Homeಕರ್ನಾಟಕಗಾಜಿಯಾಬಾದ್‌: ಏಪ್ರಿಲ್‌ 10ರವರೆಗೆ ಹಸಿ ಮಾಂಸ ಮಾರಾಟ ನಿಷೇಧ

ಗಾಜಿಯಾಬಾದ್‌: ಏಪ್ರಿಲ್‌ 10ರವರೆಗೆ ಹಸಿ ಮಾಂಸ ಮಾರಾಟ ನಿಷೇಧ

- Advertisement -
- Advertisement -

ಹೊಸದಿಲ್ಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮುನ್ಸಿಪಲ್ ಕಾರ್ಪೊರೇಷನ್, ಏಪ್ರಿಲ್ 2 ರಿಂದ 10 ರವರೆಗೆ ನಗರದಲ್ಲಿ ಹಸಿ ಮಾಂಸ ಮಾರಾಟವನ್ನು ನಿಷೇಧಿಸಿದೆ. ಪ್ರತಿ ವರ್ಷ ಹೊರಡಿಸುವ ವಾಡಿಕೆಯ ಆದೇಶ ಇದಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ನವರಾತ್ರಿಗಳ ಅವಧಿಯಲ್ಲಿ ದೇವಸ್ಥಾನಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೇಯರ್‌ ನಿರ್ದೇಶನ ನೀಡಿದ್ದಾರೆ. ಆಯಾ ವಲಯಗಳಲ್ಲಿ, ದೇವಸ್ಥಾನಗಳಲ್ಲಿ ಶುಚಿತ್ವ ಕಾಪಾಡುವಂತೆ ಮತ್ತು ಮಾಂಸದ ಅಂಗಡಿಗಳನ್ನು ತೆರೆಯದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ” ಎಂದು ನಾಗರಿಕ ಮಂಡಳಿ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಇದು ಜಿಲ್ಲೆಯ ಐದು ವಲಯಗಳನ್ನು ಒಳಗೊಂಡಿದೆ.

ಸ್ಥಳೀಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಮಾರ್ಚ್ 31ರಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ನಂತರ ಪ್ರಾಸಂಗಿಕವಾಗಿ ಈ ಆದೇಶವು ಹೊರಬಿದ್ದಿದೆ. ಕ್ಷೇತ್ರದಲ್ಲಿ ಹಲವಾರು ರೆಸ್ಟೋರೆಂಟ್‌ಗಳು ತೆರೆದ ಮಾಂಸವನ್ನು ಮಾರಾಟ ಮಾಡುತ್ತಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. “ಯಾವುದೇ ರೋಗ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಕ್ರಮ ಜರುಗಿಸಬೇಕು” ಎಂದು ಪತ್ರದಲ್ಲಿ ಕೋರಿದ್ದರು.

ವಾಸ್ತವವಾಗಿ, ಗುರ್ಜರ್ ಅವರು ಇಂತಹ ಮನವಿಗಳನ್ನು ಮಾಡಿದ್ದು ಇದೇ ಮೊದಲಲ್ಲ. ಮಾಂಸದ ಅಂಗಡಿಗಳಿಗೆ ನಿರ್ಬಂಧ ಹಾಕಬೇಕೆಂದು ಅವರು ಈಗ ಮನವಿ ಮಾಡಿದ್ದಾರೆ.

ನಾಗರಿಕ ಮಂಡಳಿಯ ವ್ಯಾಪ್ತಿಯಲ್ಲಿರುವ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮಾಂಸದ ಅಂಗಡಿಗಳನ್ನು ಪ್ರತಿವರ್ಷದ ವಾಡಿಕೆಯಂತೆ ಮುಚ್ಚಲಾಗುತ್ತಿದೆ ಅಧಿಕಾರಿಗಳು ಹೇಳಿದ್ದಾರೆ.

“ಪ್ರತಿ ವರ್ಷ ಆದೇಶವನ್ನು ಹೊರಡಿಸಲಾಗುತ್ತದೆ. ನವರಾತ್ರಿಯ ಸಮಯದಲ್ಲಿ ಮಾತ್ರ ನಿಷೇಧ ಮಾಡಲಾಗುತ್ತದೆ. ಈ ಐದು ವಲಯಗಳಲ್ಲಿ ಹಸಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಸಂಬಂಧಿಸಿದ ಎಲ್ಲಾ ನಗರ ನಿಗಮ ಇಲಾಖೆಗಳಿಗೆ ಸೂಚನೆಯನ್ನು ನೀಡಲಾಗಿದೆ” ಎಂದು ಗಾಜಿಯಾಬಾದ್ ಮೇಯರ್ ಆಶಾ ಶರ್ಮಾ ತಿಳಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹಿಂದುತ್ವ ಗುಂಪುಗಳು ಮಾಂಸ ಮತ್ತು ಕೋಳಿ ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಹೆಚ್ಚಾಗಿ ದಾಳಿ ಮಾಡುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...