Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...