Homeಮುಖಪುಟಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪೊಲೀಸರ ಪ್ರತಿಪಾದನೆ ನಿರಾಕರಿಸಿದ ಕುಟುಂಬ

ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪೊಲೀಸರ ಪ್ರತಿಪಾದನೆ ನಿರಾಕರಿಸಿದ ಕುಟುಂಬ

ಘಟನೆಯ ಬಗ್ಗೆ ಬರೆದುಕೊಂಡಿದ್ದ ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾದ ಕೆಲವೆ ಗಂಟೆಗಳಲ್ಲಿ ಪ್ರಕರಣ ಮತ್ತೆ ತಿರುವು ಕಂಡಿದೆ

- Advertisement -
- Advertisement -

“ಕೋಮು ಪ್ರಚೋದನೆ” ಮಾಡಲಾಗುತ್ತಿದೆ ಎಂದು ಹೇಳಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆಗೆ ಸಂಬಂಧಿಸಿದ ಪೋಸ್ಟ್‌ಗಳ ಕುರಿತು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಟ್ವಿಟರ್, ಪತ್ರಕರ್ತರು ಮತ್ತು ಕಾಂಗ್ರೆಸ್ ಮುಖಂಡರು ಸೇರಿದಂತೆ ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದಾಗಿ ಕೆಲವೇ ಗಂಟೆಗಳ ಅಂತರದಲ್ಲಿ, ಪ್ರಕರಣವು ಮತ್ತೆ ಹೊಸ ತಿರುವು ಕಂಡಿದೆ. ಹಲ್ಲೆಗೊಳಗಾದ ವೃದ್ಧ ಅಬ್ದುಲ್ ಸಮದ್‌ ಅವರು ತಾಯತಗಳನ್ನು ಮಾರಾಟ ಮಾಡುತ್ತಾರೆ ಎಂಬ ಪೊಲೀಸರ ಹೇಳಿಕೆಯನ್ನು ಅವರ ಕುಟುಂಬ ನಿರಾಕರಿಸಿದೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಘಟನೆಯ ಕುರಿತು ಟ್ವೀಟ್ ಮಾಡಿದ್ದ ಹಲವಾರು ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರು ಹಾಗೂ ಟ್ವಿಟರ್‌‌ ಸೇರಿದಂತೆ ಒಟ್ಟು 9 ಹೆಸರುಗಳ ಮೇಲೆ ಗಾಜಿಯಾಬಾದ್ ಪೊಲೀಸರು ಎಫ್‌ಐಆರ್‌‌ ದಾಖಲಿಸಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಘಟನೆಯ ಬಗ್ಗೆ ಸ್ವತಃ ವೃದ್ದನೆ ಅಳುತ್ತಾ ವಿಡಿಯೊದಲ್ಲಿ ಮಾಹಿತಿ ನೀಡಿದ್ದರು. ಅದರಲ್ಲಿ, “ನನ್ನ ಹೆಸರು ಚೌದರಿ ಅಬ್ದುಲ್ ಸಮದ್ ಎಂದಾಗಿದ್ದು, ದೆಹಲಿ ಗಡಿಯ ಗಾಝಿಯಾಬಾದ್‌ನ ಲೋನಿಯಲ್ಲಿ ನನ್ನ ಮೇಲೆ ದಾಳಿ ನಡೆದಿದೆ. ಅಲ್ಲಿ ಇಬ್ಬರು ಆಟೋದವರು ನನ್ನ ಮುಖಕ್ಕೆ ರುಮಾಲನ್ನು ಮುಚ್ಚಿ ಕರೆದುಕೊಂಡು ಹೋದರು. ಬಳಿಕೆ ನನಗೆ ಹೊಡೆಯಲು ಪ್ರಾರಂಭಿಸಿದರು. ಅಲ್ಲಿಂದ ನನ್ನ ಕಾಡಿಗೆ ಕರೆದುಕೊಂಡುಹೋಗಿ ಒಂದು ಕೋಣೆಯಲ್ಲಿಟ್ಟರು. ಅವರು ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು, ನಾನು ಯಾ ಅಲ್ಲಾಹ್ ಎಂದು ಕೂಗಿದರೆ ಹೊಡೆಯುತ್ತಿದ್ದರು. ಪಿಸ್ತೂಲ್ ಹಣೆಗೆ ಇಟ್ಟಿದ್ದು, ನನ್ನ ಮೇಲೆ ಭೀಕರ ಹಲ್ಲೆ ನಡೆಸಿದ್ದು, ನಾವು ಮುಸ್ಲಿಮರಿಗೆ ಹಲ್ಲೆ ನಡೆಸಿದ್ದೇವೆ ಎಂದಿದ್ದಾರೆ… ಅವರು ನನ್ನ ಗಡ್ಡವನ್ನು ಕಿತ್ತರು ಎಂದು” ಎಂದು ಹೇಳುವುದನ್ನು ಕಾಣಬಹುದಾಗಿದೆ.

ಆದರೆ ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ ಎಂದು ಪೊಲೀಸರು ಹೇಳಿದ್ದು, “ಅಬ್ದುಲ್ ಸಮದ್ ತಾಯತ ವ್ಯಾಪಾರಿಯಾಗಿದ್ದು, ಅದನ್ನು ಕೊಂಡುಕೊಂಡವರು ಅದು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದವರಲ್ಲಿ ಹಿಂದೂ-ಮುಸ್ಲಿಂ ಎರಡೂ ಧರ್ಮಿಯರೂ ಇದ್ದು, ಮೂವರನ್ನು ಬಂಧಿಸಿದ್ದೇವೆ” ಎಂದು ಹೇಳಿದ್ದರು.

ಆದರೆ, ಇದೀಗ ಅಬ್ದುಲ್ ಸಮದ್ ಅವರ ಮಗ ಬಬ್ಲೂ ಸೈಫಿ ಪೊಲೀಸರ ಪ್ರತಿಪಾದನೆಯನ್ನು ನಿರಾಕರಿಸಿದ್ದು, “ನನ್ನ ತಂದೆ ತಾಯತಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಪ್ಪಾಗಿ ಹೇಳಿದ್ದಾರೆ. ನಾವು ಬಡಗಿಗಳಾಗಿದ್ದು, ನಮ್ಮ ಕುಟುಂಬದಲ್ಲಿ ಯಾರೂ ತಾಯತದ ವ್ಯವಹಾರವನ್ನು ಮಾಡುವುದಿಲ್ಲ. ಪೊಲೀಸರು ಸಳ್ಳು ಹೇಳುತ್ತದ್ದಾರೆ. ಅವರು ತನಿಖೆ ನಡೆಸಿ ಅದನ್ನು ಸಾಬೀತುಪಡಿಸಲಿ” ಎಂದು ತಿಳಿಸಿದ್ದಾರೆ.

ಟ್ವಿಟರ್ ಮತ್ತು ಇತರ ಎಂಟು ಜನರ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆಗೆ ಪ್ರಚೋದನೆ), 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ), 505 (ಕಿಡಿಗೇಡಿತನ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಮುಂತಾದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯು.ಪಿ.ಯಲ್ಲಿ ಮನುವಾದಿಗಳು ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...