Homeಮುಖಪುಟ‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

- Advertisement -
- Advertisement -

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ.

ಕರ್ನೂಲು ಜಿಲ್ಲೆಯ ಕಲುಗೋಟ್ಲಾ ಗ್ರಾಮದಲ್ಲಿ ನಡೆದ ಗ್ರಾಮ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಹಿಂದಿನ ಸರ್ಕಾರವು ಕಲಬೆರಕೆ ಪ್ರಸಾದ (ಪವಿತ್ರ ಆಹಾರ)ದ ಮೂಲಕ ವೆಂಕಟೇಶ್ವರ ಸ್ವಾಮಿಯ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ. 

“ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ಸ್ನಾನಗೃಹ ಸ್ವಚ್ಛಗೊಳಿಸುವ ರಾಸಾಯನಿಕಗಳಿಂದ ತಯಾರಿಸಿದ ತುಪ್ಪವನ್ನು ಲಡ್ಡುಗಳಲ್ಲಿ ಬಳಸುತ್ತಿತ್ತು” ಎಂದು ಯಮ್ಮಿಗನೂರು ಕ್ಷೇತ್ರದಲ್ಲಿ ನಡೆದ ಪಟ್ಟದಾರ್ ಪಾಸ್‌ಬುಕ್ (ಭೂ ದಾಖಲೆಗಳು) ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ನಾಯ್ಡು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪ್ರಕಾರ, ಐದು ವರ್ಷಗಳ ಕಾಲ ಲಡ್ಡು ತಯಾರಿಸಲು “ರಾಸಾಯನಿಕಗಳಿಂದ” ತಯಾರಿಸಿದ ಕಲಬೆರಕೆ ತುಪ್ಪವನ್ನು ಬಳಸಲಾಗುತ್ತಿತ್ತು. ಇವುಗಳಲ್ಲಿ ಎರಡು ರೀತಿಯ ರಾಸಾಯನಿಕಗಳಿವೆ ಎಂದು ಅವರು ಹೇಳಿದ್ದು, ಇವುಗಳಲ್ಲಿ ಕೆಲವು ತರಕಾರಿ ಮೂಲದವುಗಳಾಗಿದ್ದು, ಅವು ಹೆಚ್ಚು ದುಬಾರಿಯಾಗಿದ್ದವು, ಆದರೆ ಪ್ರಾಣಿಗಳ ಕೊಬ್ಬಿನ ಬೆಲೆ ಕಡಿಮೆ ಎಂದು ಅವರು ಗಮನಿಸಿದ್ದರು ಎಂದು ಆರೋಪಿಸಿದ್ದಾರೆ. 

ಜೊತೆಗೆ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ) ವರದಿಯು ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಹೇಳುತ್ತದೆ ಎಂದು ನಾಯ್ಡು ಪುನರುಚ್ಚರಿಸಿದ್ದಾರೆ. 

ಒಬ್ಬ ಭಕ್ತನಾಗಿ, ವೆಂಕಟೇಶ್ವರ ಸ್ವಾಮಿಯ ಪಾವಿತ್ರ್ಯವನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಹೆಚ್ಚು ಮಾತನಾಡಬಾರದು. ಆದರೆ ವೈಎಸ್‌ಆರ್‌ಸಿಪಿ ನಾಯಕರು ಸಿಬಿಐ ನೇತೃತ್ವದ ಎಸ್‌ಐಟಿ ಕಲಬೆರಕೆ ನಡೆದಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ ಎಂದು ವಾದಿಸುತ್ತಿದ್ದರೆ, ಟಿಡಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈವಿ ಸುಬ್ಬಾ ರೆಡ್ಡಿ ಕಲಬೆರಕೆ ನಡೆದಿದೆ ಎಂದು ಹೇಳಿದ್ದರು ಎಂದು ನೆನಪಿಸಿದ್ದಾರೆ. 

ತಿರುಮಲ ತಿರುಪತಿ ದೇವಸ್ಥಾನಗಳನ್ನು (ಟಿಟಿಡಿ) ಕಲಬೆರಕೆ ಪ್ರಸಾದದಿಂದ ಅಪವಿತ್ರಗೊಳಿಸಿದ ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದೆ ಎಂದು ನಾಯ್ಡು ಹೇಳಿದ್ದು, ಪ್ರಸ್ತುತ ಲಡ್ಡು ಮತ್ತು ಹಿಂದಿನದಕ್ಕೆ ಸಾಕಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ನಾಯ್ಡು ಅವರು ತಿರುಪತಿ ಲಡ್ಡು ಕಲಬೆರಕೆ ಪ್ರಕರಣದಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದು, ಈ ವಿಷಯದ ಬಗ್ಗೆ ಎಸ್‌ಐಟಿ ವರದಿಯ ನಂತರ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಏಕವ್ಯಕ್ತಿ ಸಮಿತಿಯನ್ನು ರಚಿಸಿದ್ದಾರೆ. 

ತಿರುಮಲ ಲಡ್ಡು ಪ್ರಸಾದದ ಕಲಬೆರಕೆ ಭಕ್ತರ ನಂಬಿಕೆಯ ವಿರುದ್ಧದ ಗಂಭೀರ ಅಪರಾಧವಾಗಿದೆ ಎಂದು ಹೇಳಿರುವ ಅವರು ಈ ವಿಷಯದಲ್ಲಿ ಯಾವುದೇ ವರದಿಯು ವೈಎಸ್‌ಆರ್‌ಸಿಪಿಗೆ ಕ್ಲೀನ್ ಚಿಟ್ ನೀಡಿಲ್ಲ ಎಂದು ಪ್ರತಿಪಾದಿಸಿದ್ದಾರೆ. 

ತುಪ್ಪ ಕಲಬೆರಕೆಯನ್ನು “ದೇವರ ವಿರುದ್ಧದ ಅತ್ಯಂತ ದೊಡ್ಡ ಪಾಪ” ಎಂದು ಕರೆದ ನಾಯ್ಡು, ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ 2022 ರ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ವರದಿಯು “ಕಲಬೆರೆಕೆ ಇದೆ ಎಂದು ಸ್ಪಷ್ಟವಾಗಿ ಹೇಳಿದೆ” ಎಂದು ಆರೋಪಿಸಿದ್ದಾರೆ. 

ಗುರುವಾರ ಟಿಡಿಪಿ ವಿರುದ್ಧ ವಾಗ್ದಾಳಿ ನಡೆಸಿರುವ ವೈಎಸ್‌ಆರ್‌ಸಿಪಿ ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ, 2022 ರ ಸಿಎಫ್‌ಟಿಆರ್‌ಐ ವರದಿಯು ಪವಿತ್ರ ಸಿಹಿತಿಂಡಿ ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆಯನ್ನು ಉಲ್ಲೇಖಿಸಿಲ್ಲ, ಆದರೆ ತುಪ್ಪವನ್ನು ಕಲಬೆರಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ ಎಂದು ಹೇಳಿದ್ದಾರೆ.

ಆ ವರದಿಯನ್ನು ಅವರು ಮುಚ್ಚಿಟ್ಟಿದ್ದಾರೆ ಎಂಬ ಟಿಡಿಪಿ ನೇತೃತ್ವದ ಎನ್‌ಡಿಎ ಸರ್ಕಾರದ ಆರೋಪವನ್ನು ಅವರು ತಿರಸ್ಕರಿಸಿದ್ದು, “ಒಂದು ವೇಳೆ ಅದನ್ನು ನಿಗ್ರಹಿಸಿದ್ದರೆ, ನಾನು ಮಾದರಿಗಳನ್ನು ಪರೀಕ್ಷಿಸಲು ಸಿಎಫ್‌ಟಿಆರ್‌ಐಗೆ ಏಕೆ ಬರೆಯಬೇಕು” ಎಂದು ಸುಬ್ಬಾ ರೆಡ್ಡಿ ಪ್ರಶ್ನಿಸಿದ್ದಾರೆ. 

“ಎಸ್‌ಐಟಿ ವರದಿಯು ಸಮಸ್ಯೆಯನ್ನು ಸ್ಪಷ್ಟಪಡಿಸಿದ್ದರೂ, ರಾಜ್ಯ ಸರ್ಕಾರವು ಸುಳ್ಳು ಹೇಳಿಕೆಗಳನ್ನು ಹರಡುವುದನ್ನು ಮತ್ತು ವೈಎಸ್‌ಆರ್‌ಸಿಪಿಯನ್ನು ದೂಷಿಸಲು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ಮುಂದುವರೆಸಿದೆ” ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...