Homeಚಳವಳಿಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ಅಲ್ಲಿಂದ ನೇರಪ್ರಸಾರವಾಗುತ್ತಿರುವ ಕಾರ್ಯಕ್ರಮವನ್ನು ವೀಕ್ಷಿಸಲು ದೇವಸ್ಥಾನಕ್ಕೆ ತೆರಳಿದ್ದ ಹಲವಾರು ಬಿಜೆಪಿ ನಾಯಕರಿಗೆ ಹರಿಯಾಣ ರೈತರು ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಸುಮಾರು ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅದರ ಭಾಗವಾಗಿ ಬಿಜೆಪಿ ನಾಯಕರಿಗೆ ಘೇರಾವ್ ಹಾಕಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಪ್ರತಿಭಟನಾಕಾರರು ನಿರ್ದಿಷ್ಟವಾಗಿ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮನೀಶ್ ಗ್ರೋವರ್ ಅವರ ನಡೆಯನ್ನು ಖಂಡಿಸಿದರು. ಮನೀಶ್‌ ಅವರು ರೈತರ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ರೈತರು ಆರೋಪಿಸಿದರು.

ಮಾಜಿ ಸಚಿವ ಮನೀಶ್ ಗ್ರೋವರ್

ಮಾಜಿ ಸಚಿವರು ಕ್ಷಮೆಯಾಚಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಮತ್ತು ಇತರೆ ಪಕ್ಷದ ಸದಸ್ಯರು ಸುಮಾರು ಎಂಟು ಗಂಟೆಗಳ ಕಾಲ ದೇವಸ್ಥಾನದಲ್ಲಿ ಸಿಲುಕಿಕೊಳ್ಳಬೇಕಾಯಿತು.

ಅಂತಿಮವಾಗಿ, ಗ್ರೋವರ್ ಅವರು ಕೈ ಮಡಕಿ ರೈತರಲ್ಲಿ ಕ್ಷಮೆಯಾಚಿಸಿದರು. ನಂತರ ದೇವಸ್ಥಾನಕ್ಕೆ ಕೆಲವರು ತೆರಳಲು ಅನುಮತಿ ನೀಡಲಾಯಿತು ಎಂದು ರೈತರು ತಿಳಿಸಿದ್ದಾರೆ.

ಗುರಗಾಂವ್‌ನಿಂದ 78 ಕಿಮೀ ದೂರದಲ್ಲಿರುವ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರು. ಇಬ್ಬರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ದೆಹಲಿ-ಹಿಸಾರ್ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಹೊತ್ತು ಬಂದ್ ಮಾಡಲಾಗಿತ್ತು.

ಇದನ್ನೂ ಓದಿರಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ಮತ್ತೊಂದು ಘಟನೆ

ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಂಗ್ರಾ ಅವರು ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ಧರ್ಮಶಾಲಾ ಉದ್ಘಾಟಿಸಲು ತೆರಳಿದಾಗ ರೈತರು ಕಪ್ಪು ಭಾವುಟ ತೋರಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು ಮತ್ತು ರೈತರ ನಡುವಿನ ಗಲಾಟೆಯಲ್ಲಿ ಜುಂಗ್ರಾ ಅವರ ಕಾರಿನ ಗಾಜು ಒಡೆದುಹೋಯಿತು.

ರೈತ ಚಳವಳಿಯನ್ನು ತಡೆಯಲು ಬಿಜೆಪಿ ನಾಯಕರು ಮೊದಲಿನಿಂದಲೂ ಯತ್ನಿಸುತ್ತಿದ್ದಾರೆ. ಸ್ವತಃ ಹರ್ಯಾಣ ಮುಖ್ಯಮಂತ್ರಿ ಮನೋಹರ್‌‌ಲಾಲ್‌‌ ಖಟ್ಟರ್‌ ಅವರು, ರೈತರ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡುವಂತೆ ಪ್ರಚೋದಿಸಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದಕ್ಕೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು.

ಖಟ್ಟರ್‌ ಹೇಳಿಕೆಯ ಬೆನ್ನಲ್ಲೇ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಹತ್ಯೆಗೆ ದೇಶ ಸಾಕ್ಷಿಯಾಗಿತ್ತು. ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರ ಅವರ ಪುತ್ರ ಆಶೀಶ್‌ ಮಿಶ್ರನಿದ್ದ ಕಾರು ಹರಿದು ರೈತರನ್ನು ಕೊಲ್ಲಲಾಯಿತು.


ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...