Homeಮುಖಪುಟಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಮುಸ್ಲಿಂ ಹುಡುಗಿಯೊಬ್ಬಳು ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಿರುವ ವಿಡಿಯೋ ವೈರಲ್ ಆದ ನಂತರ, ಬಜರಂಗದಳ ಮತ್ತು ಹಿಂದೂ ರಕ್ಷಾ ದಳದ ಸದಸ್ಯರ ಗುಂಪೊಂದು ಆಕೆಯ ಕುಟುಂಬದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಹಿಂದುತ್ವವಾದಿ ದಕ್ಷ ಚೌಧರಿ ನೇತೃತ್ವದಲ್ಲಿ ಪ್ರಕಾಶ್ ಸಿಂಗ್, ಅನ್ನು, ಅಕ್ಕು, ಅಮಿತ್ ಮತ್ತು ಅಭಿಷೇಕ್ ಎಂಬವರ ಗುಂಪು ಕಳೆದ ವಾರದ ಕೊನೆಯಲ್ಲಿ ಗಾಝಿಯಾಬಾದ್‌ನ ಗ್ರಾಮೀಣ ಪ್ರದೇಶದ ತುಳಸಿ ನಿಕೇತನ ಪ್ರದೇಶದಲ್ಲಿ ಬಾಲಕಿಯ ಮನೆಗೆ ನುಗ್ಗಿ ಹಲ್ಲೆ ಮಾಡಿದೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ದಾಳಿ ನಡೆಸಿದ ದುಷ್ಕರ್ಮಿಗಳು ‘ಇಸ್ಲಾಮೋಫೋಬಿಕ್’ ಘೋಷಣೆಗಳನ್ನು ಕೂಗಿದ್ದಾರೆ. ಬಾಲಕಿಯ ಮನೆಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆಕೆಯ ತಾಯಿಯನ್ನು ಅತ್ಯಂತ ಕೆಟ್ಟದ್ದಾಗಿ ನಿಂದಿಸಿದ್ದಾರೆ ಎಂದು ವರದಿ ವಿವರಿಸಿದೆ.

ದಾಳಿಯಲ್ಲಿ ಭಾಗಿಯಾದ ಪ್ರಮುಖ ಆರೋಪಿ ದಕ್ಷ ಚೌಧರಿ ವಿರುದ್ಧ ಈಗಾಗಲೇ ಜೆಎನ್‌ಯುಎಸ್‌ಯು ಮಾಜಿ ನಾಯಕ ಕನ್ಹಯ್ಯಾ ಕುಮಾರ್‌ಗೆ ಕಪಾಳಮೋಕ್ಷ, ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರನ್ನು ಥಳಿಸುವುದು ಮತ್ತು ಗಾಝಿಯಾಬಾದ್‌ನ ಮಸೀದಿಯೊಳಗೆ ಶೂ ಧರಿಸಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿರುವ ದಕ್ಷ ಚೌಧರಿ ವಿರುದ್ಧ ಹಲವಾರು ಎಫ್‌ಐಆರ್‌ಗಳು ದಾಖಲಾಗಿದ್ದರೂ, ಆತ ಮುಕ್ತವಾಗಿ ಓಡಾಡುತ್ತಿದ್ದಾನೆ. ಮುಸ್ಲಿಂ ದ್ವೇಷ ಹಬ್ಬಿಸಲು ತಂಡವನ್ನು ಕಟ್ಟಿಕೊಂಡಿದ್ದಾನೆ. ಬಹಿರಂಗವಾಗಿ ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ಕೊಡುತ್ತಿದ್ದಾನೆ ಎಂದು ವರದಿಗಳು ಹೇಳುತ್ತವೆ.

ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ದಾಳಿ ಮಾಡಿದ ಈ ಘಟನೆ ಸಂಬಂಧ ದಕ್ಷ ಚೌಧರಿ, ಅನ್ನು ಚೌಧರಿ, ಅಕ್ಕು ಪಂಡಿತ್, ಅಮಿತ್ ಠಾಕೂರ್ ಮತ್ತು ಇತರರ ವಿರುದ್ಧ ತೀಲಾ ಮೋಡ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

“ಅನ್ನು ಮತ್ತು ಅಮಿತ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ದಕ್ಷ ಮತ್ತು ಇತರರು ತಲೆಮರೆಸಿಕೊಂಡಿದ್ದಾರೆ” ಎಂದು ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್‌ನ ಎಸಿಪಿ ಅತುಲ್ ಕುಮಾರ್ ಸಿಂಗ್ ಹೇಳಿದ್ದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ದಕ್ಷ ಚೌಧರಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಸಿಪಿ ಹೇಳಿದ್ದಾರೆ. ಆದರೆ, ಆತ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪೋಸ್ಟ್‌ಗಳನ್ನು ಹಾಕುವುದನ್ನು ಮುಂದುವರಿಸಿದ್ದಾನೆ. “ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ಹಲ್ಲೆ ಮಾಡಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ. ಸನಾತನ ಧರ್ಮಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂಬುವುದಾಗಿ ಹೇಳಿದ್ದಾನೆ ಎಂದು ವರದಿ ತಿಳಿಸಿದೆ.

ಘಟನೆಯ ನಂತರ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾದ ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ದ್ವೇಷ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಹಲವಾರು ವಿಡಿಯೋಗಳನ್ನು ಹಂಚಿಕೊಂಡಿರುವ ಪಿಂಕಿ, ಮುಸ್ಲಿಂ ಬಾಲಕಿಯ ಬಂಧನಕ್ಕೆ ಮತ್ತು ಆಕೆಯ ಕುಟುಂಬದ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡುವಂತೆ ಆಗ್ರಹಿಸಿದ್ದಾರೆ. “ನಾವು ಸನಾತನ ಧರ್ಮಕ್ಕಾಗಿ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದೇವೆ. ಏನು ಬೇಕಾದರೂ ಆಗಬಹುದು, ನಾವು ಯಾವುದೇ ಮಟ್ಟಕ್ಕೆ ಹೋಗಬಹುದು” ಎಂದು ತನ್ನ ವಿಡಿಯೋ ಒಂದರಲ್ಲಿ ಪಿಂಕಿ ಹೇಳಿದ್ದಾರೆ.

ದಕ್ಷ ಚೌಧರಿ ಸ್ವತಃ ಪೋಸ್ಟ್ ಮಾಡಿರುವ ಮತ್ತೊಂದು ವಿಡಿಯೋದಲ್ಲಿ ಹುಡುಗಿಯನ್ನು ಥಳಿಸಿ ಪೊಲೀಸರ ಸಮ್ಮುಖದಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಿರುವುದು ಇದೆ ಎಂದು ಮಕ್ತೂಬ್ ಮೀಡಿಯಾ ಹೇಳಿದೆ.

ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...