Homeಮುಖಪುಟಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ...

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಆ್ಯಪ್‌ ಆಧಾರಿತ ಗಿಗ್ ಕಾರ್ಮಿಕರ ಮುಷ್ಕರ ಎಂದರೆ ಬೀದಿಗಿಳಿದು ಮಾಡುವ ಹೋರಾಟವಲ್ಲ. ಆಹಾರ, ದಿನಸಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ವಿತರಣಾ ಏಜೆಂಟ್‌ಗಳು ಬಹು ಬೇಡಿಕೆಯ ಅವಧಿಯಲ್ಲಿ ತಮ್ಮ ಆ್ಯಪ್‌ಗಳನ್ನು ಲಾಗ್‌ಔಟ್‌ ಮಾಡುವುದಾಗಿದೆ ಈ ಮುಷ್ಕರದ ಸ್ವರೂಪ.

ಇದರಿಂದ ಜನರು ಸಮಸ್ಯೆಗೆ ಸಿಲುಕಲಿದ್ದಾರೆ. ಆ್ಯಪ್‌ ಕಂಪನಿಗಳ ಮೇಲೆ ಒತ್ತಡ ಬೀಳಲಿದೆ ಮತ್ತು ವ್ಯವಹಾರದ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಸರ್ಕಾರಕ್ಕೂ ಬಿಸಿ ತಟ್ಟಲಿದೆ. ಈ ಮೂಲಕ ಕಾರ್ಮಿಕರ ಸಮಸ್ಯೆ ಆಲಿಸಲು ಅವರು ಮುಂದಾಗಲಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆ್ಯಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಮುಷ್ಕರದಲ್ಲಿ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

ಕ್ರಿಸ್‌ಮಸ್‌ ದಿನದಂದು ಗಿಗ್‌ ಕಾರ್ಮಿಕರು (ವಿಶೇಷವಾಗಿ ಆಹಾರ ಮತ್ತು ದಿನಸಿ ವಿತರಣಾ ಏಜೆಂಟ್‌ಗಳು) ನಡೆಸಿದ ಮುಷ್ಕರದಿಂದ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಪರಿಣಾಮ ಬೀರಿಲ್ಲ. ಆದರೆ, ಇಂದಿನ (ಹೊಸ ವರ್ಷದ ಸಂಜೆ) ಮುಷ್ಕರ ಹೆಚ್ಚು ಪರಿಣಾಮ ಬೀರಬಹುದು. ಏಕೆಂದರೆ, ಬೆಂಗಳೂರಿನಲ್ಲಿ ಬಹಳ ಅದ್ದೂರಿಯಾಗಿ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗುತ್ತದೆ.

ಇಂದಿನ ಮುಷ್ಕರಕ್ಕೆ ಐಎಫ್‌ಎಟಿ, ಟಿಜಿಡಬ್ಲ್ಯುಯು ಜೊತೆಗೆ ಗಿಗ್ ಆ್ಯಂಡ್ ಫ್ಲ್ಯಾಟ್‌ಫಾರ್ಕ್‌ ವರ್ಕಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯೂ) ಕೂಡ ಕರೆ ನೀಡಿದೆ.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಜ್ಞಾಪಕ ಪತ್ರದಲ್ಲಿ ಜಿಐಪಿಎಸ್‌ಡಬ್ಲ್ಯುಯೂ ದೆಹಲಿ ಅಧ್ಯಕ್ಷೆ ಸೀಮಾ ಸಿಂಗ್, ಗಿಗ್ ಕಾರ್ಮಿಕರನ್ನು ಕಾರ್ಮಿಕ ಹಕ್ಕುಗಳಿಂದ ವ್ಯವಸ್ಥಿತವಾಗಿ ಹೊರಗಿಡುವುದರ ಜೊತೆಗೆ ಅವರು ಎದುರಿಸುತ್ತಿರುವ ಕಿರುಕುಳ, ತಾರತಮ್ಯ ಮತ್ತು ಹಿಂಸಾಚಾರದ ಬಗ್ಗೆ ಗಮನಸೆಳೆದಿದ್ದಾರೆ. ಈ ಮುಷ್ಕರವು ಗಿಗ್ ಕಾರ್ಮಿಕರು ಮತ್ತು ಇತರ ಪಕ್ಷಕಾರರನ್ನು ಒಗ್ಗೂಡಿಸಿ ಸರ್ಕಾರ ಈ ವಿಚಾರದಲ್ಲಿ ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜೆಪಿ ನಗರ, ಎಂಜಿ ರಸ್ತೆ ಮತ್ತು ಇಂದಿರಾನಗರದಂತಹ ಹೆಚ್ಚಿನ ಜನನಿಬಿಡ ಪ್ರದೇಶಗಳಲ್ಲಿ 8,000 ರಿಂದ 10,000 ವಿತರಣಾ ಕಾರ್ಮಿಕರು ದಿಢೀರ್ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಐಪಿಎಸ್‌ಡಬ್ಲ್ಯೂಯು ಸದಸ್ಯ ಚಂದನ್ ಕುಮಾರ್ ಅವರು ಹೇಳಿರುವುದಾಗಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

“ಕಾರ್ಮಿಕರ ವೆಚ್ಚದಲ್ಲಿ ಕಂಪನಿಗಳು ಪಡೆಯುವ ಲಾಭದ ವಿರುದ್ಧ ನಾವು ನಿಲ್ಲುತ್ತೇವೆ. ಕಾರ್ಮಿಕರಿಲ್ಲದೆ, ಯಾವುದೇ ಆರ್ಡರ್ (ಆಹಾರ ಮತ್ತ ಇತರ ಆರ್ಡರ್) ಮಾಡಲು ಸಾಧ್ಯವಿಲ್ಲ, ಕಾರ್ಮಿಕರಿಲ್ಲದೆ ಯಾವುದೇ ಗಿಗ್ ಆರ್ಥಿಕತೆ ನಡೆಯಲ್ಲ” ಎಂದು ಕುಮಾರ್ ತಿಳಿಸಿದ್ದಾರೆ.

ಕಾರ್ಮಿಕರು ಆರ್ಡರ್‌ಗಳನ್ನು ನಿರಾಕರಿಸುತ್ತಾ ಶಾಂತಿಯುತ ಮುಷ್ಕರ ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಲಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಪೊಲೀಸ್ ನಿರ್ಬಂಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಕುಮಾರ್, “ನಾವು ಸಂಚಾರಕ್ಕೆ ಅಡ್ಡಿಪಡಿಸುವುದಿಲ್ಲ. ಇದು ಶಾಂತಿಯುತ, ಪ್ರಜಾಸತ್ತಾತ್ಮಕ ಪ್ರತಿರೋಧ. ನಾವು ಆರ್ಡರ್‌ಗಳನ್ನು ತಲುಪಿಸುವಾಗ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಮ್ಮ ಹಕ್ಕುಗಳನ್ನು ಕೇಳಲು ಹೊರಟಾಗ ಏಕೆ ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇತರ ನಗರಗಳಾದ ಮೈಸೂರು ಮತ್ತು ಬೆಳಗಾವಿಯಿಂದಲೂ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕುಮಾರ್ ಹೇಳಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ಮತ್ತು ಇತರ ಆಹಾರ ವಿತರಣಾ ಆ್ಯಪ್‌ಗಳ ಮೂಲಕ ಆರ್ಡರ್‌ ಮಾಡುವಲ್ಲಿ ಬೆಂಗಳೂರು ನಿರಂತರವಾಗಿ ಅಗ್ರ ನಗರಗಳಲ್ಲಿ ಸ್ಥಾನ ಪಡೆದಿದೆ. ಹೊಸ ವರ್ಷದ ಮುನ್ನಾದಿನದಂದು ಭಾರೀ ಸಂಖ್ಯೆಯಲ್ಲಿ ಜನರು ಆಹಾರ, ಪಾನಿಯಾ ಆರ್ಡರ್‌ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲೇ ಕಾರ್ಮಿಕರು ಮುಷ್ಕರ ಹಮ್ಮಿಕೊಂಡಿರುವುದರಿಂದ ಸಾವಿರಾರು ಜನರಿಗೆ ಸಮಸ್ಯೆ ಆಗುವುದು ಖಚಿತ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...