Homeಮುಖಪುಟಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು...

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

- Advertisement -
- Advertisement -

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ.

ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರು, ವಿಶೇಷವಾಗಿ ಆ್ಯಪ್ ಆಧಾರಿತ ಆಹಾರ ವಿತರಣಾ ಏಜೆಂಟ್‌ಗಳು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಆಹಾರ ವಿತರಣೆ ಮತ್ತು ತ್ವರಿತ ವಾಣಿಜ್ಯ ಸೇವೆಗಳಲ್ಲಿ ಕೆಲವು ಅಡಚಣೆಗಳನ್ನು ಉಂಟಾಗಿರುವ ಬಗ್ಗೆ ವರದಿಯಾಗಿದೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಪ್ರತಿಭಟಿಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ  ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಪ್ರತಿಭಟನೆಯ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

 ಆ್ಯಪ್ ಕಂಪನಿಗಳು ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಎರಡು ಬಹು ಬೇಡಿಕೆಯ ದಿನಗಳಾದ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದಂದು ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...