Homeಕರ್ನಾಟಕ'ಗೃಹಲಕ್ಷ್ಮಿ' ಯೋಜನೆಗೆ ಇಂದು ಚಾಲನೆ: ಮನೆ ಯಜಮಾನಿಗೆ 2000ರೂ. ಗ್ಯಾರಂಟಿ

‘ಗೃಹಲಕ್ಷ್ಮಿ’ ಯೋಜನೆಗೆ ಇಂದು ಚಾಲನೆ: ಮನೆ ಯಜಮಾನಿಗೆ 2000ರೂ. ಗ್ಯಾರಂಟಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ ಬಹುನೀರೀಕ್ಷಿತ ಗ್ಯಾರಂಟಿ ಎಂದರೆ ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮಿ’ ಯೋಜನೆಯಾಗಿದೆ. ಇಂದು (ಬುಧವಾರ) ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.

ಕಾಂಗ್ರೆಸ್ ಪಕ್ಷ ಚುನಾವಣೆಯ ಸಮಯದಲ್ಲಿ ಐದು ಗ್ಯಾರಂಟಿಗಳ ಆಶ್ವಾಸನೆ ನೀಡಿತ್ತು. ಅದರಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇದೀಗ ಬುಧವಾರ ಗೃಹಲಕ್ಷ್ಮಿ ಜಾರಿಗೆ ಬರುತ್ತಿದೆ. ‘ಯುವನಿಧಿ’ಯೊಂದು ಮಾತ್ರ ತಡವಾಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಕಾರ್ಯಕ್ರಮವನ್ನು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ರಾಜೀವ್ ಚಂದ್ರಶೇಖರ್, ಸ್ಪೀಕರ್ ಯು.ಟಿ.ಖಾದರ್, ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಬುಧವಾರ ನೋಂದಣಿ ಆರಂಭವಾಗುತ್ತದೆ. ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್​ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್​ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆ ನೀಡಿದ್ದಾರೆ.

ನಕಲಿ ಅರ್ಜಿಗಳ ಬಗ್ಗೆ ಎಚ್ಚರ:

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ನಮೂನೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ನೋಂದಾಯಿಸುವುದು ಹೇಗೆ?

ರೇಷನ್ ಕಾರ್ಡ್​ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್​ಎಂಎಸ್ ಮೂಲಕ ಕಳುಹಿಸಲಾಗುತ್ತದೆ.

ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.

ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.

ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್​ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.

ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.

ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್​ಗೆ ನೋಂದಣಿ ಮಾಡಿಸಬಹುದು.
ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.

ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.

ಡಿಸಿಗಳಿಗೆ ಸೂಚನೆ

* ಗೃಹಲಕ್ಷ್ಮಿ ನೋಂದಣಿ ಮಾಡುವ ಕೇಂದ್ರಗಳ ಮೇಲ್ವಿಚಾರಣೆಗೆ ಸರ್ಕಾರಿ ಅಧಿಕಾರಿ/ಸಿಬ್ಬಂದಿ ನಿಯೋಜನೆ.

* ಕೇಂದ್ರಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರ ನೇಮಕ.

* ವಿದ್ಯುತ್ ಕೈಕೊಟ್ಟರೆ ನೋಂದಣಿಗೆ ತೊಂದರೆಯಾಗದಂತೆ ಬ್ಯಾಟರಿ ಬ್ಯಾಕ್​ಅಪ್ ಹಾಗೂ ಸುಸ್ಥಿತಿಯಲ್ಲಿರುವ ಪ್ರಿಂಟರ್ ನೀಡುವುದು.

* ಪ್ರತಿ ತಾಲೂಕಿನಲ್ಲಿ ಹೆಲ್ಪ್​ಡೆಸ್ಕ್ ಸ್ಥಾಪನೆ.

* ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಪ್ರತಿನಿಧಿಗಳ ಪಟ್ಟಿ ಪಡೆದು ನೋಂದಣಿ ಮಾಡಿಸಿ ತರಬೇತಿ ನೀಡಬೇಕು.

* ನೋಂದಣಿ ಕೇಂದ್ರದಲ್ಲಿ ಮಳೆಯಿಂದ ರಕ್ಷಿಸಲು ಸೂಕ್ತ ರಕ್ಷಣೆ.

* ನೋಡಲ್ ಅಧಿಕಾರಿಗಳ ವಿವರಗಳನ್ನು ಇ-ಆಡಳಿತ ಇಲಾಖೆಯ ಲಿಂಕ್​ನಲ್ಲಿ ಅಪ್​ಲೋಡ್ ಮಾಡುವುದು.

ಇದನ್ನೂ ಓದಿ: 1.28 ಕೋಟಿ ಕುಟುಂಬಗಳಿಗೆ ಹಣ: ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...