Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...