Homeಚಳವಳಿಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ಅಲ್ಲಿಂದ ನೇರಪ್ರಸಾರವಾಗುತ್ತಿರುವ ಕಾರ್ಯಕ್ರಮವನ್ನು ವೀಕ್ಷಿಸಲು ದೇವಸ್ಥಾನಕ್ಕೆ ತೆರಳಿದ್ದ ಹಲವಾರು ಬಿಜೆಪಿ ನಾಯಕರಿಗೆ ಹರಿಯಾಣ ರೈತರು ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಸುಮಾರು ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅದರ ಭಾಗವಾಗಿ ಬಿಜೆಪಿ ನಾಯಕರಿಗೆ ಘೇರಾವ್ ಹಾಕಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಪ್ರತಿಭಟನಾಕಾರರು ನಿರ್ದಿಷ್ಟವಾಗಿ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮನೀಶ್ ಗ್ರೋವರ್ ಅವರ ನಡೆಯನ್ನು ಖಂಡಿಸಿದರು. ಮನೀಶ್‌ ಅವರು ರೈತರ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ರೈತರು ಆರೋಪಿಸಿದರು.

ಮಾಜಿ ಸಚಿವ ಮನೀಶ್ ಗ್ರೋವರ್

ಮಾಜಿ ಸಚಿವರು ಕ್ಷಮೆಯಾಚಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಮತ್ತು ಇತರೆ ಪಕ್ಷದ ಸದಸ್ಯರು ಸುಮಾರು ಎಂಟು ಗಂಟೆಗಳ ಕಾಲ ದೇವಸ್ಥಾನದಲ್ಲಿ ಸಿಲುಕಿಕೊಳ್ಳಬೇಕಾಯಿತು.

ಅಂತಿಮವಾಗಿ, ಗ್ರೋವರ್ ಅವರು ಕೈ ಮಡಕಿ ರೈತರಲ್ಲಿ ಕ್ಷಮೆಯಾಚಿಸಿದರು. ನಂತರ ದೇವಸ್ಥಾನಕ್ಕೆ ಕೆಲವರು ತೆರಳಲು ಅನುಮತಿ ನೀಡಲಾಯಿತು ಎಂದು ರೈತರು ತಿಳಿಸಿದ್ದಾರೆ.

ಗುರಗಾಂವ್‌ನಿಂದ 78 ಕಿಮೀ ದೂರದಲ್ಲಿರುವ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರು. ಇಬ್ಬರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ದೆಹಲಿ-ಹಿಸಾರ್ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಹೊತ್ತು ಬಂದ್ ಮಾಡಲಾಗಿತ್ತು.

ಇದನ್ನೂ ಓದಿರಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ಮತ್ತೊಂದು ಘಟನೆ

ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಂಗ್ರಾ ಅವರು ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ಧರ್ಮಶಾಲಾ ಉದ್ಘಾಟಿಸಲು ತೆರಳಿದಾಗ ರೈತರು ಕಪ್ಪು ಭಾವುಟ ತೋರಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು ಮತ್ತು ರೈತರ ನಡುವಿನ ಗಲಾಟೆಯಲ್ಲಿ ಜುಂಗ್ರಾ ಅವರ ಕಾರಿನ ಗಾಜು ಒಡೆದುಹೋಯಿತು.

ರೈತ ಚಳವಳಿಯನ್ನು ತಡೆಯಲು ಬಿಜೆಪಿ ನಾಯಕರು ಮೊದಲಿನಿಂದಲೂ ಯತ್ನಿಸುತ್ತಿದ್ದಾರೆ. ಸ್ವತಃ ಹರ್ಯಾಣ ಮುಖ್ಯಮಂತ್ರಿ ಮನೋಹರ್‌‌ಲಾಲ್‌‌ ಖಟ್ಟರ್‌ ಅವರು, ರೈತರ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡುವಂತೆ ಪ್ರಚೋದಿಸಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದಕ್ಕೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು.

ಖಟ್ಟರ್‌ ಹೇಳಿಕೆಯ ಬೆನ್ನಲ್ಲೇ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಹತ್ಯೆಗೆ ದೇಶ ಸಾಕ್ಷಿಯಾಗಿತ್ತು. ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರ ಅವರ ಪುತ್ರ ಆಶೀಶ್‌ ಮಿಶ್ರನಿದ್ದ ಕಾರು ಹರಿದು ರೈತರನ್ನು ಕೊಲ್ಲಲಾಯಿತು.


ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...