Homeಕರ್ನಾಟಕನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

ನಿರೀಕ್ಷೆ ಹುಟ್ಟಿಸಿದ ‘ಗಿರ್ಮಿಟ್’ ಟ್ರೇಲರ್: ನಟ, ನಟಿ ಪಾತ್ರದಲ್ಲಿ ಮಕ್ಕಳ ಮಿಂಚು

- Advertisement -
- Advertisement -

ಮೊಟ್ಟ ಮೊದಲ ಮಕ್ಕಳ ಕಮರ್ಷಿಯಲ್​ ಚಿತ್ರ ‘ಗಿರ್ಮಿಟ್​’ ಟ್ರೇಲರ್ ​ ರಿಲೀಸ್ ಆಗಿದೆ. ದೊಡ್ಡವರ ಧಿರಿಸಿನಲ್ಲಿ ಮಕ್ಕಳು ಅಭಿನಯದ ಮೂಲಕ ಮನರಂಜನೆ ಉಣಬಡಿಸಿದ್ದಾರೆ. ಮಕ್ಕಳನ್ನೇ ಮೂಲವಾಗಿರಿಸಿಕೊಂಡು, ನಾಯಕ, ನಾಯಕಿಯರ ಪಾತ್ರದಲ್ಲಿ ಮಿಂಚುವಂತೆ ಮಾಡಿದ್ದಾರೆ ಬಸ್ರೂರು. ‘ಗಿರ್ಮಿಟ್’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ.

ವ್ಯವಹಾರಿಕ ಆಯಾಮ ಮತ್ತು ದೃಷ್ಟಿಕೋನವನ್ನಿಟ್ಟುಕೊಂಡ ಮಕ್ಕಳ ಚಿತ್ರ ‘ಗಿರ್ಮಿಟ್’ ಪ್ರೇಕ್ಷಕರಿಗೆ ಮನರಂಜನೆಯ ರಸದೂಟ ಉಣಿಸಲು ತೆರೆಗೆ ಬರಲು ಸಿದ್ಧವಾಗುತ್ತಿದೆ. ಮಕ್ಕಳೇ ಪ್ರಧಾನಪಾತ್ರದಲ್ಲಿ ನಟಿಸಿರುವ ಚಿತ್ರ ಗಿರ್ಮಿಟ್ ಭಾರತೀಯ ಚಿತ್ರರಂಗದಲ್ಲೇ ಮೊದಲ ಪ್ರಯತ್ನ ಎನ್ನಲಾಗಿದೆ. ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿರುವ ಚಿತ್ರ ನವೆಂಬರ್​ 8 ರಂದು ಪ್ರಪಂಚದಾದ್ಯಂತ ಬಿಡುಗಡೆಗೊಳ್ಳುತ್ತಿದೆ.

ಚಿತ್ರದ ಟ್ರೇಲರ್‍ ನಲ್ಲಿ ನಾಯಕ, ನಾಯಕಿ ಪಾತ್ರದಲ್ಲಿ ಮಕ್ಕಳು ಗಮನಸೆಳೆದಿದ್ದಾರೆ. ನಾಯಕ ಹೇಳುವ ಡೈಲಾಗ್ಸ್, ಪ್ರೇಮ ಸನ್ನಿವೇಶ, ವಿಭಿನ್ನ ಪಾತ್ರಗಳು, ಕೌಟುಂಬಿಕ ಕಲಹ, ನಾಯಕ, ನಾಯಕಿಯ ಮಾಸ್​ ಗೀತೆ ಹೀಗೆ ಕಮರ್ಷಿಯಲ್​ ಚಿತ್ರದಲ್ಲಿರಬೇಕಾದ ಎಲ್ಲಾ ಅಂಶಗಳೂ ಟ್ರೇಲರ್‍ ನಲ್ಲಿ ಕಾಣಸಿಗುತ್ತವೆ. ನಟ ಯಶ್​, ನಟಿ ರಾಧಿಕಾ ಸೇರಿದಂತೆ ಹಿರಿಯ ಕಲಾವಿದರು ಹಿನ್ನೆಲೆ ಧ್ವನಿ ನೀಡಿದ್ದಾರೆ.

ಚಿತ್ರದ ‘ಆರಂಭವೇ ಆನಂದವೇ’ ಎಂಬ ಲಿರಿಕಲ್ ವಿಡಿಯೋ ಗೀತೆ ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್ ಸಾಹಿತ್ಯವಿದ್ದು, ಸಂತೋಷ್ ವೆಂಕಿ ಗೀತೆಗೆ ಧ್ವನಿ ನೀಡಿದ್ದಾರೆ. ಮಕ್ಕಳೇ ಚಿತ್ರವನ್ನು ಚಿತ್ರಿಸಿದ್ದಾರೆ. ನಾಯಕ, ನಾಯಕಿಯ ವಾಗ್ಯುದ್ಧ, ನಾಯಕನ ಖಡಕ್ ಡೈಲಾಗ್, ನಾಯಕ, ನಾಯಕಿಯ ಪ್ರೇಮ ಸಲ್ಲಾಪ ಎಲ್ಲವೂ ಚಿತ್ರದಲ್ಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಓಂಕಾರ್ ಮೂವೀಸ್ ಬ್ಯಾನರ್‍ ಅಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್.ಎಸ್.ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿ ಸಹ ನಿರ್ಮಾಪಕರಾಗಿದ್ದಾರೆ. ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...