Homeಮುಖಪುಟವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಕೊಡಬೇಕು ಎಂದು ಬಯಸಿದ್ದೆ- ಧರ್ಮೇಂದ್ರ ಅನಿಜಾ

- Advertisement -
- Advertisement -

ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ತನ್ನ ಪತ್ನಿಗೆ ಉಡುಗೊರೆ ನೀಡಲು ಚಂದ್ರನ ಮೇಲೆ ಮೂರು ಎಕರೆ ಭೂಮಿಯನ್ನು ಖರೀದಿಸಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಧರ್ಮೇಂದ್ರ ಅನಿಜಾ ಎಂಬುವವರು ತಮ್ಮ ಪತ್ನಿ ಸಪ್ನ ಅನಿಜಾ ಅವರಿಗೆ ಉಡುಗೊರೆ ನೀಡಲು ಲೂನಾ ಸೊಸೈಟಿ ಇಂಟರ್ನ್ಯಾಷನಲ್ ಮೂಲಕ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ್ದಾರೆ.

“ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ನಾನು ಅವಳಿಗೆ ವಿಶೇಷವಾಗಿ ಏನಾದರೂ ಕೊಡಬೇಕು ಎಂದು ಬಯಸಿದ್ದೆ. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಮಾಡಬೇಕು ಎಂದು ಬಯಸಿದ್ದೆ. ಆದ್ದರಿಂದ, ನಾನು ಅವಳಿಗೆ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

“ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ಬೇಕಾಯಿತು. ನಾನು ಸಂತೋಷವಾಗಿದ್ದೇನೆ. ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ ರಾಜಸ್ಥಾನದ ಮೊದಲ ವ್ಯಕ್ತಿ ನಾನೇ ಎಂದು ಭಾವಿಸುತ್ತೇನೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ.

ಈ ವಿಶೇಷವಾದ ಉಡುಗೊರೆಯನ್ನು ಸ್ವೀಕರಿಸಿದ ಸಪ್ನಾ ಅನಿಜಾ, “ಪ್ರಪಂಚದ ಹೊರಗಿನ ಉಡುಗೊರೆಯನ್ನು ಸ್ವೀಕರಿಸುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

“ಈವೆಂಟ್ ಮ್ಯಾನೇಜ್‌ಮೆಂಟ್‌ನವರು ಚಂದ್ರನ ಮೇಲ್ಮೈನಂತೆಯೇ ಸೆಟ್ ಹಾಕಿದ್ದರು. ನಿಜಕ್ಕೂ ನಾನು ಚಂದ್ರ ಗ್ರಹದ ಮೇಲೆಯೇ ಇದ್ದೇನೆ ಎಂದು ಭಾಸವಾಗುತ್ತಿತ್ತು. ಈ ಪಾರ್ಟಿಯಲ್ಲಿ ಆಸ್ತಿ ದಾಖಲೆಯ ಪ್ರಮಾಣಪತ್ರವನ್ನು ನನಗೆ ಉಡುಗೊರೆಯಾಗಿ ನೀಡಿದರು” ಎಂದು ಹೇಳಿದರು.

ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಸ್ಫೂರ್ತಿ ಪಡೆದ ಕೆಲವು ತಿಂಗಳ ನಂತರ, ಬೋಧ್ ಗಯಾ ನಿವಾಸಿ ನೀರಜ್ ಕುಮಾರ್, ತಮ್ಮ ಜನ್ಮದಿನದಂದು ಚಂದ್ರ ಗ್ರಹದಲ್ಲಿ ಒಂದು ಎಕರೆ ಭೂಮಿಯನ್ನು ಖರೀದಿಸಿದ್ದರು.


ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...