Homeಮುಖಪುಟಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದವನಿಗೆ ಮರಣದಂಡನೆ ವಿಧಿಸಿದ ಘಾಜಿಯಾಬಾದ್ ಪೋಕ್ಸೋ ಕೋರ್ಟ್

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದವನಿಗೆ ಮರಣದಂಡನೆ ವಿಧಿಸಿದ ಘಾಜಿಯಾಬಾದ್ ಪೋಕ್ಸೋ ಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಘಾಜಿಯಾಬಾದ್ ವಿಶೇಷ ನ್ಯಾಯಾಲಯು ಬುಧವಾರ ಮರಣದಂಡನೆ ಶಿಕ್ಷೆ ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಗಾಜಿಯಾಬಾದ್ ಗ್ರಾಮಾಂತರ ಡಿಸಿಪಿ ರವಿ ಕುಮಾರ್, ”ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಮರಣದಂಡನೆ ವಿಧಿಸಲಾಗಿದೆ. ಸುಮಾರು 6 ತಿಂಗಳ ನಂತರ, ಘಾಜಿಯಾಬಾದ್ ಪೋಕ್ಸೋ ನ್ಯಾಯಾಲಯವು ಆರೋಪಿಗಳಿಗೆ ಐಪಿಸಿ ಸೆಕ್ಷನ್ 302, 363 ಮತ್ತು 376 ರ ಅಡಿಯಲ್ಲಿ ಶಿಕ್ಷೆಯನ್ನು ಪ್ರಕಟಿಸಿದೆ” ಎಂದು ಅವರು ಹೇಳಿದರು.

2022ರ ಆಗಸ್ಟ್ 18ರಂದು ಮೋದಿನಗರ ಪ್ರದೇಶದ ಹಳ್ಳಿಯೊಂದರಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿ ಶವವಾಗಿ ಪತ್ತೆಯಾಗಿದ್ದಳು. ಅದೇ ಗ್ರಾಮದವರಾದ ಆರೋಪಿಗೆ ಆಗಸ್ಟ್ 13ರಂದು ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು” ಎಂದು ಅವರು ಹೇಳಿದರು.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಬರ್ಬರ ಅತ್ಯಾಚಾರ-ಕೊಲೆ: ಪ್ರಕರಣ ನಡೆದುಬಂದು ಹಾದಿ

ಇದಕ್ಕೂ ಮೊದಲು, ಫೆಬ್ರವರಿ 9ರಂದು, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪೋಕ್ಸೊ ನ್ಯಾಯಾಲಯವು ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿ, ಅವನಿಗೂ ಮರಣದಂಡನೆ ವಿಧಿಸಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣೆ (ಪೋಕ್ಸೊ) ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿದೆ.

ಈ ಘಟನೆಯು ಡಿಸೆಂಬರ್ 1, 2022ರಂದು ನಡೆದಿತ್ತು. ಶಾಹಿಬಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಟಿ ಫಾರೆಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿ ಶವವಾಗಿ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಮೃತಳ ಪೋಷಕರು ದೂರು ನೀಡಿದ್ದರು.

ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್, ವಕೀಲ ಸಂಜೀವ್ ಬಖರ್ವಾ, ”ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ ನಂತರ ಡಿಸೆಂಬರ್ 15ರಂದು ಈ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾಯಿತು. ನಂತರ ಪ್ರಕರಣವನ್ನು ಮುಖ್ಯ POCSO ನಿಂದ POCSO 1 ಗೆ ಜನವರಿ 9, 2023 ರಂದು ವರ್ಗಾಯಿಸಲಾಯಿತು” ಎಂದು ಅವರು ಹೇಳಿದರು.

”ಘಟನೆಯ ದಿನದಂದು ಆರೋಪಿಯನ್ನು ಬಾಲಕಿಯ ಮನೆಯ ಬಳಿ ನೋಡಿದ್ದೇನೆ ಎಂದು ನ್ಯಾಯಾಲಯದಲ್ಲಿ ಹೇಳಿದವರು ಸೇರಿದಂತೆ ಒಟ್ಟು 15 ಸಾಕ್ಷಿಗಳನ್ನು ಹಾಜರುಪಡಿಸಿದ್ದೇನೆ. ನಾವು ನ್ಯಾಯಾಲಯದಲ್ಲಿ ಸಾಕ್ಷ್ಯವನ್ನು ಸಹ ಒದಗಿಸಿದ್ದೇವೆ” ಎಂದು ಅವರು ಎಎನ್ಐಗೆ ಹೇಳಿದ್ದಾರೆ.

”ಫೆಬ್ರವರಿ 9ರಂದು, ಗಾಜಿಯಾಬಾದ್‌ನ ಪೋಕ್ಸೊ ನ್ಯಾಯಾಲಯವು ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿತು ಮತ್ತು ಅವನಿಗೆ ಮರಣದಂಡನೆ ವಿಧಿಸಿತು” ಎಂದು ವಕೀಲ ಸಂಜೀವ್ ಬಖರ್ವಾ ತೀಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...