Homeಮುಖಪುಟಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಮುಸ್ಲಿಂ ಹುಡುಗಿಯೊಬ್ಬಳು ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಿರುವ ವಿಡಿಯೋ ವೈರಲ್ ಆದ ನಂತರ, ಬಜರಂಗದಳ ಮತ್ತು ಹಿಂದೂ ರಕ್ಷಾ ದಳದ ಸದಸ್ಯರ ಗುಂಪೊಂದು ಆಕೆಯ ಕುಟುಂಬದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಹಿಂದುತ್ವವಾದಿ ದಕ್ಷ ಚೌಧರಿ ನೇತೃತ್ವದಲ್ಲಿ ಪ್ರಕಾಶ್ ಸಿಂಗ್, ಅನ್ನು, ಅಕ್ಕು, ಅಮಿತ್ ಮತ್ತು ಅಭಿಷೇಕ್ ಎಂಬವರ ಗುಂಪು ಕಳೆದ ವಾರದ ಕೊನೆಯಲ್ಲಿ ಗಾಝಿಯಾಬಾದ್‌ನ ಗ್ರಾಮೀಣ ಪ್ರದೇಶದ ತುಳಸಿ ನಿಕೇತನ ಪ್ರದೇಶದಲ್ಲಿ ಬಾಲಕಿಯ ಮನೆಗೆ ನುಗ್ಗಿ ಹಲ್ಲೆ ಮಾಡಿದೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ದಾಳಿ ನಡೆಸಿದ ದುಷ್ಕರ್ಮಿಗಳು ‘ಇಸ್ಲಾಮೋಫೋಬಿಕ್’ ಘೋಷಣೆಗಳನ್ನು ಕೂಗಿದ್ದಾರೆ. ಬಾಲಕಿಯ ಮನೆಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆಕೆಯ ತಾಯಿಯನ್ನು ಅತ್ಯಂತ ಕೆಟ್ಟದ್ದಾಗಿ ನಿಂದಿಸಿದ್ದಾರೆ ಎಂದು ವರದಿ ವಿವರಿಸಿದೆ.

ದಾಳಿಯಲ್ಲಿ ಭಾಗಿಯಾದ ಪ್ರಮುಖ ಆರೋಪಿ ದಕ್ಷ ಚೌಧರಿ ವಿರುದ್ಧ ಈಗಾಗಲೇ ಜೆಎನ್‌ಯುಎಸ್‌ಯು ಮಾಜಿ ನಾಯಕ ಕನ್ಹಯ್ಯಾ ಕುಮಾರ್‌ಗೆ ಕಪಾಳಮೋಕ್ಷ, ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರನ್ನು ಥಳಿಸುವುದು ಮತ್ತು ಗಾಝಿಯಾಬಾದ್‌ನ ಮಸೀದಿಯೊಳಗೆ ಶೂ ಧರಿಸಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿರುವ ದಕ್ಷ ಚೌಧರಿ ವಿರುದ್ಧ ಹಲವಾರು ಎಫ್‌ಐಆರ್‌ಗಳು ದಾಖಲಾಗಿದ್ದರೂ, ಆತ ಮುಕ್ತವಾಗಿ ಓಡಾಡುತ್ತಿದ್ದಾನೆ. ಮುಸ್ಲಿಂ ದ್ವೇಷ ಹಬ್ಬಿಸಲು ತಂಡವನ್ನು ಕಟ್ಟಿಕೊಂಡಿದ್ದಾನೆ. ಬಹಿರಂಗವಾಗಿ ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ಕೊಡುತ್ತಿದ್ದಾನೆ ಎಂದು ವರದಿಗಳು ಹೇಳುತ್ತವೆ.

ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ದಾಳಿ ಮಾಡಿದ ಈ ಘಟನೆ ಸಂಬಂಧ ದಕ್ಷ ಚೌಧರಿ, ಅನ್ನು ಚೌಧರಿ, ಅಕ್ಕು ಪಂಡಿತ್, ಅಮಿತ್ ಠಾಕೂರ್ ಮತ್ತು ಇತರರ ವಿರುದ್ಧ ತೀಲಾ ಮೋಡ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

“ಅನ್ನು ಮತ್ತು ಅಮಿತ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ದಕ್ಷ ಮತ್ತು ಇತರರು ತಲೆಮರೆಸಿಕೊಂಡಿದ್ದಾರೆ” ಎಂದು ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್‌ನ ಎಸಿಪಿ ಅತುಲ್ ಕುಮಾರ್ ಸಿಂಗ್ ಹೇಳಿದ್ದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ದಕ್ಷ ಚೌಧರಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಸಿಪಿ ಹೇಳಿದ್ದಾರೆ. ಆದರೆ, ಆತ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪೋಸ್ಟ್‌ಗಳನ್ನು ಹಾಕುವುದನ್ನು ಮುಂದುವರಿಸಿದ್ದಾನೆ. “ಬಾಲಕಿ ಮತ್ತು ಆಕೆಯ ಕುಟುಂಬದ ಮೇಲೆ ಹಲ್ಲೆ ಮಾಡಿರುವ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ. ಸನಾತನ ಧರ್ಮಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂಬುವುದಾಗಿ ಹೇಳಿದ್ದಾನೆ ಎಂದು ವರದಿ ತಿಳಿಸಿದೆ.

ಘಟನೆಯ ನಂತರ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗಳಿಗೆ ಹೆಸರುವಾಸಿಯಾದ ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ದ್ವೇಷ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಹಲವಾರು ವಿಡಿಯೋಗಳನ್ನು ಹಂಚಿಕೊಂಡಿರುವ ಪಿಂಕಿ, ಮುಸ್ಲಿಂ ಬಾಲಕಿಯ ಬಂಧನಕ್ಕೆ ಮತ್ತು ಆಕೆಯ ಕುಟುಂಬದ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡುವಂತೆ ಆಗ್ರಹಿಸಿದ್ದಾರೆ. “ನಾವು ಸನಾತನ ಧರ್ಮಕ್ಕಾಗಿ ಪೂರ್ಣ ಶಕ್ತಿಯಿಂದ ಹೋರಾಡುತ್ತಿದ್ದೇವೆ. ಏನು ಬೇಕಾದರೂ ಆಗಬಹುದು, ನಾವು ಯಾವುದೇ ಮಟ್ಟಕ್ಕೆ ಹೋಗಬಹುದು” ಎಂದು ತನ್ನ ವಿಡಿಯೋ ಒಂದರಲ್ಲಿ ಪಿಂಕಿ ಹೇಳಿದ್ದಾರೆ.

ದಕ್ಷ ಚೌಧರಿ ಸ್ವತಃ ಪೋಸ್ಟ್ ಮಾಡಿರುವ ಮತ್ತೊಂದು ವಿಡಿಯೋದಲ್ಲಿ ಹುಡುಗಿಯನ್ನು ಥಳಿಸಿ ಪೊಲೀಸರ ಸಮ್ಮುಖದಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಿರುವುದು ಇದೆ ಎಂದು ಮಕ್ತೂಬ್ ಮೀಡಿಯಾ ಹೇಳಿದೆ.

ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...