Homeಮುಖಪುಟಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಮುಸ್ಲಿಂ ಹುಡುಗಿಯೊಬ್ಬಳು ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಿರುವ ವಿಡಿಯೋ ವೈರಲ್ ಆದ ನಂತರ, ಬಜರಂಗದಳ ಮತ್ತು ಹಿಂದೂ ರಕ್ಷಾ ದಳದ ಸದಸ್ಯರ ಗುಂಪೊಂದು ಆಕೆಯ ಕುಟುಂಬದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಹಿಂದುತ್ವವಾದಿ ದಕ್ಷ ಚೌಧರಿ ನೇತೃತ್ವದಲ್ಲಿ ಪ್ರಕಾಶ್ ಸಿಂಗ್, ಅನ್ನು, ಅಕ್ಕು, ಅಮಿತ್ ಮತ್ತು ಅಭಿಷೇಕ್ ಎಂಬವರ ಗುಂಪು ಕಳೆದ ವಾರದ ಕೊನೆಯಲ್ಲಿ ಗಾಝಿಯಾಬಾದ್‌ನ ಗ್ರಾಮೀಣ ಪ್ರದೇಶದ ತುಳಸಿ ನಿಕೇತನ ಪ್ರದೇಶದಲ್ಲಿ ಬಾಲಕಿಯ ಮನೆಗೆ ನುಗ್ಗಿ ಹಲ್ಲೆ ಮಾಡಿದೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ದಾಳಿ ನಡೆಸಿದ ದುಷ್ಕರ್ಮಿಗಳು ‘ಇಸ್ಲಾಮೋಫೋಬಿಕ್’ ಘೋಷಣೆಗಳನ್ನು ಕೂಗಿದ್ದಾರೆ. ಬಾಲಕಿಯ ಮನೆಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆಕೆಯ ತಾಯಿಯನ್ನು ಅತ್ಯಂತ ಕೆಟ್ಟದ್ದಾಗಿ ನಿಂದಿಸಿದ್ದಾರೆ ಎಂದು ವರದಿ ವಿವರಿಸಿದೆ.

ದಾಳಿಯಲ್ಲಿ ಭಾಗಿಯಾದ ಪ್ರಮುಖ ಆರೋಪಿ ದಕ್ಷ ಚೌಧರಿ ವಿರುದ್ಧ ಈಗಾಗಲೇ ಜೆಎನ್‌ಯುಎಸ್‌ಯು ಮಾಜಿ ನಾಯಕ ಕನ್ಹಯ್ಯಾ ಕುಮಾರ್‌ಗೆ ಕಪಾಳಮೋಕ್ಷ, ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರನ್ನು ಥಳಿಸುವುದು ಮತ್ತು ಗಾಝಿಯಾಬಾದ್‌ನ ಮಸೀದಿಯೊಳಗೆ ಶೂ ಧರಿಸಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿರುವ ದಕ್ಷ ಚೌಧರಿ ವಿರುದ್ಧ ಹಲವಾರು ಎಫ್‌ಐಆರ್‌ಗಳು ದಾಖಲಾಗಿದ್ದರೂ, ಆತ ಮುಕ್ತವಾಗಿ ಓಡಾಡುತ್ತಿದ್ದಾನೆ. ಮುಸ್ಲಿಂ ದ್ವೇಷ ಹಬ್ಬಿಸಲು ತಂಡವನ್ನು ಕಟ್ಟಿಕೊಂಡಿದ್ದಾನೆ. ಬಹಿರಂಗವಾಗಿ ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ಕೊಡುತ್ತಿದ್ದಾನೆ ಎಂದು ವರದಿಗಳು ಹೇಳುತ್ತವೆ.

ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ದಾಳಿ ಮಾಡಿದ ಈ ಘಟನೆ ಸಂಬಂಧ ದಕ್ಷ ಚೌಧರಿ, ಅನ್ನು ಚೌಧರಿ, ಅಕ್ಕು ಪಂಡಿತ್, ಅಮಿತ್ ಠಾಕೂರ್ ಮತ್ತು ಇತರರ ವಿರುದ್ಧ ತೀಲಾ ಮೋಡ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

“ಅನ್ನು ಮತ್ತು ಅಮಿತ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ದಕ್ಷ ಮತ್ತು ಇತರರು ತಲೆಮರೆಸಿಕೊಂಡಿದ್ದಾರೆ” ಎಂದು ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್‌ನ ಎಸಿಪಿ ಅತುಲ್ ಕುಮಾರ್ ಸಿಂಗ್ ಹೇಳಿದ್ದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ದಕ್ಷ ಚೌಧರಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಸಿಪಿ ಹೇಳಿದ್ದಾರೆ. ಆದರೆ, ಆತ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪೋಸ್ಟ್‌ಗಳನ್ನು ಹಾಕುವುದನ್ನು ಮುಂದುವರಿಸಿದ್ದಾನೆ. “ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ಹಲ್ಲೆ ಮಾಡಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ. ಸನಾತನ ಧರ್ಮಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂಬುವುದಾಗಿ ಹೇಳಿದ್ದಾನೆ ಎಂದು ವರದಿ ತಿಳಿಸಿದೆ.

ಘಟನೆಯ ನಂತರ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾದ ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ದ್ವೇಷ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಹಲವಾರು ವಿಡಿಯೋಗಳನ್ನು ಹಂಚಿಕೊಂಡಿರುವ ಪಿಂಕಿ, ಮುಸ್ಲಿಂ ಬಾಲಕಿಯ ಬಂಧನಕ್ಕೆ ಮತ್ತು ಆಕೆಯ ಕುಟುಂಬದ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡುವಂತೆ ಆಗ್ರಹಿಸಿದ್ದಾರೆ. “ನಾವು ಸನಾತನ ಧರ್ಮಕ್ಕಾಗಿ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದೇವೆ. ಏನು ಬೇಕಾದರೂ ಆಗಬಹುದು, ನಾವು ಯಾವುದೇ ಮಟ್ಟಕ್ಕೆ ಹೋಗಬಹುದು” ಎಂದು ತನ್ನ ವಿಡಿಯೋ ಒಂದರಲ್ಲಿ ಪಿಂಕಿ ಹೇಳಿದ್ದಾರೆ.

ದಕ್ಷ ಚೌಧರಿ ಸ್ವತಃ ಪೋಸ್ಟ್ ಮಾಡಿರುವ ಮತ್ತೊಂದು ವಿಡಿಯೋದಲ್ಲಿ ಹುಡುಗಿಯನ್ನು ಥಳಿಸಿ ಪೊಲೀಸರ ಸಮ್ಮುಖದಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಿರುವುದು ಇದೆ ಎಂದು ಮಕ್ತೂಬ್ ಮೀಡಿಯಾ ಹೇಳಿದೆ.

ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...