Homeಮುಖಪುಟಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

ಯುವತಿಯ ತಂದೆ ದಲಿತ ಯುವಕನ ಕುಟುಂಬಕ್ಕೆ ಘಟನೆ ಕುರಿತು ಪೊಲೀಸರಿಗೆ ದೂರು ನೀಡದಂತೆ ಬೆದರಿಕೆಯನ್ನು ಸಹ ಹಾಕಿದ್ದಾನೆ.

- Advertisement -
- Advertisement -

ಮೇಲ್ಜಾತಿಯ ಯುವತಿಗೆ ಮೊಬೈಲ್‌ ಉಡುಗೊರೆ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೊಳಿಸಿ, ಚಪ್ಪಲಿ ಹಾರ ಹಾಕಿ, ಎಂಜಲು ತಿನ್ನಿಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಜಾತಿ ದೌರ್ಜನ್ಯಕ್ಕೆ ಒಳಗಾದ ಯುವಕನನ್ನು 20 ವರ್ಷ ವಯಸ್ಸಿನ ರಾಜಕುಮಾರ್‌ ಮೆಹ್ರಾ ಎಂದು ಗುರುತಿಸಲಾಗಿದೆ.

ರಾಜ್‌ಕುಮಾರ್‌ ಮೆಹ್ರಾ ಮೇಲ್ಜಾತಿಗೆ ಸೇರಿದ 19 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ರಾಜ್‌ಕುಮಾರ್‌ ಮೆಹ್ರಾ ಬಳಿ ಸ್ಮಾರ್ಟ್‌ ಫೋನ್‌ ಕೊಡಿಸುವಂತೆ ಕೇಳಿದ್ದಾಳೆ. ಸಂತ್ರಸ್ತ ರಾಜ್‌ಕುಮಾರ್‌ ಮೊಬೈಲ್‌ ಫೋನ್‌ ಅನ್ನು ಉಡುಗೊರೆಯಾಗಿ ನೀಡಿದ್ದಕ್ಕೆ ಮೇಲ್ಜಾತಿ ಜನರು ದೌರ್ಜನ್ಯವೆಸಗಿದ್ದಾರೆ. ಘಟನೆಯಲ್ಲಿ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯೊಬ್ಬನನ್ನು ಆರೋಪಿಗಳು ಮನೆಯಲ್ಲಿ ಬಂಧಿಸಿಟ್ಟಿದ್ದಾರೆ.

ಮೇಲ್ಜಾತಿಯ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕ ರಾಜ್‌ಕುಮಾರ್‌ ಮೆಹ್ರಾ ಮತ್ತು ಆತನ ಸ್ನೇಹಿತರ ತಲೆ ಬೋಳಿಸಿ ಒಬ್ಬರ ಎಂಜಲು ಇನ್ನೊಬ್ಬರು ಸೇವಿಸುವಂತೆ ಮಾಡಿರುವ ಅಮಾನವೀಯ ದೌರ್ಜನ್ಯ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೇಲ್ಜಾತಿಯ ಯುವಕರು ದಲಿತ ಯುವಕರಿಗೆ ಚಪ್ಪಲ್ಲಿಯ ಹಾರಹಾಕಿ ಹಳ್ಳಿಯಲ್ಲಿ ಮೆರವಣಿಗೆಯನ್ನು ಮಾಡುವ ಮೂಲಕ ಅಮಾನುಷ ದೌರ್ಜನ್ಯ ಎಸಗಿದ್ದಾರೆ.

ಘಟನೆ ಮೇ 22 ರಂದು ಜಬಲ್‌ಪುರ ಜಿಲ್ಲೆಯ ಚಾರ್‌ಗಾವ್‌ ಪೋಲಿಸ್‌ ಸ್ಟೇಷನ್‌ ವ್ಯಾಪ್ತಿಯ ದಮನ್‌ ಕಮರಿಯಾ ಹಳ್ಳಿಯಲ್ಲಿ ನಡೆದಿದೆ. ಅಮಾನವೀಯ ದೌರ್ಜನ್ಯದ ವಿಡಿಯೋ ಮೇ 30ರ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಿಡಿಯೋ ಆಧಾರದಲ್ಲಿ ಪೊಲೀಸರು ದೌರ್ಜನ್ಯಕ್ಕೊಳಗಾದ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳು ದೂರು ನೀಡಿದರೆ ಗಂಭೀರ ಪರಿಣಾಮ ಎದುರಿಸುವ ಬೆದರಿಕೆ ಹಾಕಿದ್ದರಿಂದ ತಾನು ಪೊಲೀಸರಿಗೆ ಘಟನೆ ಕುರಿತು ಮಾಹಿತಿ ನೀಡಲಿಲ್ಲ ಎಂದು ಸಂತ್ರಸ್ತ ಯುವಕ ರಾಜ್‌ಕುಮಾರ್‌ ಮೆಹ್ರಾ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ರಾಜ್‌ಕುಮಾರ್‌ ಹೇಳಿಕೆ ಆಧಾರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಾವಿಬ್ಬರೂ ಮಾತನಾಡುವುದಕ್ಕಾಗಿ ನನ್ನ ಸ್ನೇಹಿತೆ ಮೊಬೈಲ್‌ ಕೇಳಿದಳು. ನಾನು ಸ್ನೇಹಿತ ಮಹೇಂದ್ರನಿಂದ ಪೋನ್‌ ಪಡೆದು ನನ್ನ ಗೆಳತಿಗೆ ನೀಡಿದೆ. ಮೇ 22 ರಂದು ಯುವತಿಯ ತಂದೆ ತನ್ನ ಮಗಳು ಮೊಬೈಲ್‌ ಸಂಭಾಷಣೆಯಲ್ಲಿ ನಿರತವಾಗಿರುವುದನ್ನು ಕಂಡು ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ಯುವತಿಯನ್ನು ವಿಚಾರಿಸಿದಾಗ ರಾಜ್‌ಕುಮಾರ್‌ ಮೆಹ್ರಾ ವಿಚಾರ ಅವರಿಗೆ ತಿಳಿದಿದೆ.

ಮೊಬೈಲ್‌ ಘಟನೆಯಿಂದ ಕೋಪಗೊಂಡ ಯುವತಿಯ ತಂದೆ ದಲಿತ ಯುವಕರನ್ನು ಮನೆಗೆ ಕರೆಸಿ ಮನಸೋ ಇಚ್ಚೆ ಥಳಿಸಿದ್ದಾರೆ. ನಂತರ ಯುವಕರ ತಲೆ ಬೋಳಿಸಿ ಚಪ್ಪಲ್ಲಿ ಹಾರ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ಒಬ್ಬರ ಕಫವನ್ನು ಇನ್ನೊಬ್ಬರಿಗೆ ತಿನ್ನಿಸಿ ಅಮಾನವೀಯವಾದ ದೌರ್ಜನ್ಯವನ್ನು ನಡೆಸಿದ್ದಾರೆ.

ಯುವತಿಯ ತಂದೆ ದಲಿತ ಯುವಕನ ಕುಟುಂಬಕ್ಕೆ ಘಟನೆ ಕುರಿತು ಪೊಲೀಸರಿಗೆ ದೂರು ನೀಡದಂತೆ ಬೆದರಿಕೆಯನ್ನು ಸಹ ಹಾಕಿದ್ದಾನೆ.

ಅಮಾನವೀಯ ಘಟನೆ ಸಂಬಂಧ ಯುವತಿಯ ತಂದೆ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿರುವುದಾಗಿ ಚಾರ್‌ಗಾವ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ರಿತೇಶ್‌ ಪಾಂಡೆ ತಿಳಿಸಿದ್ದಾರೆ.


ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...