Homeಮುಖಪುಟಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದವನಿಗೆ ಮರಣದಂಡನೆ ವಿಧಿಸಿದ ಘಾಜಿಯಾಬಾದ್ ಪೋಕ್ಸೋ ಕೋರ್ಟ್

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದವನಿಗೆ ಮರಣದಂಡನೆ ವಿಧಿಸಿದ ಘಾಜಿಯಾಬಾದ್ ಪೋಕ್ಸೋ ಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಘಾಜಿಯಾಬಾದ್ ವಿಶೇಷ ನ್ಯಾಯಾಲಯು ಬುಧವಾರ ಮರಣದಂಡನೆ ಶಿಕ್ಷೆ ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಗಾಜಿಯಾಬಾದ್ ಗ್ರಾಮಾಂತರ ಡಿಸಿಪಿ ರವಿ ಕುಮಾರ್, ”ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಮರಣದಂಡನೆ ವಿಧಿಸಲಾಗಿದೆ. ಸುಮಾರು 6 ತಿಂಗಳ ನಂತರ, ಘಾಜಿಯಾಬಾದ್ ಪೋಕ್ಸೋ ನ್ಯಾಯಾಲಯವು ಆರೋಪಿಗಳಿಗೆ ಐಪಿಸಿ ಸೆಕ್ಷನ್ 302, 363 ಮತ್ತು 376 ರ ಅಡಿಯಲ್ಲಿ ಶಿಕ್ಷೆಯನ್ನು ಪ್ರಕಟಿಸಿದೆ” ಎಂದು ಅವರು ಹೇಳಿದರು.

2022ರ ಆಗಸ್ಟ್ 18ರಂದು ಮೋದಿನಗರ ಪ್ರದೇಶದ ಹಳ್ಳಿಯೊಂದರಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿ ಶವವಾಗಿ ಪತ್ತೆಯಾಗಿದ್ದಳು. ಅದೇ ಗ್ರಾಮದವರಾದ ಆರೋಪಿಗೆ ಆಗಸ್ಟ್ 13ರಂದು ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು” ಎಂದು ಅವರು ಹೇಳಿದರು.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಬರ್ಬರ ಅತ್ಯಾಚಾರ-ಕೊಲೆ: ಪ್ರಕರಣ ನಡೆದುಬಂದು ಹಾದಿ

ಇದಕ್ಕೂ ಮೊದಲು, ಫೆಬ್ರವರಿ 9ರಂದು, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪೋಕ್ಸೊ ನ್ಯಾಯಾಲಯವು ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿ, ಅವನಿಗೂ ಮರಣದಂಡನೆ ವಿಧಿಸಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣೆ (ಪೋಕ್ಸೊ) ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿದೆ.

ಈ ಘಟನೆಯು ಡಿಸೆಂಬರ್ 1, 2022ರಂದು ನಡೆದಿತ್ತು. ಶಾಹಿಬಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಟಿ ಫಾರೆಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿ ಶವವಾಗಿ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಮೃತಳ ಪೋಷಕರು ದೂರು ನೀಡಿದ್ದರು.

ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್, ವಕೀಲ ಸಂಜೀವ್ ಬಖರ್ವಾ, ”ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ ನಂತರ ಡಿಸೆಂಬರ್ 15ರಂದು ಈ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾಯಿತು. ನಂತರ ಪ್ರಕರಣವನ್ನು ಮುಖ್ಯ POCSO ನಿಂದ POCSO 1 ಗೆ ಜನವರಿ 9, 2023 ರಂದು ವರ್ಗಾಯಿಸಲಾಯಿತು” ಎಂದು ಅವರು ಹೇಳಿದರು.

”ಘಟನೆಯ ದಿನದಂದು ಆರೋಪಿಯನ್ನು ಬಾಲಕಿಯ ಮನೆಯ ಬಳಿ ನೋಡಿದ್ದೇನೆ ಎಂದು ನ್ಯಾಯಾಲಯದಲ್ಲಿ ಹೇಳಿದವರು ಸೇರಿದಂತೆ ಒಟ್ಟು 15 ಸಾಕ್ಷಿಗಳನ್ನು ಹಾಜರುಪಡಿಸಿದ್ದೇನೆ. ನಾವು ನ್ಯಾಯಾಲಯದಲ್ಲಿ ಸಾಕ್ಷ್ಯವನ್ನು ಸಹ ಒದಗಿಸಿದ್ದೇವೆ” ಎಂದು ಅವರು ಎಎನ್ಐಗೆ ಹೇಳಿದ್ದಾರೆ.

”ಫೆಬ್ರವರಿ 9ರಂದು, ಗಾಜಿಯಾಬಾದ್‌ನ ಪೋಕ್ಸೊ ನ್ಯಾಯಾಲಯವು ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿತು ಮತ್ತು ಅವನಿಗೆ ಮರಣದಂಡನೆ ವಿಧಿಸಿತು” ಎಂದು ವಕೀಲ ಸಂಜೀವ್ ಬಖರ್ವಾ ತೀಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...