Homeಕರ್ನಾಟಕಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ-2025 ವಿಧಾನಸಭೆಯ ಮಂಗಳವಾರ (ಆ.19) ಅಂಗೀಕಾರಗೊಂಡಿದೆ.

ಗಿಗ್ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಈ ವಿಧೇಯಕ ಸಾಮಾಜಿಕ ಭದ್ರತೆ, ಔದ್ಯೋಗಿಕ ಆರೋಗ್ಯ ಮತ್ತು ಗಿಗ್ ಕಾರ್ಮಿಕರ ಸುರಕ್ಷತೆಗಾಗಿ ಅಗ್ರಿಗೇಟರ್‌ಗಳ ಮೇಲೆ ಜವಾಬ್ದಾರಿಗಳನ್ನು ಹೇರುವ ಗುರಿಯನ್ನು ಹೊಂದಿದೆ. ಇದು ರಾಜ್ಯಾದ್ಯಂತ ವಿವಿಧ ವೇದಿಕೆಗಳಲ್ಲಿ ಕೆಲಸ ಮಾಡುವ ಸುಮಾರು 4 ಲಕ್ಷ ಗಿಗ್ ಕಾರ್ಮಿಕರನ್ನು ಒಳಗೊಳ್ಳುತ್ತದೆ.

ವಿಧಾನಸಭೆ ಶಾಸನ ರಚನೆ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ವಿಧೇಯಕವನ್ನು ಮಂಡಿಸಿದರು. ಬಳಿಕ ವಿವರಣೆ ನೀಡಿದ ಅವರು, ಇದು ಸವಾರಿ ಹಂಚಿಕೆ, ಆಹಾರ ಮತ್ತು ಕಿರಾಣಿ ವಿತರಣೆ, ಲಾಜಿಸ್ಟಿಕ್ಸ್ ಸೇವೆಗಳು, ಇ-ಮಾರುಕಟ್ಟೆ, ವೃತ್ತಿಪರ ಸೇವೆಗಳನ್ನು ಒದಗಿಸುವವರು, ಆರೋಗ್ಯ ಸಂರಕ್ಷಣೆ, ಪ್ರವಾಸ ಮತ್ತು ಆತಿಥ್ಯ, ವಿಷಯ ಮತ್ತು ಮಾಧ್ಯಮ ಸೇವೆಗಳು ಸೇರಿ ಒಟ್ಟು ಎಂಟು ಸೇವೆಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಿದರು.

ಈ ಮಸೂದೆಯು ಸರ್ಕಾರ ಗಿಗ್ ಕಾರ್ಮಿಕರ ಕಲ್ಯಾಣ ನಿಧಿಗಾಗಿ ಅಗ್ರಿಗೇಟರ್‌ಗಳ ಮೇಲೆ ಶೇಕಡಾ 1 ರಿಂದ 5 ರವರೆಗೆ ಕಲ್ಯಾಣ ಶುಲ್ಕವನ್ನು ವಿಧಿಸಲು ಅವಕಾಶ ನೀಡುತ್ತದೆ. ಈ ಶುಲ್ಕವನ್ನು ಏಕರೂಪವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಹಾಗಾಗಿ, ನಿಯಮಗಳನ್ನು ರೂಪಿಸಿದಾಗ ಸರ್ಕಾರವು ಕಲ್ಯಾಣ ಶುಲ್ಕವನ್ನು ಸಹ ನಿರ್ಧರಿಸುತ್ತದೆ” ಎಂದು ಸಂತೋಷ್ ಲಾಡ್ ಹೇಳಿದರು.

ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ವಿವಿಧ ಅಗ್ರಿಗೇಟರ್‌ಗಳಿಗೆ ಶುಲ್ಕದಲ್ಲಿನ ವ್ಯತ್ಯಾಸವು ಭ್ರಷ್ಟಾಚಾರಕ್ಕೆ ಕಾರಣವಾಗಬಹುದು ಎಂದು ಹೇಳಿದರು. ಒಂದೇ ರೀತಿಯ ದರ ನಿಗದಿಪಡಿಸುವುದು ಸೂಕ್ತ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ವಿವಿಧ ಅಗ್ರಿಗೇಟರ್‌ಗಳಲ್ಲಿ ವ್ಯತ್ಯಾಸಗಳಿರುವುದರಿಂದ ಹಾಗೆ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ : ನಮ್ಮ ಯಾತ್ರಿ (ರೈಡ್-ಹೇಲಿಂಗ್ ಅಪ್ಲಿಕೇಶನ್) ನೇರವಾಗಿ ವಿಧಿಸುವ ಮೊತ್ತವನ್ನು (ಚಾಲಕರಿಗೆ) ವರ್ಗಾಯಿಸುತ್ತದೆ. ಹಾಗಾದರೆ, ನಾವು ಅದನ್ನು ಬಳಕೆದಾರ ಶುಲ್ಕದಿಂದ ತೆಗೆದುಕೊಳ್ಳಬೇಕೇ? ಅರ್ಬನ್ ಕ್ಲಾಪ್‌ನಂತಹ ಕಂಪನಿಗಳು ಸೇವಾ ಮತ್ತು ಸಾರಿಗೆ ಶುಲ್ಕವನ್ನು ಪಾವತಿಸುತ್ತವೆ. ಅದನ್ನು ಅವರಿಂದ ಹೇಗೆ ಸಂಗ್ರಹಿಸಬೇಕು?” ಎಂದು ಪ್ರಶ್ನಿಸಿದರು. ಶುಲ್ಕವನ್ನು ಅಂತಿಮಗೊಳಿಸಲು ಸರ್ಕಾರ ತಜ್ಞರೊಂದಿಗೆ ಚರ್ಚೆ ನಡೆಸಿದೆ ಎಂದು ತಿಳಿಸಿದರು.

ವಿಧೇಯಕದ ಅಗತ್ಯವನ್ನು ವಿವರಿಸಿದ ಸಚಿವರು, ಕೆಲವು ಗಿಗ್ ಕಾರ್ಮಿಕರು ಸುಮಾರು 1,600 ರಿಂದ 1,800 ರೂ. ಗಳಿಸಲು 16 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಕೆಲಸದ ಕಾರಣದಿಂದಾಗಿ, ಈ ಕಾರ್ಮಿಕರು ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಬಿಜೆಪಿ ಶಾಸಕ ಧೀರಜ್ ಮುನಿರಾಜು ಮಾತನಾಡಿ, “ಸರ್ಕಾರ ಗಿಗ್ ಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಗರಿಷ್ಠ ಕೆಲಸದ ಸಮಯವನ್ನು ನಿಗದಿಪಡಿಸಬಹುದೇ? ಎಂದು ಕೇಳಿದರು. ಎಲ್ಲಾ ಗಿಗ್ ಕೆಲಸಗಾರರನ್ನು ‘ಫ್ಲೆಕ್ಸಿ-ಹವರ್ ಆಧಾರದ ಮೇಲೆ’ ನೇಮಿಸಿಕೊಳ್ಳಲಾಗುತ್ತದೆ ಮತ್ತು ಅವರು ಬಯಸಿದಷ್ಟು ಕೆಲಸ ಮಾಡಲು ಸ್ವತಂತ್ರರು ಎಂದು ಸಚಿವರು ಉತ್ತರಿಸಿರು. ಅವರಿಗೆ ಕೆಲಸವನ್ನು ನಿರಾಕರಿಸುವ ಹಕ್ಕಿದೆ’ಎಂದು ತಿಳಿಸಿದರು.

ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುದಕ್ಕೂ ಮೊದಲು ಸರ್ಕಾರ ಈ ವರ್ಷದ ಆರಂಭದಲ್ಲಿ ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು.

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...