Homeಕರ್ನಾಟಕಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ-2025 ವಿಧಾನಸಭೆಯ ಮಂಗಳವಾರ (ಆ.19) ಅಂಗೀಕಾರಗೊಂಡಿದೆ.

ಗಿಗ್ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಈ ವಿಧೇಯಕ ಸಾಮಾಜಿಕ ಭದ್ರತೆ, ಔದ್ಯೋಗಿಕ ಆರೋಗ್ಯ ಮತ್ತು ಗಿಗ್ ಕಾರ್ಮಿಕರ ಸುರಕ್ಷತೆಗಾಗಿ ಅಗ್ರಿಗೇಟರ್‌ಗಳ ಮೇಲೆ ಜವಾಬ್ದಾರಿಗಳನ್ನು ಹೇರುವ ಗುರಿಯನ್ನು ಹೊಂದಿದೆ. ಇದು ರಾಜ್ಯಾದ್ಯಂತ ವಿವಿಧ ವೇದಿಕೆಗಳಲ್ಲಿ ಕೆಲಸ ಮಾಡುವ ಸುಮಾರು 4 ಲಕ್ಷ ಗಿಗ್ ಕಾರ್ಮಿಕರನ್ನು ಒಳಗೊಳ್ಳುತ್ತದೆ.

ವಿಧಾನಸಭೆ ಶಾಸನ ರಚನೆ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ವಿಧೇಯಕವನ್ನು ಮಂಡಿಸಿದರು. ಬಳಿಕ ವಿವರಣೆ ನೀಡಿದ ಅವರು, ಇದು ಸವಾರಿ ಹಂಚಿಕೆ, ಆಹಾರ ಮತ್ತು ಕಿರಾಣಿ ವಿತರಣೆ, ಲಾಜಿಸ್ಟಿಕ್ಸ್ ಸೇವೆಗಳು, ಇ-ಮಾರುಕಟ್ಟೆ, ವೃತ್ತಿಪರ ಸೇವೆಗಳನ್ನು ಒದಗಿಸುವವರು, ಆರೋಗ್ಯ ಸಂರಕ್ಷಣೆ, ಪ್ರವಾಸ ಮತ್ತು ಆತಿಥ್ಯ, ವಿಷಯ ಮತ್ತು ಮಾಧ್ಯಮ ಸೇವೆಗಳು ಸೇರಿ ಒಟ್ಟು ಎಂಟು ಸೇವೆಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಿದರು.

ಈ ಮಸೂದೆಯು ಸರ್ಕಾರ ಗಿಗ್ ಕಾರ್ಮಿಕರ ಕಲ್ಯಾಣ ನಿಧಿಗಾಗಿ ಅಗ್ರಿಗೇಟರ್‌ಗಳ ಮೇಲೆ ಶೇಕಡಾ 1 ರಿಂದ 5 ರವರೆಗೆ ಕಲ್ಯಾಣ ಶುಲ್ಕವನ್ನು ವಿಧಿಸಲು ಅವಕಾಶ ನೀಡುತ್ತದೆ. ಈ ಶುಲ್ಕವನ್ನು ಏಕರೂಪವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಹಾಗಾಗಿ, ನಿಯಮಗಳನ್ನು ರೂಪಿಸಿದಾಗ ಸರ್ಕಾರವು ಕಲ್ಯಾಣ ಶುಲ್ಕವನ್ನು ಸಹ ನಿರ್ಧರಿಸುತ್ತದೆ” ಎಂದು ಸಂತೋಷ್ ಲಾಡ್ ಹೇಳಿದರು.

ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ವಿವಿಧ ಅಗ್ರಿಗೇಟರ್‌ಗಳಿಗೆ ಶುಲ್ಕದಲ್ಲಿನ ವ್ಯತ್ಯಾಸವು ಭ್ರಷ್ಟಾಚಾರಕ್ಕೆ ಕಾರಣವಾಗಬಹುದು ಎಂದು ಹೇಳಿದರು. ಒಂದೇ ರೀತಿಯ ದರ ನಿಗದಿಪಡಿಸುವುದು ಸೂಕ್ತ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ವಿವಿಧ ಅಗ್ರಿಗೇಟರ್‌ಗಳಲ್ಲಿ ವ್ಯತ್ಯಾಸಗಳಿರುವುದರಿಂದ ಹಾಗೆ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ : ನಮ್ಮ ಯಾತ್ರಿ (ರೈಡ್-ಹೇಲಿಂಗ್ ಅಪ್ಲಿಕೇಶನ್) ನೇರವಾಗಿ ವಿಧಿಸುವ ಮೊತ್ತವನ್ನು (ಚಾಲಕರಿಗೆ) ವರ್ಗಾಯಿಸುತ್ತದೆ. ಹಾಗಾದರೆ, ನಾವು ಅದನ್ನು ಬಳಕೆದಾರ ಶುಲ್ಕದಿಂದ ತೆಗೆದುಕೊಳ್ಳಬೇಕೇ? ಅರ್ಬನ್ ಕ್ಲಾಪ್‌ನಂತಹ ಕಂಪನಿಗಳು ಸೇವಾ ಮತ್ತು ಸಾರಿಗೆ ಶುಲ್ಕವನ್ನು ಪಾವತಿಸುತ್ತವೆ. ಅದನ್ನು ಅವರಿಂದ ಹೇಗೆ ಸಂಗ್ರಹಿಸಬೇಕು?” ಎಂದು ಪ್ರಶ್ನಿಸಿದರು. ಶುಲ್ಕವನ್ನು ಅಂತಿಮಗೊಳಿಸಲು ಸರ್ಕಾರ ತಜ್ಞರೊಂದಿಗೆ ಚರ್ಚೆ ನಡೆಸಿದೆ ಎಂದು ತಿಳಿಸಿದರು.

ವಿಧೇಯಕದ ಅಗತ್ಯವನ್ನು ವಿವರಿಸಿದ ಸಚಿವರು, ಕೆಲವು ಗಿಗ್ ಕಾರ್ಮಿಕರು ಸುಮಾರು 1,600 ರಿಂದ 1,800 ರೂ. ಗಳಿಸಲು 16 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಕೆಲಸದ ಕಾರಣದಿಂದಾಗಿ, ಈ ಕಾರ್ಮಿಕರು ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಬಿಜೆಪಿ ಶಾಸಕ ಧೀರಜ್ ಮುನಿರಾಜು ಮಾತನಾಡಿ, “ಸರ್ಕಾರ ಗಿಗ್ ಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಗರಿಷ್ಠ ಕೆಲಸದ ಸಮಯವನ್ನು ನಿಗದಿಪಡಿಸಬಹುದೇ? ಎಂದು ಕೇಳಿದರು. ಎಲ್ಲಾ ಗಿಗ್ ಕೆಲಸಗಾರರನ್ನು ‘ಫ್ಲೆಕ್ಸಿ-ಹವರ್ ಆಧಾರದ ಮೇಲೆ’ ನೇಮಿಸಿಕೊಳ್ಳಲಾಗುತ್ತದೆ ಮತ್ತು ಅವರು ಬಯಸಿದಷ್ಟು ಕೆಲಸ ಮಾಡಲು ಸ್ವತಂತ್ರರು ಎಂದು ಸಚಿವರು ಉತ್ತರಿಸಿರು. ಅವರಿಗೆ ಕೆಲಸವನ್ನು ನಿರಾಕರಿಸುವ ಹಕ್ಕಿದೆ’ಎಂದು ತಿಳಿಸಿದರು.

ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುದಕ್ಕೂ ಮೊದಲು ಸರ್ಕಾರ ಈ ವರ್ಷದ ಆರಂಭದಲ್ಲಿ ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು.

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...