Homeಮುಖಪುಟಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ...

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಆ್ಯಪ್‌ ಆಧಾರಿತ ಗಿಗ್ ಕಾರ್ಮಿಕರ ಮುಷ್ಕರ ಎಂದರೆ ಬೀದಿಗಿಳಿದು ಮಾಡುವ ಹೋರಾಟವಲ್ಲ. ಆಹಾರ, ದಿನಸಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ವಿತರಣಾ ಏಜೆಂಟ್‌ಗಳು ಬಹು ಬೇಡಿಕೆಯ ಅವಧಿಯಲ್ಲಿ ತಮ್ಮ ಆ್ಯಪ್‌ಗಳನ್ನು ಲಾಗ್‌ಔಟ್‌ ಮಾಡುವುದಾಗಿದೆ ಈ ಮುಷ್ಕರದ ಸ್ವರೂಪ.

ಇದರಿಂದ ಜನರು ಸಮಸ್ಯೆಗೆ ಸಿಲುಕಲಿದ್ದಾರೆ. ಆ್ಯಪ್‌ ಕಂಪನಿಗಳ ಮೇಲೆ ಒತ್ತಡ ಬೀಳಲಿದೆ ಮತ್ತು ವ್ಯವಹಾರದ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಸರ್ಕಾರಕ್ಕೂ ಬಿಸಿ ತಟ್ಟಲಿದೆ. ಈ ಮೂಲಕ ಕಾರ್ಮಿಕರ ಸಮಸ್ಯೆ ಆಲಿಸಲು ಅವರು ಮುಂದಾಗಲಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆ್ಯಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಮುಷ್ಕರದಲ್ಲಿ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

ಕ್ರಿಸ್‌ಮಸ್‌ ದಿನದಂದು ಗಿಗ್‌ ಕಾರ್ಮಿಕರು (ವಿಶೇಷವಾಗಿ ಆಹಾರ ಮತ್ತು ದಿನಸಿ ವಿತರಣಾ ಏಜೆಂಟ್‌ಗಳು) ನಡೆಸಿದ ಮುಷ್ಕರದಿಂದ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಪರಿಣಾಮ ಬೀರಿಲ್ಲ. ಆದರೆ, ಇಂದಿನ (ಹೊಸ ವರ್ಷದ ಸಂಜೆ) ಮುಷ್ಕರ ಹೆಚ್ಚು ಪರಿಣಾಮ ಬೀರಬಹುದು. ಏಕೆಂದರೆ, ಬೆಂಗಳೂರಿನಲ್ಲಿ ಬಹಳ ಅದ್ದೂರಿಯಾಗಿ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗುತ್ತದೆ.

ಇಂದಿನ ಮುಷ್ಕರಕ್ಕೆ ಐಎಫ್‌ಎಟಿ, ಟಿಜಿಡಬ್ಲ್ಯುಯು ಜೊತೆಗೆ ಗಿಗ್ ಆ್ಯಂಡ್ ಫ್ಲ್ಯಾಟ್‌ಫಾರ್ಕ್‌ ವರ್ಕಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯೂ) ಕೂಡ ಕರೆ ನೀಡಿದೆ.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಜ್ಞಾಪಕ ಪತ್ರದಲ್ಲಿ ಜಿಐಪಿಎಸ್‌ಡಬ್ಲ್ಯುಯೂ ದೆಹಲಿ ಅಧ್ಯಕ್ಷೆ ಸೀಮಾ ಸಿಂಗ್, ಗಿಗ್ ಕಾರ್ಮಿಕರನ್ನು ಕಾರ್ಮಿಕ ಹಕ್ಕುಗಳಿಂದ ವ್ಯವಸ್ಥಿತವಾಗಿ ಹೊರಗಿಡುವುದರ ಜೊತೆಗೆ ಅವರು ಎದುರಿಸುತ್ತಿರುವ ಕಿರುಕುಳ, ತಾರತಮ್ಯ ಮತ್ತು ಹಿಂಸಾಚಾರದ ಬಗ್ಗೆ ಗಮನಸೆಳೆದಿದ್ದಾರೆ. ಈ ಮುಷ್ಕರವು ಗಿಗ್ ಕಾರ್ಮಿಕರು ಮತ್ತು ಇತರ ಪಕ್ಷಕಾರರನ್ನು ಒಗ್ಗೂಡಿಸಿ ಸರ್ಕಾರ ಈ ವಿಚಾರದಲ್ಲಿ ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜೆಪಿ ನಗರ, ಎಂಜಿ ರಸ್ತೆ ಮತ್ತು ಇಂದಿರಾನಗರದಂತಹ ಹೆಚ್ಚಿನ ಜನನಿಬಿಡ ಪ್ರದೇಶಗಳಲ್ಲಿ 8,000 ರಿಂದ 10,000 ವಿತರಣಾ ಕಾರ್ಮಿಕರು ದಿಢೀರ್ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಐಪಿಎಸ್‌ಡಬ್ಲ್ಯೂಯು ಸದಸ್ಯ ಚಂದನ್ ಕುಮಾರ್ ಅವರು ಹೇಳಿರುವುದಾಗಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

“ಕಾರ್ಮಿಕರ ವೆಚ್ಚದಲ್ಲಿ ಕಂಪನಿಗಳು ಪಡೆಯುವ ಲಾಭದ ವಿರುದ್ಧ ನಾವು ನಿಲ್ಲುತ್ತೇವೆ. ಕಾರ್ಮಿಕರಿಲ್ಲದೆ, ಯಾವುದೇ ಆರ್ಡರ್ (ಆಹಾರ ಮತ್ತ ಇತರ ಆರ್ಡರ್) ಮಾಡಲು ಸಾಧ್ಯವಿಲ್ಲ, ಕಾರ್ಮಿಕರಿಲ್ಲದೆ ಯಾವುದೇ ಗಿಗ್ ಆರ್ಥಿಕತೆ ನಡೆಯಲ್ಲ” ಎಂದು ಕುಮಾರ್ ತಿಳಿಸಿದ್ದಾರೆ.

ಕಾರ್ಮಿಕರು ಆರ್ಡರ್‌ಗಳನ್ನು ನಿರಾಕರಿಸುತ್ತಾ ಶಾಂತಿಯುತ ಮುಷ್ಕರ ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಲಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಪೊಲೀಸ್ ನಿರ್ಬಂಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಕುಮಾರ್, “ನಾವು ಸಂಚಾರಕ್ಕೆ ಅಡ್ಡಿಪಡಿಸುವುದಿಲ್ಲ. ಇದು ಶಾಂತಿಯುತ, ಪ್ರಜಾಸತ್ತಾತ್ಮಕ ಪ್ರತಿರೋಧ. ನಾವು ಆರ್ಡರ್‌ಗಳನ್ನು ತಲುಪಿಸುವಾಗ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಮ್ಮ ಹಕ್ಕುಗಳನ್ನು ಕೇಳಲು ಹೊರಟಾಗ ಏಕೆ ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇತರ ನಗರಗಳಾದ ಮೈಸೂರು ಮತ್ತು ಬೆಳಗಾವಿಯಿಂದಲೂ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕುಮಾರ್ ಹೇಳಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ಮತ್ತು ಇತರ ಆಹಾರ ವಿತರಣಾ ಆ್ಯಪ್‌ಗಳ ಮೂಲಕ ಆರ್ಡರ್‌ ಮಾಡುವಲ್ಲಿ ಬೆಂಗಳೂರು ನಿರಂತರವಾಗಿ ಅಗ್ರ ನಗರಗಳಲ್ಲಿ ಸ್ಥಾನ ಪಡೆದಿದೆ. ಹೊಸ ವರ್ಷದ ಮುನ್ನಾದಿನದಂದು ಭಾರೀ ಸಂಖ್ಯೆಯಲ್ಲಿ ಜನರು ಆಹಾರ, ಪಾನಿಯಾ ಆರ್ಡರ್‌ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲೇ ಕಾರ್ಮಿಕರು ಮುಷ್ಕರ ಹಮ್ಮಿಕೊಂಡಿರುವುದರಿಂದ ಸಾವಿರಾರು ಜನರಿಗೆ ಸಮಸ್ಯೆ ಆಗುವುದು ಖಚಿತ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...