Homeಚಳವಳಿಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ಅಲ್ಲಿಂದ ನೇರಪ್ರಸಾರವಾಗುತ್ತಿರುವ ಕಾರ್ಯಕ್ರಮವನ್ನು ವೀಕ್ಷಿಸಲು ದೇವಸ್ಥಾನಕ್ಕೆ ತೆರಳಿದ್ದ ಹಲವಾರು ಬಿಜೆಪಿ ನಾಯಕರಿಗೆ ಹರಿಯಾಣ ರೈತರು ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಸುಮಾರು ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅದರ ಭಾಗವಾಗಿ ಬಿಜೆಪಿ ನಾಯಕರಿಗೆ ಘೇರಾವ್ ಹಾಕಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಪ್ರತಿಭಟನಾಕಾರರು ನಿರ್ದಿಷ್ಟವಾಗಿ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮನೀಶ್ ಗ್ರೋವರ್ ಅವರ ನಡೆಯನ್ನು ಖಂಡಿಸಿದರು. ಮನೀಶ್‌ ಅವರು ರೈತರ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ರೈತರು ಆರೋಪಿಸಿದರು.

ಮಾಜಿ ಸಚಿವ ಮನೀಶ್ ಗ್ರೋವರ್

ಮಾಜಿ ಸಚಿವರು ಕ್ಷಮೆಯಾಚಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಮತ್ತು ಇತರೆ ಪಕ್ಷದ ಸದಸ್ಯರು ಸುಮಾರು ಎಂಟು ಗಂಟೆಗಳ ಕಾಲ ದೇವಸ್ಥಾನದಲ್ಲಿ ಸಿಲುಕಿಕೊಳ್ಳಬೇಕಾಯಿತು.

ಅಂತಿಮವಾಗಿ, ಗ್ರೋವರ್ ಅವರು ಕೈ ಮಡಕಿ ರೈತರಲ್ಲಿ ಕ್ಷಮೆಯಾಚಿಸಿದರು. ನಂತರ ದೇವಸ್ಥಾನಕ್ಕೆ ಕೆಲವರು ತೆರಳಲು ಅನುಮತಿ ನೀಡಲಾಯಿತು ಎಂದು ರೈತರು ತಿಳಿಸಿದ್ದಾರೆ.

ಗುರಗಾಂವ್‌ನಿಂದ 78 ಕಿಮೀ ದೂರದಲ್ಲಿರುವ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರು. ಇಬ್ಬರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ದೆಹಲಿ-ಹಿಸಾರ್ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಹೊತ್ತು ಬಂದ್ ಮಾಡಲಾಗಿತ್ತು.

ಇದನ್ನೂ ಓದಿರಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ಮತ್ತೊಂದು ಘಟನೆ

ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಂಗ್ರಾ ಅವರು ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ಧರ್ಮಶಾಲಾ ಉದ್ಘಾಟಿಸಲು ತೆರಳಿದಾಗ ರೈತರು ಕಪ್ಪು ಭಾವುಟ ತೋರಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು ಮತ್ತು ರೈತರ ನಡುವಿನ ಗಲಾಟೆಯಲ್ಲಿ ಜುಂಗ್ರಾ ಅವರ ಕಾರಿನ ಗಾಜು ಒಡೆದುಹೋಯಿತು.

ರೈತ ಚಳವಳಿಯನ್ನು ತಡೆಯಲು ಬಿಜೆಪಿ ನಾಯಕರು ಮೊದಲಿನಿಂದಲೂ ಯತ್ನಿಸುತ್ತಿದ್ದಾರೆ. ಸ್ವತಃ ಹರ್ಯಾಣ ಮುಖ್ಯಮಂತ್ರಿ ಮನೋಹರ್‌‌ಲಾಲ್‌‌ ಖಟ್ಟರ್‌ ಅವರು, ರೈತರ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡುವಂತೆ ಪ್ರಚೋದಿಸಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದಕ್ಕೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು.

ಖಟ್ಟರ್‌ ಹೇಳಿಕೆಯ ಬೆನ್ನಲ್ಲೇ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಹತ್ಯೆಗೆ ದೇಶ ಸಾಕ್ಷಿಯಾಗಿತ್ತು. ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರ ಅವರ ಪುತ್ರ ಆಶೀಶ್‌ ಮಿಶ್ರನಿದ್ದ ಕಾರು ಹರಿದು ರೈತರನ್ನು ಕೊಲ್ಲಲಾಯಿತು.


ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...