Homeಮುಖಪುಟವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಕೊಡಬೇಕು ಎಂದು ಬಯಸಿದ್ದೆ- ಧರ್ಮೇಂದ್ರ ಅನಿಜಾ

- Advertisement -
- Advertisement -

ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ತನ್ನ ಪತ್ನಿಗೆ ಉಡುಗೊರೆ ನೀಡಲು ಚಂದ್ರನ ಮೇಲೆ ಮೂರು ಎಕರೆ ಭೂಮಿಯನ್ನು ಖರೀದಿಸಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಧರ್ಮೇಂದ್ರ ಅನಿಜಾ ಎಂಬುವವರು ತಮ್ಮ ಪತ್ನಿ ಸಪ್ನ ಅನಿಜಾ ಅವರಿಗೆ ಉಡುಗೊರೆ ನೀಡಲು ಲೂನಾ ಸೊಸೈಟಿ ಇಂಟರ್ನ್ಯಾಷನಲ್ ಮೂಲಕ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ್ದಾರೆ.

“ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ನಾನು ಅವಳಿಗೆ ವಿಶೇಷವಾಗಿ ಏನಾದರೂ ಕೊಡಬೇಕು ಎಂದು ಬಯಸಿದ್ದೆ. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಮಾಡಬೇಕು ಎಂದು ಬಯಸಿದ್ದೆ. ಆದ್ದರಿಂದ, ನಾನು ಅವಳಿಗೆ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

“ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ಬೇಕಾಯಿತು. ನಾನು ಸಂತೋಷವಾಗಿದ್ದೇನೆ. ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ ರಾಜಸ್ಥಾನದ ಮೊದಲ ವ್ಯಕ್ತಿ ನಾನೇ ಎಂದು ಭಾವಿಸುತ್ತೇನೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ.

ಈ ವಿಶೇಷವಾದ ಉಡುಗೊರೆಯನ್ನು ಸ್ವೀಕರಿಸಿದ ಸಪ್ನಾ ಅನಿಜಾ, “ಪ್ರಪಂಚದ ಹೊರಗಿನ ಉಡುಗೊರೆಯನ್ನು ಸ್ವೀಕರಿಸುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

“ಈವೆಂಟ್ ಮ್ಯಾನೇಜ್‌ಮೆಂಟ್‌ನವರು ಚಂದ್ರನ ಮೇಲ್ಮೈನಂತೆಯೇ ಸೆಟ್ ಹಾಕಿದ್ದರು. ನಿಜಕ್ಕೂ ನಾನು ಚಂದ್ರ ಗ್ರಹದ ಮೇಲೆಯೇ ಇದ್ದೇನೆ ಎಂದು ಭಾಸವಾಗುತ್ತಿತ್ತು. ಈ ಪಾರ್ಟಿಯಲ್ಲಿ ಆಸ್ತಿ ದಾಖಲೆಯ ಪ್ರಮಾಣಪತ್ರವನ್ನು ನನಗೆ ಉಡುಗೊರೆಯಾಗಿ ನೀಡಿದರು” ಎಂದು ಹೇಳಿದರು.

ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಸ್ಫೂರ್ತಿ ಪಡೆದ ಕೆಲವು ತಿಂಗಳ ನಂತರ, ಬೋಧ್ ಗಯಾ ನಿವಾಸಿ ನೀರಜ್ ಕುಮಾರ್, ತಮ್ಮ ಜನ್ಮದಿನದಂದು ಚಂದ್ರ ಗ್ರಹದಲ್ಲಿ ಒಂದು ಎಕರೆ ಭೂಮಿಯನ್ನು ಖರೀದಿಸಿದ್ದರು.


ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...