Homeಕರ್ನಾಟಕನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

ನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

- Advertisement -
- Advertisement -

ಮೊಟ್ಟ ಮೊದಲ ಮಕ್ಕಳ ಕಮರ್ಷಿಯಲ್​ ಚಿತ್ರ ‘ಗಿರ್ಮಿಟ್​’ ಟ್ರೇಲರ್ ​ ರಿಲೀಸ್ ಆಗಿದೆ. ದೊಡ್ಡವರ ಧಿರಿಸಿನಲ್ಲಿ ಮಕ್ಕಳು ಅಭಿನಯದ ಮೂಲಕ ಮನರಂಜನೆ ಉಣಬಡಿಸಿದ್ದಾರೆ. ಮಕ್ಕಳನ್ನೇ ಮೂಲವಾಗಿರಿಸಿಕೊಂಡು, ನಾಯಕ, ನಾಯಕಿಯರ ಪಾತ್ರದಲ್ಲಿ ಮಿಂಚುವಂತೆ ಮಾಡಿದ್ದಾರೆ ಬಸ್ರೂರು. ‘ಗಿರ್ಮಿಟ್’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ.

ವ್ಯವಹಾರಿಕ ಆಯಾಮ ಮತ್ತು ದೃಷ್ಟಿಕೋನವನ್ನಿಟ್ಟುಕೊಂಡ ಮಕ್ಕಳ ಚಿತ್ರ ‘ಗಿರ್ಮಿಟ್’ ಪ್ರೇಕ್ಷಕರಿಗೆ ಮನರಂಜನೆಯ ರಸದೂಟ ಉಣಿಸಲು ತೆರೆಗೆ ಬರಲು ಸಿದ್ಧವಾಗುತ್ತಿದೆ. ಮಕ್ಕಳೇ ಪ್ರಧಾನಪಾತ್ರದಲ್ಲಿ ನಟಿಸಿರುವ ಚಿತ್ರ ಗಿರ್ಮಿಟ್ ಭಾರತೀಯ ಚಿತ್ರರಂಗದಲ್ಲೇ ಮೊದಲ ಪ್ರಯತ್ನ ಎನ್ನಲಾಗಿದೆ. ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿರುವ ಚಿತ್ರ ನವೆಂಬರ್​ 8 ರಂದು ಪ್ರಪಂಚದಾದ್ಯಂತ ಬಿಡುಗಡೆಗೊಳ್ಳುತ್ತಿದೆ.

ಚಿತ್ರದ ಟ್ರೇಲರ್‍ ನಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮಕ್ಕಳು ಗಮನಸೆಳೆದಿದ್ದಾರೆ. ನಾಯಕ ಹೇಳುವ ಡೈಲಾಗ್ಸ್, ಪ್ರೇಮ ಸನ್ನಿವೇಶ, ವಿಭಿನ್ನ ಪಾತ್ರಗಳು, ಕೌಟುಂಬಿಕ ಕಲಹ, ನಾಯಕ, ನಾಯಕಿಯ ಮಾಸ್​ ಗೀತೆ ಹೀಗೆ ಕಮರ್ಷಿಯಲ್​ ಚಿತ್ರದಲ್ಲಿರಬೇಕಾದ ಎಲ್ಲಾ ಅಂಶಗಳೂ ಟ್ರೇಲರ್‍ ನಲ್ಲಿ ಕಾಣಸಿಗುತ್ತವೆ. ನಟ ಯಶ್​, ನಟಿ ರಾಧಿಕಾ ಸೇರಿದಂತೆ ಹಿರಿಯ ಕಲಾವಿದರು ಹಿನ್ನೆಲೆ ಧ್ವನಿ ನೀಡಿದ್ದಾರೆ.

ಚಿತ್ರದ ‘ಆರಂಭವೇ ಆನಂದವೇ’ ಎಂಬ ಲಿರಿಕಲ್ ವಿಡಿಯೋ ಗೀತೆ ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್ ಸಾಹಿತ್ಯವಿದ್ದು, ಸಂತೋಷ್ ವೆಂಕಿ ಗೀತೆಗೆ ಧ್ವನಿ ನೀಡಿದ್ದಾರೆ. ಮಕ್ಕಳೇ ಚಿತ್ರವನ್ನು ಚಿತ್ರಿಸಿದ್ದಾರೆ. ನಾಯಕ, ನಾಯಕಿಯ ವಾಗ್ಯುದ್ಧ, ನಾಯಕನ ಖಡಕ್ ಡೈಲಾಗ್, ನಾಯಕ, ನಾಯಕಿಯ ಪ್ರೇಮ ಸಲ್ಲಾಪ ಎಲ್ಲವೂ ಚಿತ್ರದಲ್ಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಓಂಕಾರ್ ಮೂವೀಸ್ ಬ್ಯಾನರ್‍ ಅಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್.ಎಸ್.ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿ ಸಹ ನಿರ್ಮಾಪಕರಾಗಿದ್ದಾರೆ. ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...