Homeಮುಖಪುಟವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಕೊಡಬೇಕು ಎಂದು ಬಯಸಿದ್ದೆ- ಧರ್ಮೇಂದ್ರ ಅನಿಜಾ

- Advertisement -
- Advertisement -

ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ತನ್ನ ಪತ್ನಿಗೆ ಉಡುಗೊರೆ ನೀಡಲು ಚಂದ್ರನ ಮೇಲೆ ಮೂರು ಎಕರೆ ಭೂಮಿಯನ್ನು ಖರೀದಿಸಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಧರ್ಮೇಂದ್ರ ಅನಿಜಾ ಎಂಬುವವರು ತಮ್ಮ ಪತ್ನಿ ಸಪ್ನ ಅನಿಜಾ ಅವರಿಗೆ ಉಡುಗೊರೆ ನೀಡಲು ಲೂನಾ ಸೊಸೈಟಿ ಇಂಟರ್ನ್ಯಾಷನಲ್ ಮೂಲಕ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ್ದಾರೆ.

“ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ನಾನು ಅವಳಿಗೆ ವಿಶೇಷವಾಗಿ ಏನಾದರೂ ಕೊಡಬೇಕು ಎಂದು ಬಯಸಿದ್ದೆ. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಮಾಡಬೇಕು ಎಂದು ಬಯಸಿದ್ದೆ. ಆದ್ದರಿಂದ, ನಾನು ಅವಳಿಗೆ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

“ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ಬೇಕಾಯಿತು. ನಾನು ಸಂತೋಷವಾಗಿದ್ದೇನೆ. ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ ರಾಜಸ್ಥಾನದ ಮೊದಲ ವ್ಯಕ್ತಿ ನಾನೇ ಎಂದು ಭಾವಿಸುತ್ತೇನೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ.

ಈ ವಿಶೇಷವಾದ ಉಡುಗೊರೆಯನ್ನು ಸ್ವೀಕರಿಸಿದ ಸಪ್ನಾ ಅನಿಜಾ, “ಪ್ರಪಂಚದ ಹೊರಗಿನ ಉಡುಗೊರೆಯನ್ನು ಸ್ವೀಕರಿಸುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

“ಈವೆಂಟ್ ಮ್ಯಾನೇಜ್‌ಮೆಂಟ್‌ನವರು ಚಂದ್ರನ ಮೇಲ್ಮೈನಂತೆಯೇ ಸೆಟ್ ಹಾಕಿದ್ದರು. ನಿಜಕ್ಕೂ ನಾನು ಚಂದ್ರ ಗ್ರಹದ ಮೇಲೆಯೇ ಇದ್ದೇನೆ ಎಂದು ಭಾಸವಾಗುತ್ತಿತ್ತು. ಈ ಪಾರ್ಟಿಯಲ್ಲಿ ಆಸ್ತಿ ದಾಖಲೆಯ ಪ್ರಮಾಣಪತ್ರವನ್ನು ನನಗೆ ಉಡುಗೊರೆಯಾಗಿ ನೀಡಿದರು” ಎಂದು ಹೇಳಿದರು.

ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಸ್ಫೂರ್ತಿ ಪಡೆದ ಕೆಲವು ತಿಂಗಳ ನಂತರ, ಬೋಧ್ ಗಯಾ ನಿವಾಸಿ ನೀರಜ್ ಕುಮಾರ್, ತಮ್ಮ ಜನ್ಮದಿನದಂದು ಚಂದ್ರ ಗ್ರಹದಲ್ಲಿ ಒಂದು ಎಕರೆ ಭೂಮಿಯನ್ನು ಖರೀದಿಸಿದ್ದರು.


ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...