Homeಮುಖಪುಟಬಿಎಸ್‌ಎಫ್ ಕಾರ್ಯವ್ಯಾಪ್ತಿಯ ವಿಸ್ತರಣೆ ಮತ್ತು ಒಕ್ಕೂಟ ವ್ಯವಸ್ಥೆ

ಬಿಎಸ್‌ಎಫ್ ಕಾರ್ಯವ್ಯಾಪ್ತಿಯ ವಿಸ್ತರಣೆ ಮತ್ತು ಒಕ್ಕೂಟ ವ್ಯವಸ್ಥೆ

- Advertisement -
- Advertisement -

ಕೇಂದ್ರ ಸರ್ಕಾರವು ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿರುವ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆಯ (BSF) ಕಾರ್ಯಾಚರಣೆಯ ವ್ಯಾಪ್ತಿಯನ್ನು ಹೆಚ್ಚಿಸಿ 11.10.2021 ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳ ಮುಖಂಡರು ಈ ನಡೆಯನ್ನು ವಿರೋಧಿಸಿ ಈ ನಡೆಯನ್ನು ಅಸಂವಿಧಾನಿಕ ಎಂದು ಕರೆದಿದ್ದಾರೆ.

ಒಕ್ಕೂಟ ಸರ್ಕಾರದ ನೋಟಿಫಿಕೇಶನ್ ಏನು ಹೇಳುತ್ತದೆ?

ಗೃಹ ವ್ಯವಹಾರಗಳ ಸಚಿವಾಲಯವು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಅಂತಾರಾಷ್ಟ್ರೀಯ ಗಡಿಯಿಂದ ಬಿಎಸ್‌ಎಫ್‌ನ ಕಾರ್ಯವ್ಯಾಪ್ತಿಯನ್ನು 15 ಕಿ.ಮೀನಿಂದ 50 ಕಿ.ಮೀಗಳವರೆಗೆ ವಿಸ್ತರಿಸಿದೆ. ಆದರೆ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಗುಜರಾತ್‌ನಲ್ಲಿ ಬಿಎಸ್‌ಎಫ್‌ನ ಕಾರ್ಯವ್ಯಾಪ್ತಿಯನ್ನು 80 ಕಿ.ಮೀನಿಂದ 50 ಕಿ.ಮೀಗೆ ಇಳಿಸಿದೆ. ಇಲ್ಲಿ ಕಾರ್ಯವ್ಯಾಪ್ತಿ ಎಂದರೆ ಗಡಿಯಿಂದ 50 ಕಿ.ಮೀ ಪ್ರದೇಶದೊಳಗೆ ಶೋಧನೆ ನಡೆಸುವ, ವಶಪಡಿಸಿಕೊಳ್ಳುವ ಮತ್ತು ಬಂಧಿಸುವ ಅಧಿಕಾರ ಬಿಎಸ್‌ಎಫ್‌ಗೆ ಇರುತ್ತದೆ. 2021ರ ಅಧಿಸೂಚನೆಯು 03.07.2014ರ ಅಧಿಸೂಚನೆಯ ತಿದ್ದುಪಡಿಯಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ತೀವ್ರವಾಗಿ ವಿರೋಧಿಸಿವೆ. ಇದು ಒಕ್ಕೂಟ ವ್ಯವಸ್ಥೆ ಮೇಲಿನ ವಿಚಾರಹೀನ ದಾಳಿ ಎಂದು ಕರೆದಿವೆ.

ಈ ನಿರ್ಧಾರದಿಂದ ತೊಂದರೆಯೇನು?

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದಾದ ಬಿಎಸ್‌ಎಫ್‌ಅನ್ನು 1965ರಲ್ಲಿ ಸ್ಥಾಪಿಸಲಾಯಿತು. ಕೇವಲ ರಾಜ್ಯ ಸಶಸ್ತ್ರ ಪೊಲೀಸ್ ಪಡೆಗಳು ಅಂತಾರಾಷ್ಟ್ರೀಯ ಗಡಿಗಳನ್ನು ರಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತು ಕೇಂದ್ರ ಸರ್ಕಾರ, ವಿಶೇಷ ಕೇಂದ್ರೀಕೃತ ನಿಯಂತ್ರಿತ ಪಡೆಯ ಅಗತ್ಯವಿದೆ ಎಂದು ಬಿಎಸ್‌ಎಫ್‌ಅನ್ನು ಸ್ಥಾಪಿಸಿತು. ಬಿಎಸ್‌ಎಫ್ ಪ್ರಾರಂಭವಾದಾಗಿನಿಂದಲೂ ಕೇಂದ್ರ ನಿಯಂತ್ರಿಸುವ ವಿಶೇಷ ಪಡೆ ಅದು ಎಂಬುದು ಅದರ ಮುಖ್ಯ ಅಂಶವಾಗಿತ್ತು. ಆದರೂ 2011ರ ತಿದ್ದುಪಡಿ ವಿಧೇಯಕವು ಭಾರತದ ಗಡಿ ಅಥವಾ ಅದರ ಪಕ್ಕದ ಪ್ರದೇಶಗಳನ್ನು ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಬಿಎಸ್‌ಎಫ್ ನಿಯೋಜನೆಗಾಗಿ ಪೋಷಕ ಕಾಯಿದೆಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಿತು. ಮಸೂದೆಯನ್ನು ಅಂಗೀಕರಿಸದಿದ್ದರೂ, ಈ ಹಿಂದೆ ಕೂಡ ಬಿಎಸ್‌ಎಫ್‌ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಉದ್ದೇಶವನ್ನು ಕೇಂದ್ರ ಸರ್ಕಾರಗಳು ಹೊಂದಿದ್ದವು ಎಂಬುದನ್ನು ನಾವು ಗಮನಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ಬಿಎಸ್‌ಎಫ್‌ಗೆ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸುವುದನ್ನು ನಾವು ಗಮನಿಸಬೇಕು. ಅದರ ಪ್ರಮಾಣ ಎಷ್ಟೇ ಇರಲಿ ಮತ್ತು ಅದು ಅಷ್ಟು ಗಮನೀಯವಲ್ಲದ್ದಾಗಿದ್ದರೂ, ಭಾರತದ ರಾಜ್ಯಗಳಿಗೆ ಅದು ಅಶುಭವಾಗಿ ಪರಿಣಮಿಸಬಹುದು. ಇದರಿಂದ ರಾಜ್ಯಗಳ ಸಾರ್ವಭೌಮತ್ವಕ್ಕೆ ಧಕ್ಕೆ ಬರುವುದರ ಜೊತೆಗೆ ಆ ಪ್ರದೇಶಗಳಲ್ಲಿ ಮಿಲಟರೀಕರಣ ಹೆಚ್ಚುತ್ತದೆ ಎಂಬುದು ಪ್ರಜಾತಂತ್ರವಾದಿಗಳ ಚಿಂತೆಯಾಗಿದೆ.

ಗಡಿ ಭದ್ರತಾ ಪಡೆ ಕಾಯ್ದೆ 1968 ಏನು ಹೇಳುತ್ತದೆ?

ಕಾಯಿದೆಯ ಸೆಕ್ಷನ್ 139 (1) ಕೇಂದ್ರ ಸರ್ಕಾರಕ್ಕೆ ಅಧಿಕೃತ ಗೆಜೆಟ್‌ನಲ್ಲಿನ ಆದೇಶದ ಮೂಲಕ 1967ರ ಪಾಸ್ಪೋರ್ಟ್ ಕಾಯ್ದೆ, 1946ರ ವಿದೇಶಿಯರ ಕಾಯಿದೆ, 1947ರ ವಿದೇಶಿ ವಿನಿಮಯ ನಿಯಂತ್ರಣ ಕಾಯಿದೆಯಂತಹ ಶಾಸನಗಳಿಗೆ ಸಂಬಂಧಿಸಿದಂತೆ ಬಿಎಸ್‌ಎಫ್‌ನ ಯಾವುದೇ ಸದಸ್ಯ ನೇರವಾಗಿ ಅಧಿಕಾರ ಅಥವಾ ಕರ್ತವ್ಯ ಚಲಾಯಿಸುವಂತೆ ನಿರ್ದೇಶಿಸುತ್ತದೆ. ಅಂತಹ ಆದೇಶವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಬೇಕು ಎಂದು ಈ ನಿಬಂಧನೆಯು ಆದೇಶಿಸುತ್ತದೆ.

ಸೆಕ್ಷನ್ 139ರ ಅಡಿಯಲ್ಲಿನ ನಿಬಂಧನೆಗಳು ಈ ಪಡೆಗಳ ಅಧಿಕಾರವನ್ನು ವಿಸ್ತರಿಸುವ ಮೊದಲು ರಾಜ್ಯಗಳೊಂದಿಗೆ ಸಮಾಲೋಚಿಸುವುದು ಶಾಸನಬದ್ಧ ಅಗತ್ಯವೆಂದು ಮಾಡಿಲ್ಲ ಎಂಬುದನ್ನು ನಾವು ಮುಖ್ಯವಾಗಿ ಗಮನಿಸಬೇಕು. ಬದಲಿಗೆ ಈ ಕಾಯ್ದೆ ’ಕಾನೂನು ಮತ್ತು ಸುವ್ಯವಸ್ಥೆಗೆ’ ಸಂಬಂಧಿಸಿದ ವಿಷಯಗಳ ಮೇಲೆ ಕಾನೂನು ರೂಪಿಸುವ ರಾಜ್ಯಗಳ ಅಧಿಕಾರವನ್ನು ನಿರ್ಬಂಧಿಸುತ್ತದೆ ಎಂದು ವಾದಿಸಬಹುದು. ಕೇಂದ್ರವು ಆದೇಶಗಳನ್ನು ಅಂಗೀಕರಿಸುವ ಮೊದಲು ಸಂಬಂಧಿತ ರಾಜ್ಯದೊಂದಿಗೆ ಸಮಾಲೋಚನೆ ಮಾಡುವ ಅಗತ್ಯವಿಲ್ಲ ಎಂದಿರುವುದರಿಂದ ಈ ಕಾಯ್ದೆಯನ್ನು ಮರುಪರಿಶೀಲಿಸಬೇಕೆಂದು ಬಲವಾಗಿ ಒತ್ತಾಯಿಸಬೇಕಿದೆ.

ಒಕ್ಕೂಟ ವ್ಯವಸ್ಥೆಯ ಮೂಲ ರಚನೆ

ಸಂವಿಧಾನದ ಭಾಗ IX (ಆರ್ಟಿಕಲ್ 245-263) ಕೇಂದ್ರ ಹಾಗೂ ರಾಜ್ಯಗಳ ಸಂಬಂಧಗಳ ಬಗ್ಗೆ ವ್ಯವಹರಿಸುತ್ತದೆ ಮತ್ತು ಶಾಸಕಾಂಗ ಮತ್ತು ಆಡಳಿತಾತ್ಮಕ ಸಂಬಂಧಗಳನ್ನು ಅದು ಒಳಗೊಂಡಿದೆ. 246ನೇ ವಿಧಿಯು ಕೇಂದ್ರ ಮತ್ತು ರಾಜ್ಯಗಳ ನಡುವೆ ಶಾಸಕಾಂಗ ಅಧಿಕಾರಗಳ ವಿಭಜನೆಯನ್ನು ವರ್ಗೀಕರಿಸಿದೆ. ಸೆವೆಂತ್ ಶೆಡ್ಯೂಲ್ ಆ ರೀತಿಯಾಗಿ ಮೂರು ಪಟ್ಟಿ ಮಾಡುತ್ತದೆ: ಅವುಗಳೆಂದರೆ I. ಕೇಂದ್ರ ಪಟ್ಟಿ, II. ರಾಜ್ಯ ಪಟ್ಟಿ ಮತ್ತು III. ಸಮವರ್ತಿ ಪಟ್ಟಿ.

ಇದರಲ್ಲಿ ಕೇಂದ್ರ ಪಟ್ಟಿಯ 20ಗೆ ಸೇರಿಸಿರುವ ಅಂಶಗಳನ್ನು ತುರ್ತುಪರಿಸ್ಥಿತಿಯ ಸಮಯದಲ್ಲಿ 42ನೇ ತಿದ್ದುಪಡಿಯ ಮೂಲಕ ತಂದಿರುವುದು ಆಸಕ್ತಿದಾಯಕವಾಗಿದೆ. ಅದು ಹೀಗೆ ಹೇಳುತ್ತದೆ: ಕೇಂದ್ರಕ್ಕೆ ಸೇರಿದ ಯಾವುದೇ ಸಶಸ್ತ್ರ ಪಡೆಯಾಗಲೀ ಅಥವಾ ಕೇಂದ್ರದ ನಿಯಂತ್ರಣದಲ್ಲಿರುವ ಯಾವುದೇ ಪಡೆಯಾಗಲೀ ಅಥವಾ ನಾಗರಿಕ ಅಧಿಕಾರದ ಸಹಾಯದಿಂದ ಇರುವ ಯಾವುದೇ ರಾಜ್ಯ ಪಡೆಯ ನಿಯೋಜನೆ; ನಿಯೋಜನೆಗೊಂಡ ಪಡೆಗಳ ಸದಸ್ಯರ ಅಧಿಕಾರಗಳು, ಕಾರ್ಯವ್ಯಾಪ್ತಿ, ಸವಲತ್ತುಗಳು ಮತ್ತು ಬಾಧ್ಯತೆಗಳು. ಸಾರ್ವಜನಿಕ ಸುವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥಗೆ ಸಂಬಂಧಿಸಿದಂತೆ ಕ್ರಮವಾಗಿ ರಾಜ್ಯಪಟ್ಟಿಯ ಎಂಟ್ರಿ 1 ಮತ್ತು 2.

ಈ ಹಿನ್ನೆಲೆಯಲ್ಲಿ 2021ರ ಅಧಿಸೂಚನೆ ಉಲ್ಲೇಖಿಸಿರುವಂತೆ ಪಾಸ್ಪೋರ್ಟ್ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆ ಸೇರಿ ಇತರ ಕಾಯ್ದೆಗಳ ಅಡಿಯಲ್ಲಿ ಸಾಮಾನ್ಯವಾಗಿ ಅಪರಾಧಗಳನ್ನು ತನಿಖೆ ಮಾಡಲು ಮತ್ತು ಕ್ರಮ ಕೈಗೊಳ್ಳಲು ಸ್ಥಳೀಯ ಪೊಲೀಸರಿಗೆ ಅಧಿಕಾರ ನೀಡಲಾಗಿದೆ ಎಂಬುದನ್ನು ನಾವು ಗಮನಿಸಬೇಕು. ಆದರೆ ಅದೇ ಅಧಿಸೂಚನೆಯು ಬಿಎಸ್‌ಎಫ್‌ಗೆ ಏಕಪಕ್ಷೀಯವಾಗಿ ಶೋಧಿಸುವ, ವಶಪಡಿಸಿಕೊಳ್ಳುವ ಮತ್ತು ಬಂಧಿಸುವ ಅನಿಯಂತ್ರಿತ ಅಧಿಕಾರ ನೀಡಿರುವುದು ವಿರೋಧಾಭಾಸವಾಗಿದೆ. ಒಟ್ಟಿನಲ್ಲಿ ರಾಜ್ಯಗಳು ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಪೊಲೀಸ್ ಸಂಬಂಧಿತ ವಿಷಯಗಳಲ್ಲಿ ತಮ್ಮ ಅಧಿಕಾರ ಕಳೆದುಕೊಂಡು ಕೇಂದ್ರದೆದುರು ಶರಣಾಗುವಂತೆ ಮಾಡಲಾಗುತ್ತಿದೆ. ಅಲ್ಲದೇ ಯಾವುದೇ ತನಿಖೆಗಳು ಕೇಂದ್ರದ ಅನುಕೂಲಕ್ಕೆ ತಕ್ಕಂತೆ ನಡೆಯಲು ಈ ಅಧಿಸೂಚನೆ ಕಾರಣವಾಗಲಿದೆ.

ಸಂವಿಧಾನ ಸಭೆಯ ಚರ್ಚೆಗಳಲ್ಲಿ ಭಾರತದಲ್ಲಿ ಫೆಡರಲಿಸಂನ ಸ್ವರೂಪವನ್ನು ವಿವರಿಸುವಾಗ, ಅಂಬೇಡ್ಕರ್ ಅವರು, “ಸಂವಿಧಾನವು ಒಕ್ಕೂಟ ಸಂವಿಧಾನ ಎಂದು ನಾವು ಹೇಳಿದಾಗ, ಇದರ ಅರ್ಥವೇನೆಂದರೆ, ಪ್ರಾಂತ್ಯಗಳು ತಮ್ಮ ಕ್ಷೇತ್ರಗಳಲ್ಲಿ ಸಾರ್ವಭೌಮವಾಗಿದ್ದು, ಸಂವಿಧಾನವು ನಿಯೋಜಿಸಲಾದ ಕ್ಷೇತ್ರಗಳಲ್ಲಿ ಮಾತ್ರ ಕೇಂದ್ರವು ಇರಬೇಕು” ಎಂದು ಹೇಳಿದ್ದಾರೆ. ಸಂವಿಧಾನವು ಪ್ರಾಂತ್ಯಗಳನ್ನು ಸಾರ್ವಭೌಮರನ್ನಾಗಿ ಮಾಡಿ ಮತ್ತು ಪ್ರಾಂತ್ಯದ ಶಾಂತಿ, ಸುವ್ಯವಸ್ಥೆ ಮತ್ತು ಉತ್ತಮ ಸರ್ಕಾರಕ್ಕಾಗಿ ಯಾವುದೇ ಕಾನೂನನ್ನು ಮಾಡಲು ಅವರಿಗೆ ಸಾಕಷ್ಟು ಅಧಿಕಾರಗಳನ್ನು ನೀಡಿರುವಾಗ ಕೇಂದ್ರದ ಮಧ್ಯಸ್ಥಿಕೆ ಅಥವಾ ಯಾವುದೇ ಇತರ ಪ್ರಾಧಿಕಾರದ ಹಸ್ತಕ್ಷೇಪವನ್ನು ನಿರ್ಬಂಧಿಸಲಾಗಿದೆ ಎಂದು ನಾವು ಪರಿಗಣಿಸಬೇಕು. ಏಕೆಂದರೆ ಅದು ಪ್ರಾಂತ್ಯಗಳ ಸಾರ್ವಭೌಮ ಅಧಿಕಾರದ ಮೇಲಿನ ಆಕ್ರಮಣವಾಗುತ್ತದೆ. ಈಗ ಕೇಂದ್ರ ಸರ್ಕಾರವು ರಾಜ್ಯಗಳ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವಾಗ, ’ಆಕ್ರಮಣವು ಹಠಾತ್, ಅನಿಯಂತ್ರಿತ ಮತ್ತು ಕಾನೂನಿನಿಂದ ಅನಧಿಕೃತವಾದ ಆಕ್ರಮಣವಾಗಿರಬಾರದು’ ಎಂಬ ಅಂಬೇಡ್ಕರ್ ಮಾತನ್ನು ನೆನಪಿಸಿಕೊಳ್ಳಬೇಕಿದೆ.

ಈಗ ಬಿಎಸ್‌ಎಫ್ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವ ಗೃಹ ಇಲಾಖೆಯ ನಿರ್ಧಾರವು ರಾಜ್ಯಗಳ ಸಾರ್ವಭೌಮತ್ವವನ್ನು ಮೊಟಕುಗೊಳಿಸುವ ಕೇಂದ್ರ ಸರ್ಕಾರದ ದೊಡ್ಡ ಹುನ್ನಾರದ ಭಾಗವಾಗಿದೆ. ಕೃಷಿ ಕಾಯ್ದೆಗಳಿಂದ ಹಿಡಿದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯವರೆಗೂ ಕೇಂದ್ರವು ರಾಜ್ಯಗಳ ವಿಷಯಗಳಲ್ಲಿ ಸ್ಪಷ್ಟವಾಗಿ ಆಕ್ರಮಣ ಮಾಡುತ್ತಿರುವುದನ್ನು ನಾವೆಲ್ಲರೂ ನೋಡಿದ್ದೇವೆ. ಕೇಂದ್ರ ಸರ್ಕಾರ ಸಂವಿಧಾನದ ಅಡಿಯಲ್ಲಿ ಭಾರತದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಯ ಹಿತದೃಷ್ಟಿಯಿಂದ ಕಾನೂನುಗಳನ್ನು ಮಾಡುವ ಅಧಿಕಾರ ಹೊಂದಿದೆ. ಆದರೆ ಅದನ್ನು ರಾಜ್ಯಗಳ ಸಾರ್ವಭೌಮತೆ ಮೇಲೆ ದಾಳಿ ಮಾಡುವ ನಿರಂಕುಶ ಸಾಧನಗಳಾಗಿ ಬಳಸಬಾರದು. ರಾಷ್ಟ್ರೀಯ ಸಾರ್ವಭೌಮತ್ವ, ಭದ್ರತೆ ಮತ್ತು ಸಮಗ್ರತೆಯ ವಿಚಾರಗಳು ಒಕ್ಕೂಟ ತತ್ವದಂತಹ ಇತರ ಪ್ರಮುಖ ಸಾಂವಿಧಾನಿಕ ತತ್ವಗಳಿಗೆ ಸಂಬಂಧಿಸಿರಬೇಕು ಮತ್ತು ಇತರ ಮೌಲ್ಯಗಳನ್ನು ಬುಡಮೇಲು ಮಾಡಿ ಅವುಗಳನ್ನು ಎತ್ತಿಹಿಡಿಯಲಾಗುವುದಿಲ್ಲ.

(ಕನ್ನಡಕ್ಕೆ): ಮುತ್ತುರಾಜು

ಪೂರ್ಣ ರವಿಶಂಕರ್

ಪೂರ್ಣ ರವಿಶಂಕರ್
ವಕೀಲರು ಮತ್ತು ಸಂಶೋಧಕರು, ಪರ್ಯಾಯ ಕಾನೂನು ವೇದಿಕೆ, ಬೆಂಗಳೂರು


ಇದನ್ನೂ ಓದಿ: ಜಮ್ಮು-ಕಾಶ್ಮೀರವನ್ನು ಬಿಜೆಪಿ ದಶಕಗಳಷ್ಟು ಹಿಂದಕ್ಕೆ ಒಯ್ದಿದೆ: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...