Homeಮುಖಪುಟಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ...

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಆ್ಯಪ್‌ ಆಧಾರಿತ ಗಿಗ್ ಕಾರ್ಮಿಕರ ಮುಷ್ಕರ ಎಂದರೆ ಬೀದಿಗಿಳಿದು ಮಾಡುವ ಹೋರಾಟವಲ್ಲ. ಆಹಾರ, ದಿನಸಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ವಿತರಣಾ ಏಜೆಂಟ್‌ಗಳು ಬಹು ಬೇಡಿಕೆಯ ಅವಧಿಯಲ್ಲಿ ತಮ್ಮ ಆ್ಯಪ್‌ಗಳನ್ನು ಲಾಗ್‌ಔಟ್‌ ಮಾಡುವುದಾಗಿದೆ ಈ ಮುಷ್ಕರದ ಸ್ವರೂಪ.

ಇದರಿಂದ ಜನರು ಸಮಸ್ಯೆಗೆ ಸಿಲುಕಲಿದ್ದಾರೆ. ಆ್ಯಪ್‌ ಕಂಪನಿಗಳ ಮೇಲೆ ಒತ್ತಡ ಬೀಳಲಿದೆ ಮತ್ತು ವ್ಯವಹಾರದ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಸರ್ಕಾರಕ್ಕೂ ಬಿಸಿ ತಟ್ಟಲಿದೆ. ಈ ಮೂಲಕ ಕಾರ್ಮಿಕರ ಸಮಸ್ಯೆ ಆಲಿಸಲು ಅವರು ಮುಂದಾಗಲಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆ್ಯಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಮುಷ್ಕರದಲ್ಲಿ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

ಕ್ರಿಸ್‌ಮಸ್‌ ದಿನದಂದು ಗಿಗ್‌ ಕಾರ್ಮಿಕರು (ವಿಶೇಷವಾಗಿ ಆಹಾರ ಮತ್ತು ದಿನಸಿ ವಿತರಣಾ ಏಜೆಂಟ್‌ಗಳು) ನಡೆಸಿದ ಮುಷ್ಕರದಿಂದ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಪರಿಣಾಮ ಬೀರಿಲ್ಲ. ಆದರೆ, ಇಂದಿನ (ಹೊಸ ವರ್ಷದ ಸಂಜೆ) ಮುಷ್ಕರ ಹೆಚ್ಚು ಪರಿಣಾಮ ಬೀರಬಹುದು. ಏಕೆಂದರೆ, ಬೆಂಗಳೂರಿನಲ್ಲಿ ಬಹಳ ಅದ್ದೂರಿಯಾಗಿ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗುತ್ತದೆ.

ಇಂದಿನ ಮುಷ್ಕರಕ್ಕೆ ಐಎಫ್‌ಎಟಿ, ಟಿಜಿಡಬ್ಲ್ಯುಯು ಜೊತೆಗೆ ಗಿಗ್ ಆ್ಯಂಡ್ ಫ್ಲ್ಯಾಟ್‌ಫಾರ್ಕ್‌ ವರ್ಕಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯೂ) ಕೂಡ ಕರೆ ನೀಡಿದೆ.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಜ್ಞಾಪಕ ಪತ್ರದಲ್ಲಿ ಜಿಐಪಿಎಸ್‌ಡಬ್ಲ್ಯುಯೂ ದೆಹಲಿ ಅಧ್ಯಕ್ಷೆ ಸೀಮಾ ಸಿಂಗ್, ಗಿಗ್ ಕಾರ್ಮಿಕರನ್ನು ಕಾರ್ಮಿಕ ಹಕ್ಕುಗಳಿಂದ ವ್ಯವಸ್ಥಿತವಾಗಿ ಹೊರಗಿಡುವುದರ ಜೊತೆಗೆ ಅವರು ಎದುರಿಸುತ್ತಿರುವ ಕಿರುಕುಳ, ತಾರತಮ್ಯ ಮತ್ತು ಹಿಂಸಾಚಾರದ ಬಗ್ಗೆ ಗಮನಸೆಳೆದಿದ್ದಾರೆ. ಈ ಮುಷ್ಕರವು ಗಿಗ್ ಕಾರ್ಮಿಕರು ಮತ್ತು ಇತರ ಪಕ್ಷಕಾರರನ್ನು ಒಗ್ಗೂಡಿಸಿ ಸರ್ಕಾರ ಈ ವಿಚಾರದಲ್ಲಿ ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜೆಪಿ ನಗರ, ಎಂಜಿ ರಸ್ತೆ ಮತ್ತು ಇಂದಿರಾನಗರದಂತಹ ಹೆಚ್ಚಿನ ಜನನಿಬಿಡ ಪ್ರದೇಶಗಳಲ್ಲಿ 8,000 ರಿಂದ 10,000 ವಿತರಣಾ ಕಾರ್ಮಿಕರು ದಿಢೀರ್ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಐಪಿಎಸ್‌ಡಬ್ಲ್ಯೂಯು ಸದಸ್ಯ ಚಂದನ್ ಕುಮಾರ್ ಅವರು ಹೇಳಿರುವುದಾಗಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

“ಕಾರ್ಮಿಕರ ವೆಚ್ಚದಲ್ಲಿ ಕಂಪನಿಗಳು ಪಡೆಯುವ ಲಾಭದ ವಿರುದ್ಧ ನಾವು ನಿಲ್ಲುತ್ತೇವೆ. ಕಾರ್ಮಿಕರಿಲ್ಲದೆ, ಯಾವುದೇ ಆರ್ಡರ್ (ಆಹಾರ ಮತ್ತ ಇತರ ಆರ್ಡರ್) ಮಾಡಲು ಸಾಧ್ಯವಿಲ್ಲ, ಕಾರ್ಮಿಕರಿಲ್ಲದೆ ಯಾವುದೇ ಗಿಗ್ ಆರ್ಥಿಕತೆ ನಡೆಯಲ್ಲ” ಎಂದು ಕುಮಾರ್ ತಿಳಿಸಿದ್ದಾರೆ.

ಕಾರ್ಮಿಕರು ಆರ್ಡರ್‌ಗಳನ್ನು ನಿರಾಕರಿಸುತ್ತಾ ಶಾಂತಿಯುತ ಮುಷ್ಕರ ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಲಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಪೊಲೀಸ್ ನಿರ್ಬಂಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಕುಮಾರ್, “ನಾವು ಸಂಚಾರಕ್ಕೆ ಅಡ್ಡಿಪಡಿಸುವುದಿಲ್ಲ. ಇದು ಶಾಂತಿಯುತ, ಪ್ರಜಾಸತ್ತಾತ್ಮಕ ಪ್ರತಿರೋಧ. ನಾವು ಆರ್ಡರ್‌ಗಳನ್ನು ತಲುಪಿಸುವಾಗ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಮ್ಮ ಹಕ್ಕುಗಳನ್ನು ಕೇಳಲು ಹೊರಟಾಗ ಏಕೆ ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇತರ ನಗರಗಳಾದ ಮೈಸೂರು ಮತ್ತು ಬೆಳಗಾವಿಯಿಂದಲೂ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕುಮಾರ್ ಹೇಳಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ಮತ್ತು ಇತರ ಆಹಾರ ವಿತರಣಾ ಆ್ಯಪ್‌ಗಳ ಮೂಲಕ ಆರ್ಡರ್‌ ಮಾಡುವಲ್ಲಿ ಬೆಂಗಳೂರು ನಿರಂತರವಾಗಿ ಅಗ್ರ ನಗರಗಳಲ್ಲಿ ಸ್ಥಾನ ಪಡೆದಿದೆ. ಹೊಸ ವರ್ಷದ ಮುನ್ನಾದಿನದಂದು ಭಾರೀ ಸಂಖ್ಯೆಯಲ್ಲಿ ಜನರು ಆಹಾರ, ಪಾನಿಯಾ ಆರ್ಡರ್‌ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲೇ ಕಾರ್ಮಿಕರು ಮುಷ್ಕರ ಹಮ್ಮಿಕೊಂಡಿರುವುದರಿಂದ ಸಾವಿರಾರು ಜನರಿಗೆ ಸಮಸ್ಯೆ ಆಗುವುದು ಖಚಿತ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...