Homeಮುಖಪುಟಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು...

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

- Advertisement -
- Advertisement -

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ.

ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರು, ವಿಶೇಷವಾಗಿ ಆ್ಯಪ್ ಆಧಾರಿತ ಆಹಾರ ವಿತರಣಾ ಏಜೆಂಟ್‌ಗಳು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಆಹಾರ ವಿತರಣೆ ಮತ್ತು ತ್ವರಿತ ವಾಣಿಜ್ಯ ಸೇವೆಗಳಲ್ಲಿ ಕೆಲವು ಅಡಚಣೆಗಳನ್ನು ಉಂಟಾಗಿರುವ ಬಗ್ಗೆ ವರದಿಯಾಗಿದೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಪ್ರತಿಭಟಿಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ  ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಪ್ರತಿಭಟನೆಯ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

 ಆ್ಯಪ್ ಕಂಪನಿಗಳು ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಎರಡು ಬಹು ಬೇಡಿಕೆಯ ದಿನಗಳಾದ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದಂದು ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...