Homeಮುಖಪುಟಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ...

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಆ್ಯಪ್‌ ಆಧಾರಿತ ಗಿಗ್ ಕಾರ್ಮಿಕರ ಮುಷ್ಕರ ಎಂದರೆ ಬೀದಿಗಿಳಿದು ಮಾಡುವ ಹೋರಾಟವಲ್ಲ. ಆಹಾರ, ದಿನಸಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ವಿತರಣಾ ಏಜೆಂಟ್‌ಗಳು ಬಹು ಬೇಡಿಕೆಯ ಅವಧಿಯಲ್ಲಿ ತಮ್ಮ ಆ್ಯಪ್‌ಗಳನ್ನು ಲಾಗ್‌ಔಟ್‌ ಮಾಡುವುದಾಗಿದೆ ಈ ಮುಷ್ಕರದ ಸ್ವರೂಪ.

ಇದರಿಂದ ಜನರು ಸಮಸ್ಯೆಗೆ ಸಿಲುಕಲಿದ್ದಾರೆ. ಆ್ಯಪ್‌ ಕಂಪನಿಗಳ ಮೇಲೆ ಒತ್ತಡ ಬೀಳಲಿದೆ ಮತ್ತು ವ್ಯವಹಾರದ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಸರ್ಕಾರಕ್ಕೂ ಬಿಸಿ ತಟ್ಟಲಿದೆ. ಈ ಮೂಲಕ ಕಾರ್ಮಿಕರ ಸಮಸ್ಯೆ ಆಲಿಸಲು ಅವರು ಮುಂದಾಗಲಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆ್ಯಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಮುಷ್ಕರದಲ್ಲಿ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

ಕ್ರಿಸ್‌ಮಸ್‌ ದಿನದಂದು ಗಿಗ್‌ ಕಾರ್ಮಿಕರು (ವಿಶೇಷವಾಗಿ ಆಹಾರ ಮತ್ತು ದಿನಸಿ ವಿತರಣಾ ಏಜೆಂಟ್‌ಗಳು) ನಡೆಸಿದ ಮುಷ್ಕರದಿಂದ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಪರಿಣಾಮ ಬೀರಿಲ್ಲ. ಆದರೆ, ಇಂದಿನ (ಹೊಸ ವರ್ಷದ ಸಂಜೆ) ಮುಷ್ಕರ ಹೆಚ್ಚು ಪರಿಣಾಮ ಬೀರಬಹುದು. ಏಕೆಂದರೆ, ಬೆಂಗಳೂರಿನಲ್ಲಿ ಬಹಳ ಅದ್ದೂರಿಯಾಗಿ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗುತ್ತದೆ.

ಇಂದಿನ ಮುಷ್ಕರಕ್ಕೆ ಐಎಫ್‌ಎಟಿ, ಟಿಜಿಡಬ್ಲ್ಯುಯು ಜೊತೆಗೆ ಗಿಗ್ ಆ್ಯಂಡ್ ಫ್ಲ್ಯಾಟ್‌ಫಾರ್ಕ್‌ ವರ್ಕಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯೂ) ಕೂಡ ಕರೆ ನೀಡಿದೆ.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಜ್ಞಾಪಕ ಪತ್ರದಲ್ಲಿ ಜಿಐಪಿಎಸ್‌ಡಬ್ಲ್ಯುಯೂ ದೆಹಲಿ ಅಧ್ಯಕ್ಷೆ ಸೀಮಾ ಸಿಂಗ್, ಗಿಗ್ ಕಾರ್ಮಿಕರನ್ನು ಕಾರ್ಮಿಕ ಹಕ್ಕುಗಳಿಂದ ವ್ಯವಸ್ಥಿತವಾಗಿ ಹೊರಗಿಡುವುದರ ಜೊತೆಗೆ ಅವರು ಎದುರಿಸುತ್ತಿರುವ ಕಿರುಕುಳ, ತಾರತಮ್ಯ ಮತ್ತು ಹಿಂಸಾಚಾರದ ಬಗ್ಗೆ ಗಮನಸೆಳೆದಿದ್ದಾರೆ. ಈ ಮುಷ್ಕರವು ಗಿಗ್ ಕಾರ್ಮಿಕರು ಮತ್ತು ಇತರ ಪಕ್ಷಕಾರರನ್ನು ಒಗ್ಗೂಡಿಸಿ ಸರ್ಕಾರ ಈ ವಿಚಾರದಲ್ಲಿ ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜೆಪಿ ನಗರ, ಎಂಜಿ ರಸ್ತೆ ಮತ್ತು ಇಂದಿರಾನಗರದಂತಹ ಹೆಚ್ಚಿನ ಜನನಿಬಿಡ ಪ್ರದೇಶಗಳಲ್ಲಿ 8,000 ರಿಂದ 10,000 ವಿತರಣಾ ಕಾರ್ಮಿಕರು ದಿಢೀರ್ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಐಪಿಎಸ್‌ಡಬ್ಲ್ಯೂಯು ಸದಸ್ಯ ಚಂದನ್ ಕುಮಾರ್ ಅವರು ಹೇಳಿರುವುದಾಗಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

“ಕಾರ್ಮಿಕರ ವೆಚ್ಚದಲ್ಲಿ ಕಂಪನಿಗಳು ಪಡೆಯುವ ಲಾಭದ ವಿರುದ್ಧ ನಾವು ನಿಲ್ಲುತ್ತೇವೆ. ಕಾರ್ಮಿಕರಿಲ್ಲದೆ, ಯಾವುದೇ ಆರ್ಡರ್ (ಆಹಾರ ಮತ್ತ ಇತರ ಆರ್ಡರ್) ಮಾಡಲು ಸಾಧ್ಯವಿಲ್ಲ, ಕಾರ್ಮಿಕರಿಲ್ಲದೆ ಯಾವುದೇ ಗಿಗ್ ಆರ್ಥಿಕತೆ ನಡೆಯಲ್ಲ” ಎಂದು ಕುಮಾರ್ ತಿಳಿಸಿದ್ದಾರೆ.

ಕಾರ್ಮಿಕರು ಆರ್ಡರ್‌ಗಳನ್ನು ನಿರಾಕರಿಸುತ್ತಾ ಶಾಂತಿಯುತ ಮುಷ್ಕರ ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಲಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಪೊಲೀಸ್ ನಿರ್ಬಂಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಕುಮಾರ್, “ನಾವು ಸಂಚಾರಕ್ಕೆ ಅಡ್ಡಿಪಡಿಸುವುದಿಲ್ಲ. ಇದು ಶಾಂತಿಯುತ, ಪ್ರಜಾಸತ್ತಾತ್ಮಕ ಪ್ರತಿರೋಧ. ನಾವು ಆರ್ಡರ್‌ಗಳನ್ನು ತಲುಪಿಸುವಾಗ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಮ್ಮ ಹಕ್ಕುಗಳನ್ನು ಕೇಳಲು ಹೊರಟಾಗ ಏಕೆ ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇತರ ನಗರಗಳಾದ ಮೈಸೂರು ಮತ್ತು ಬೆಳಗಾವಿಯಿಂದಲೂ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕುಮಾರ್ ಹೇಳಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ಮತ್ತು ಇತರ ಆಹಾರ ವಿತರಣಾ ಆ್ಯಪ್‌ಗಳ ಮೂಲಕ ಆರ್ಡರ್‌ ಮಾಡುವಲ್ಲಿ ಬೆಂಗಳೂರು ನಿರಂತರವಾಗಿ ಅಗ್ರ ನಗರಗಳಲ್ಲಿ ಸ್ಥಾನ ಪಡೆದಿದೆ. ಹೊಸ ವರ್ಷದ ಮುನ್ನಾದಿನದಂದು ಭಾರೀ ಸಂಖ್ಯೆಯಲ್ಲಿ ಜನರು ಆಹಾರ, ಪಾನಿಯಾ ಆರ್ಡರ್‌ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲೇ ಕಾರ್ಮಿಕರು ಮುಷ್ಕರ ಹಮ್ಮಿಕೊಂಡಿರುವುದರಿಂದ ಸಾವಿರಾರು ಜನರಿಗೆ ಸಮಸ್ಯೆ ಆಗುವುದು ಖಚಿತ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ...

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ. ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು...

ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುವುದು ಬಿಜೆಪಿಯ ಮೊದಲ ಕೆಲಸ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ...