Homeಕರ್ನಾಟಕಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ-2025 ವಿಧಾನಸಭೆಯ ಮಂಗಳವಾರ (ಆ.19) ಅಂಗೀಕಾರಗೊಂಡಿದೆ.

ಗಿಗ್ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಈ ವಿಧೇಯಕ ಸಾಮಾಜಿಕ ಭದ್ರತೆ, ಔದ್ಯೋಗಿಕ ಆರೋಗ್ಯ ಮತ್ತು ಗಿಗ್ ಕಾರ್ಮಿಕರ ಸುರಕ್ಷತೆಗಾಗಿ ಅಗ್ರಿಗೇಟರ್‌ಗಳ ಮೇಲೆ ಜವಾಬ್ದಾರಿಗಳನ್ನು ಹೇರುವ ಗುರಿಯನ್ನು ಹೊಂದಿದೆ. ಇದು ರಾಜ್ಯಾದ್ಯಂತ ವಿವಿಧ ವೇದಿಕೆಗಳಲ್ಲಿ ಕೆಲಸ ಮಾಡುವ ಸುಮಾರು 4 ಲಕ್ಷ ಗಿಗ್ ಕಾರ್ಮಿಕರನ್ನು ಒಳಗೊಳ್ಳುತ್ತದೆ.

ವಿಧಾನಸಭೆ ಶಾಸನ ರಚನೆ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ವಿಧೇಯಕವನ್ನು ಮಂಡಿಸಿದರು. ಬಳಿಕ ವಿವರಣೆ ನೀಡಿದ ಅವರು, ಇದು ಸವಾರಿ ಹಂಚಿಕೆ, ಆಹಾರ ಮತ್ತು ಕಿರಾಣಿ ವಿತರಣೆ, ಲಾಜಿಸ್ಟಿಕ್ಸ್ ಸೇವೆಗಳು, ಇ-ಮಾರುಕಟ್ಟೆ, ವೃತ್ತಿಪರ ಸೇವೆಗಳನ್ನು ಒದಗಿಸುವವರು, ಆರೋಗ್ಯ ಸಂರಕ್ಷಣೆ, ಪ್ರವಾಸ ಮತ್ತು ಆತಿಥ್ಯ, ವಿಷಯ ಮತ್ತು ಮಾಧ್ಯಮ ಸೇವೆಗಳು ಸೇರಿ ಒಟ್ಟು ಎಂಟು ಸೇವೆಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಿದರು.

ಈ ಮಸೂದೆಯು ಸರ್ಕಾರ ಗಿಗ್ ಕಾರ್ಮಿಕರ ಕಲ್ಯಾಣ ನಿಧಿಗಾಗಿ ಅಗ್ರಿಗೇಟರ್‌ಗಳ ಮೇಲೆ ಶೇಕಡಾ 1 ರಿಂದ 5 ರವರೆಗೆ ಕಲ್ಯಾಣ ಶುಲ್ಕವನ್ನು ವಿಧಿಸಲು ಅವಕಾಶ ನೀಡುತ್ತದೆ. ಈ ಶುಲ್ಕವನ್ನು ಏಕರೂಪವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಹಾಗಾಗಿ, ನಿಯಮಗಳನ್ನು ರೂಪಿಸಿದಾಗ ಸರ್ಕಾರವು ಕಲ್ಯಾಣ ಶುಲ್ಕವನ್ನು ಸಹ ನಿರ್ಧರಿಸುತ್ತದೆ” ಎಂದು ಸಂತೋಷ್ ಲಾಡ್ ಹೇಳಿದರು.

ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ವಿವಿಧ ಅಗ್ರಿಗೇಟರ್‌ಗಳಿಗೆ ಶುಲ್ಕದಲ್ಲಿನ ವ್ಯತ್ಯಾಸವು ಭ್ರಷ್ಟಾಚಾರಕ್ಕೆ ಕಾರಣವಾಗಬಹುದು ಎಂದು ಹೇಳಿದರು. ಒಂದೇ ರೀತಿಯ ದರ ನಿಗದಿಪಡಿಸುವುದು ಸೂಕ್ತ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ವಿವಿಧ ಅಗ್ರಿಗೇಟರ್‌ಗಳಲ್ಲಿ ವ್ಯತ್ಯಾಸಗಳಿರುವುದರಿಂದ ಹಾಗೆ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ : ನಮ್ಮ ಯಾತ್ರಿ (ರೈಡ್-ಹೇಲಿಂಗ್ ಅಪ್ಲಿಕೇಶನ್) ನೇರವಾಗಿ ವಿಧಿಸುವ ಮೊತ್ತವನ್ನು (ಚಾಲಕರಿಗೆ) ವರ್ಗಾಯಿಸುತ್ತದೆ. ಹಾಗಾದರೆ, ನಾವು ಅದನ್ನು ಬಳಕೆದಾರ ಶುಲ್ಕದಿಂದ ತೆಗೆದುಕೊಳ್ಳಬೇಕೇ? ಅರ್ಬನ್ ಕ್ಲಾಪ್‌ನಂತಹ ಕಂಪನಿಗಳು ಸೇವಾ ಮತ್ತು ಸಾರಿಗೆ ಶುಲ್ಕವನ್ನು ಪಾವತಿಸುತ್ತವೆ. ಅದನ್ನು ಅವರಿಂದ ಹೇಗೆ ಸಂಗ್ರಹಿಸಬೇಕು?” ಎಂದು ಪ್ರಶ್ನಿಸಿದರು. ಶುಲ್ಕವನ್ನು ಅಂತಿಮಗೊಳಿಸಲು ಸರ್ಕಾರ ತಜ್ಞರೊಂದಿಗೆ ಚರ್ಚೆ ನಡೆಸಿದೆ ಎಂದು ತಿಳಿಸಿದರು.

ವಿಧೇಯಕದ ಅಗತ್ಯವನ್ನು ವಿವರಿಸಿದ ಸಚಿವರು, ಕೆಲವು ಗಿಗ್ ಕಾರ್ಮಿಕರು ಸುಮಾರು 1,600 ರಿಂದ 1,800 ರೂ. ಗಳಿಸಲು 16 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಕೆಲಸದ ಕಾರಣದಿಂದಾಗಿ, ಈ ಕಾರ್ಮಿಕರು ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಬಿಜೆಪಿ ಶಾಸಕ ಧೀರಜ್ ಮುನಿರಾಜು ಮಾತನಾಡಿ, “ಸರ್ಕಾರ ಗಿಗ್ ಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಗರಿಷ್ಠ ಕೆಲಸದ ಸಮಯವನ್ನು ನಿಗದಿಪಡಿಸಬಹುದೇ? ಎಂದು ಕೇಳಿದರು. ಎಲ್ಲಾ ಗಿಗ್ ಕೆಲಸಗಾರರನ್ನು ‘ಫ್ಲೆಕ್ಸಿ-ಹವರ್ ಆಧಾರದ ಮೇಲೆ’ ನೇಮಿಸಿಕೊಳ್ಳಲಾಗುತ್ತದೆ ಮತ್ತು ಅವರು ಬಯಸಿದಷ್ಟು ಕೆಲಸ ಮಾಡಲು ಸ್ವತಂತ್ರರು ಎಂದು ಸಚಿವರು ಉತ್ತರಿಸಿರು. ಅವರಿಗೆ ಕೆಲಸವನ್ನು ನಿರಾಕರಿಸುವ ಹಕ್ಕಿದೆ’ಎಂದು ತಿಳಿಸಿದರು.

ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುದಕ್ಕೂ ಮೊದಲು ಸರ್ಕಾರ ಈ ವರ್ಷದ ಆರಂಭದಲ್ಲಿ ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು.

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...