವರು ಪ್ರಸ್ತುತ ರಾಜ್ಯದಲ್ಲಿ ಪಿಣರಾಯಿ ವಿಜಯನ್ ಸರ್ಕಾರದೊಂದಿಗೆ ಸಂಘರ್ಷದಲ್ಲಿದ್ದಾರೆ. ಕೇರಳ ಸರ್ಕಾರವು ಆರಿಫ್‌ ಖಾನ್ ಅವರು ಆರ್‌ಎಸ್‌ಎಸ್ ಕೈಯಲ್ಲಿರುವ ಸಾಧನ ಎಂದು ಆರೋಪಿಸಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಈ ನಡುವೆ, ರಾಜ್ಯಪಾಲರ ವರ್ತನೆಯನ್ನು ‘ನಿರಂಕುಶ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟವು, ಅವರ ವಿರುದ್ಧ ನಾಳೆ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...