Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...