Homeಮುಖಪುಟಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ...

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ನ್ಯಾಯಯುತ ಮತ್ತು ಪಾರದರ್ಶಕ ವೇತನ ರಚನೆಯಲ್ಲಿ ರೈಡ್-ಹೇಲಿಂಗ್ ಚಾಲಕರಿಗೆ ಪ್ರತಿ ಕಿ.ಮೀಗೆ ಕನಿಷ್ಠ ರೂ. 20ಕ್ಕಿಂತ ಕಡಿಮೆಯಿಲ್ಲದ ಕನಿಷ್ಠ ದರವೂ ಸೇರಿದೆ. ದಿನಕ್ಕೆ 8 ಗಂಟೆಗಳ ಕೆಲಸ, ನಿಗದಿತ ಸಮಯಕ್ಕಿಂತ ಹೆಚ್ಚಿನ ಕೆಲಸಕ್ಕೆ ಹೆಚ್ಚುವರಿ ಪಾವತಿ, ಅಪಘಾತ, ಅನಾರೋಗ್ಯ ಅಥವಾ ತುರ್ತು ಸಂದರ್ಭಗಳಲ್ಲಿ ಕಾರ್ಮಿಕರಿಗೆ ಬೆಂಬಲ ನೀಡಲು ಕ್ರಿಯಾತ್ಮಕ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಯನ್ನು ಕಾರ್ಮಿಕರು ಮುಂದಿಟ್ಟಿದ್ದಾರೆ.

ಆ್ಯಪ್‌ ಆಧಾರಿತ ಗಿಗ್ ಕಾರ್ಮಿಕರ ಮುಷ್ಕರ ಎಂದರೆ ಬೀದಿಗಿಳಿದು ಮಾಡುವ ಹೋರಾಟವಲ್ಲ. ಆಹಾರ, ದಿನಸಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ವಿತರಣಾ ಏಜೆಂಟ್‌ಗಳು ಬಹು ಬೇಡಿಕೆಯ ಅವಧಿಯಲ್ಲಿ ತಮ್ಮ ಆ್ಯಪ್‌ಗಳನ್ನು ಲಾಗ್‌ಔಟ್‌ ಮಾಡುವುದಾಗಿದೆ ಈ ಮುಷ್ಕರದ ಸ್ವರೂಪ.

ಇದರಿಂದ ಜನರು ಸಮಸ್ಯೆಗೆ ಸಿಲುಕಲಿದ್ದಾರೆ. ಆ್ಯಪ್‌ ಕಂಪನಿಗಳ ಮೇಲೆ ಒತ್ತಡ ಬೀಳಲಿದೆ ಮತ್ತು ವ್ಯವಹಾರದ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಸರ್ಕಾರಕ್ಕೂ ಬಿಸಿ ತಟ್ಟಲಿದೆ. ಈ ಮೂಲಕ ಕಾರ್ಮಿಕರ ಸಮಸ್ಯೆ ಆಲಿಸಲು ಅವರು ಮುಂದಾಗಲಿದ್ದಾರೆ.

ಕ್ರಿಸ್‌ಮಸ್‌ ದಿನ ಫೆಡರೇಶನ್ ಆಫ್ ಆ್ಯಪ್‌ ಬೇಸ್ಡ್ ಟ್ರಾನ್ಸ್‌ಪೋರ್ಟ್‌ ವರ್ಕರ್ಸ್ (ಐಎಫ್‌ಎಟಿ) ಮತ್ತು ತೆಲಂಗಾಣ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಡಬ್ಲ್ಯುಯು) ನೇತೃತ್ವದಲ್ಲಿ ಬೆಂಗಳೂರು ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರಗಳಲ್ಲಿ ಗಿಗ್ ಕಾರ್ಮಿಕರು ಮುಷ್ಕರ ನಡೆಸಿದ್ದಾರೆ.

ಝೊಮ್ಯಾಟೋ, ಸ್ವಿಗ್ಗಿ, ಬ್ಲಿಂಕಿಟ್, ಝೆಪ್ಟೋ, ಆಮೆಝಾನ್, ಫ್ಲಿಪ್‌ಕಾರ್ಟ್‌ ಸೇರಿದಂತೆ ವಿವಿಧ ಆಹಾರ ಮತ್ತು ಇತರ ವಸ್ತುಗಳ ವಿತರಣಾ ಆ್ಯಪ್‌ಗಳ ಸುಮಾರು 40 ಸಾವಿರ ವಿತರಣಾ ಏಜೆಂಟ್‌ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ರಿಸ್‌ಮಸ್‌ ದಿನದ ಮುಷ್ಕರದಲ್ಲಿ ಬಿಸಿ ಹರಿಯಾಣದ ಗುರುಗ್ರಾಮ ನಗರದಲ್ಲಿ ಹೆಚ್ಚಾಗಿ ತಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿವಾಸಿಗಳು ಆಹಾರ ಆರ್ಡರ್ ಮಾಡಿ ಗಂಟೆಗೂ ಹೆಚ್ಚು ಸಮಯ ಕಾಯುವಂತಾಗಿದೆ ಎಂದು ವರದಿಗಳು ಹೇಳಿವೆ.

ಕ್ರಿಸ್‌ಮಸ್‌ ದಿನದಂದು ಗಿಗ್‌ ಕಾರ್ಮಿಕರು (ವಿಶೇಷವಾಗಿ ಆಹಾರ ಮತ್ತು ದಿನಸಿ ವಿತರಣಾ ಏಜೆಂಟ್‌ಗಳು) ನಡೆಸಿದ ಮುಷ್ಕರದಿಂದ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಪರಿಣಾಮ ಬೀರಿಲ್ಲ. ಆದರೆ, ಇಂದಿನ (ಹೊಸ ವರ್ಷದ ಸಂಜೆ) ಮುಷ್ಕರ ಹೆಚ್ಚು ಪರಿಣಾಮ ಬೀರಬಹುದು. ಏಕೆಂದರೆ, ಬೆಂಗಳೂರಿನಲ್ಲಿ ಬಹಳ ಅದ್ದೂರಿಯಾಗಿ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗುತ್ತದೆ.

ಇಂದಿನ ಮುಷ್ಕರಕ್ಕೆ ಐಎಫ್‌ಎಟಿ, ಟಿಜಿಡಬ್ಲ್ಯುಯು ಜೊತೆಗೆ ಗಿಗ್ ಆ್ಯಂಡ್ ಫ್ಲ್ಯಾಟ್‌ಫಾರ್ಕ್‌ ವರ್ಕಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯೂ) ಕೂಡ ಕರೆ ನೀಡಿದೆ.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಜ್ಞಾಪಕ ಪತ್ರದಲ್ಲಿ ಜಿಐಪಿಎಸ್‌ಡಬ್ಲ್ಯುಯೂ ದೆಹಲಿ ಅಧ್ಯಕ್ಷೆ ಸೀಮಾ ಸಿಂಗ್, ಗಿಗ್ ಕಾರ್ಮಿಕರನ್ನು ಕಾರ್ಮಿಕ ಹಕ್ಕುಗಳಿಂದ ವ್ಯವಸ್ಥಿತವಾಗಿ ಹೊರಗಿಡುವುದರ ಜೊತೆಗೆ ಅವರು ಎದುರಿಸುತ್ತಿರುವ ಕಿರುಕುಳ, ತಾರತಮ್ಯ ಮತ್ತು ಹಿಂಸಾಚಾರದ ಬಗ್ಗೆ ಗಮನಸೆಳೆದಿದ್ದಾರೆ. ಈ ಮುಷ್ಕರವು ಗಿಗ್ ಕಾರ್ಮಿಕರು ಮತ್ತು ಇತರ ಪಕ್ಷಕಾರರನ್ನು ಒಗ್ಗೂಡಿಸಿ ಸರ್ಕಾರ ಈ ವಿಚಾರದಲ್ಲಿ ತಕ್ಷಣ ಮಧ್ಯಪ್ರವೇಶಿಸುವಂತೆ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜೆಪಿ ನಗರ, ಎಂಜಿ ರಸ್ತೆ ಮತ್ತು ಇಂದಿರಾನಗರದಂತಹ ಹೆಚ್ಚಿನ ಜನನಿಬಿಡ ಪ್ರದೇಶಗಳಲ್ಲಿ 8,000 ರಿಂದ 10,000 ವಿತರಣಾ ಕಾರ್ಮಿಕರು ದಿಢೀರ್ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಐಪಿಎಸ್‌ಡಬ್ಲ್ಯೂಯು ಸದಸ್ಯ ಚಂದನ್ ಕುಮಾರ್ ಅವರು ಹೇಳಿರುವುದಾಗಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

“ಕಾರ್ಮಿಕರ ವೆಚ್ಚದಲ್ಲಿ ಕಂಪನಿಗಳು ಪಡೆಯುವ ಲಾಭದ ವಿರುದ್ಧ ನಾವು ನಿಲ್ಲುತ್ತೇವೆ. ಕಾರ್ಮಿಕರಿಲ್ಲದೆ, ಯಾವುದೇ ಆರ್ಡರ್ (ಆಹಾರ ಮತ್ತ ಇತರ ಆರ್ಡರ್) ಮಾಡಲು ಸಾಧ್ಯವಿಲ್ಲ, ಕಾರ್ಮಿಕರಿಲ್ಲದೆ ಯಾವುದೇ ಗಿಗ್ ಆರ್ಥಿಕತೆ ನಡೆಯಲ್ಲ” ಎಂದು ಕುಮಾರ್ ತಿಳಿಸಿದ್ದಾರೆ.

ಕಾರ್ಮಿಕರು ಆರ್ಡರ್‌ಗಳನ್ನು ನಿರಾಕರಿಸುತ್ತಾ ಶಾಂತಿಯುತ ಮುಷ್ಕರ ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಲಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಪೊಲೀಸ್ ನಿರ್ಬಂಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಕುಮಾರ್, “ನಾವು ಸಂಚಾರಕ್ಕೆ ಅಡ್ಡಿಪಡಿಸುವುದಿಲ್ಲ. ಇದು ಶಾಂತಿಯುತ, ಪ್ರಜಾಸತ್ತಾತ್ಮಕ ಪ್ರತಿರೋಧ. ನಾವು ಆರ್ಡರ್‌ಗಳನ್ನು ತಲುಪಿಸುವಾಗ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಮ್ಮ ಹಕ್ಕುಗಳನ್ನು ಕೇಳಲು ಹೊರಟಾಗ ಏಕೆ ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇತರ ನಗರಗಳಾದ ಮೈಸೂರು ಮತ್ತು ಬೆಳಗಾವಿಯಿಂದಲೂ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕುಮಾರ್ ಹೇಳಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ಮತ್ತು ಇತರ ಆಹಾರ ವಿತರಣಾ ಆ್ಯಪ್‌ಗಳ ಮೂಲಕ ಆರ್ಡರ್‌ ಮಾಡುವಲ್ಲಿ ಬೆಂಗಳೂರು ನಿರಂತರವಾಗಿ ಅಗ್ರ ನಗರಗಳಲ್ಲಿ ಸ್ಥಾನ ಪಡೆದಿದೆ. ಹೊಸ ವರ್ಷದ ಮುನ್ನಾದಿನದಂದು ಭಾರೀ ಸಂಖ್ಯೆಯಲ್ಲಿ ಜನರು ಆಹಾರ, ಪಾನಿಯಾ ಆರ್ಡರ್‌ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲೇ ಕಾರ್ಮಿಕರು ಮುಷ್ಕರ ಹಮ್ಮಿಕೊಂಡಿರುವುದರಿಂದ ಸಾವಿರಾರು ಜನರಿಗೆ ಸಮಸ್ಯೆ ಆಗುವುದು ಖಚಿತ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...