Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...