Homeಮುಖಪುಟಉತ್ತರ ಪ್ರದೇಶ: ಜಾಮಾ ಮಸೀದಿಗೆ ಭೇಟಿ ನೀಡದಂತೆ ಯತಿ ನರಸಿಂಗಾನಂದಗೆ ಜಿಲ್ಲಾಡಳಿತ ಸೂಚನೆ

ಉತ್ತರ ಪ್ರದೇಶ: ಜಾಮಾ ಮಸೀದಿಗೆ ಭೇಟಿ ನೀಡದಂತೆ ಯತಿ ನರಸಿಂಗಾನಂದಗೆ ಜಿಲ್ಲಾಡಳಿತ ಸೂಚನೆ

- Advertisement -
- Advertisement -

ಉತ್ತರ ಪ್ರದೇಶದ ಘಾಜಿಯಾಬಾದ್ ಆಡಳಿತವು ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರಿಗೆ ಜೂನ್ 17 ರಂದು ಜಾಮಾ ಮಸೀದಿಗೆ ಭೇಟಿ ನೀಡುವುದನ್ನು ರದ್ದುಗೊಳಿಸುವಂತೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವಾದಿತ ಹೇಳಿಕೆಗಳು ಮತ್ತು ದ್ವೇಷ ಭಾಷಣಗಳಿಗೆ ಹೆಸರಾಗಿರುವ ಯತಿ ನರಸಿಂಗಾನಂದ ಭೇಟಿ ಕೋಮು ಸೌಹಾರ್ದತೆಗೆ ಭಂಗ ತರಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಪ್ರವಾದಿ ಮುಹಮ್ಮದ್ ಬಗ್ಗೆ ಮುಸ್ಲಿಮರು ಏನು ಹೇಳುತ್ತಾರೆಂದು ತೋರಿಸಲು ಕುರಾನ್ ಮತ್ತು ಇಸ್ಲಾಮಿಕ್ ಇತಿಹಾಸದ ಪುಸ್ತಕಗಳೊಂದಿಗೆ ಜೂನ್ 17 ರಂದು ಜಾಮಾ ಮಸೀದಿಗೆ ಭೇಟಿ ನೀಡುವುದಾಗಿ ನರಸಿಂಹಾನಂದ ಸೋಮವಾರ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ದ್ವೇಷ ಭಾಷಣ: ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲು

“ಕುರಾನ್ ಮತ್ತು ಇಸ್ಲಾಮಿಕ್ ಇತಿಹಾಸದ ಪುಸ್ತಕಗಳೊಂದಿಗೆ ಜಾಮಾ ಮಸೀದಿಗೆ ಭೇಟಿ ನೀಡುವುದಾಗಿ ನರಸಿಂಹಾನಂದ್ ಅವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಂದೇಶವು ಕೋಮು ಸೌಹಾರ್ದತೆಗೆ ಭಂಗ ತರಬಹುದು ಎಂಬ ಕಾರಣಕ್ಕೆ ಜೂನ್ 7 ರಂದು ದಾಸ್ನಾ ದೇವಿ ಮಂದಿರದಲ್ಲಿರುವ ಅವರ ನಿವಾಸದಲ್ಲಿ ನರಸಿಂಹಾನಂದರಿಗೆ ನೋಟಿಸ್ ನೀಡಲಾಗಿದೆ. ಅವರಿಂದ ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನಾವು ಸ್ವೀಕರಿಸಿಲ್ಲ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ನರಸಿಂಗಾನಂದ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಕೆಯ ವಿರುದ್ಧ ಕ್ರಮ ಕೈಗೊಂಡವರು “ಇಸ್ಲಾಮಿಕ್ ಜಿಹಾದ್‌ಗೆ ಹೆದರುತ್ತಾರೆ” ಎಂದು ಹೇಳಿದ್ದರು.

ಇದರ ನಡುವೆ ಕೋಮು ಸೌಹಾರ್ದತೆ ಕದಡುವ ಹೇಳಿಕೆ ನೀಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಘಾಜಿಯಾಬಾದ್ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ನರಸಿಂಗಾನಂದರನ್ನು ಜನವರಿ 15 ರಂದು ಬಂಧಿಸಲಾಗಿತ್ತು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಸಭೆದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7 ರಂದು ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು.

ಆದರೂ, ಏಪ್ರಿಲ್ 17 ರಂದು, ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ದ್ವೇಷಪುರಿತ ಭಾಷಣ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ನೋಡಿಕೊಳ್ಳಲು ಹಿಂದೂಗಳು ಹೆಚ್ಚಿನ ಮಕ್ಕಳನ್ನು ಪಡೆಯಬೇಕೆಂದು ಹೇಳಿದ್ದರು.


ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...