Homeಮುಖಪುಟಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು...

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

- Advertisement -
- Advertisement -

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ.

ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರು, ವಿಶೇಷವಾಗಿ ಆ್ಯಪ್ ಆಧಾರಿತ ಆಹಾರ ವಿತರಣಾ ಏಜೆಂಟ್‌ಗಳು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಆಹಾರ ವಿತರಣೆ ಮತ್ತು ತ್ವರಿತ ವಾಣಿಜ್ಯ ಸೇವೆಗಳಲ್ಲಿ ಕೆಲವು ಅಡಚಣೆಗಳನ್ನು ಉಂಟಾಗಿರುವ ಬಗ್ಗೆ ವರದಿಯಾಗಿದೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಪ್ರತಿಭಟಿಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ  ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಪ್ರತಿಭಟನೆಯ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

 ಆ್ಯಪ್ ಕಂಪನಿಗಳು ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಎರಡು ಬಹು ಬೇಡಿಕೆಯ ದಿನಗಳಾದ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದಂದು ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...