Homeಕರ್ನಾಟಕಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಸಾವಿನಲ್ಲೂ ಘನತೆ ಮತ್ತು ವೈಶಿಷ್ಟ್ಯ ಮೆರೆದ ಗಿರೀಶ್ ಕಾರ್ನಾಡ್

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

- Advertisement -
- Advertisement -

|ನಾನು ಗೌರಿ ಡೆಸ್ಕ್|

ತನ್ನ ಸಾವಿಗೆ ಮುಂಚೆಯೇ ಕುಟುಂಬದವರೊಂದಿಗೆ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಹೇಳಿದ್ದ ಸಂಗತಿಗಳು ಇಂದು ಗಮನಕ್ಕೆ ಬಂದಿವೆ. ಕನ್ನಡಕ್ಕೆ, ಕರ್ನಾಟಕಕ್ಕೆ ಗೌರವ ತಂದುಕೊಟ್ಟಿರುವ ಸಾಹಿತಿ ಕಾರ್ನಾಡ್ ರವರಿಗೆ ಸರ್ಕಾರೀ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ, ಅವರ ಕಚೇರಿಯ ಅಧಿಕಾರಿಗಳು ಕಾರ್ನಾಡ್ ಅವರ ಮನೆಗೆ ಹೋದಾಗ ಅವರಿಗೆ ಅಚ್ಚರಿ ಕಾದಿತ್ತು.

ಯಾವುದೇ ಸರ್ಕಾರೀ ಗೌರವ ಬೇಡ ಮತ್ತು ಸರ್ಕಾರೀ ಜಾಗದಲ್ಲೂ ಅಂತ್ಯ ಸಂಸ್ಕಾರ ಬೇಡವೆಂದು ಗಿರೀಶ್ ಕಾರ್ನಾಡ್ ಅವರು ಹೇಳಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳಿಗೆ ತಿಳಿಸಿದರು. ಅಷ್ಟೇ ಅಲ್ಲದೇ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದೂ ತಿಳಿದು ಬಂದಿದೆ. ಕಾರ್ನಾಡ್ ಅವರ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಿದ್ದ ಚಿತ್ರ ನಿರ್ದೇಶಕ ಕೆ.ಎಂ.ಚೈತನ್ಯ ಇದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ಬೈಯ್ಯಪ್ಪನಹಳ್ಳಿಯ ಚಿತಾಗಾರದಲ್ಲಿ ಕಾರ್ನಾಡ್ ರ ಅಂತ್ಯ ಸಂಸ್ಕಾರ ನಡೆಯಲಿದೆ.ಜೀವನದುದ್ದಕ್ಕೂ ಕೆಲವು ಮೌಲ್ಯಗಳಿಗೆ ಬದ್ಧರಾಗಿದ್ದು ಬದುಕಿದ ಗಣ್ಯ ವ್ಯಕ್ತಿಗಳು, ಸಾವಿನ ನಂತರ  ಏನು ಮಾಡಬೇಕೆಂದು ಕುಟುಂಬದವರಿಗೆ ತಿಳಿಸದೇ ಇದ್ದಾಗ ಕೆಲವು ಎಡವಟ್ಟುಗಳು ಸಂಭವಿಸುತ್ತವೆ. ಅವರ ಮೌಲ್ಯಗಳಿಗೆ ವಿರುದ್ಧವಾಗಿ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳಿಗೆ ಶರಣಾಗಬಹುದು. ಅಂತಹ ಸಂದರ್ಭದಲ್ಲಿ ಸದರಿ ಗಣ್ಯರ ಸಾರ್ವಜನಿಕ ಬದುಕಿನ ಒಡನಾಡಿಗಳಾಗಿದ್ದವರೂ ಮುಜುಗರಕ್ಕೆ ಸಿಲುಕುತ್ತಾರೆ. ಏಕೆಂದರೆ ಬದುಕಿದ್ದಾಗ, ತನ್ನ ಬದುಕಿನ ಆದ್ಯತೆಗಳ ಕುರಿತು ಹೇಳಿಕೊಳ್ಳಲು ಆ ವ್ಯಕ್ತಿಯೇ ಇರುತ್ತಾರೆ. ಸತ್ತ ನಂತರ  ಕುಟುಂಬ ಏನು ತೀರ್ಮಾನ ಮಾಡುತ್ತದೋ ಅದೇ ಅಂತಿಮವಾಗುತ್ತದೆ.

ಯು.ಆರ್.ಅನಂತಮೂರ್ತಿಯವರು ತೀರಿಕೊಂಡಾಗ ಹಲವು ಪ್ರಶ್ನೆಗಳು ಎದ್ದಿದ್ದವು. ಅವರ ಅಂತ್ಯ ಸಂಸ್ಕಾರವು ಕಲಾಗ್ರಾಮದ ಆವರಣದಲ್ಲಿ ನಡೆಯಿತು ಮತ್ತು ಅದು ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ನಡೆದಿತ್ತು. ಕ್ರಿಶ್ಚಿಯನ್ ಪತ್ನಿಯಿದ್ದ ಅನಂತಮೂರ್ತಿಯವರು, ಬ್ರಾಹ್ಮಣ್ಯದ ದ್ವಂದ್ವಗಳನ್ನು ಎತ್ತಿ ತೋರಿಸುವ ಸೃಜನಶೀಲ ಕೃತಿಗಳನ್ನು ಬರೆದಿದ್ದರು. ಅದೇ ರೀತಿ, ಬ್ರಾಹ್ಮಣ ಆಚರಣೆ, ವಿಧಿ ವಿಧಾನ ಮತ್ತು ಸಾಂಸ್ಕೃತಿಕ ಸಂಗತಿಗಳ ಕುರಿತು ಇತರ ವಿಚಾರವಾದಿಗಳಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದರು. ಅವರ ಅಂತ್ಯಸಂಸ್ಕಾರದ ವಿಧಿ ವಿಧಾನದ ಬಗ್ಗೆಯೂ ಅವರೇ ಸೂಚಿಸಿದ್ದರು ಎನ್ನಲಾಗಿದೆ.

ಕಲಾಗ್ರಾಮದಲ್ಲಿ ಅಂತ್ಯಸಂಸ್ಕಾರ ಮತ್ತು ಅಂತ್ಯಸಂಸ್ಕಾರದ ವಿಧಿವಿಧಾನಗಳ ಕುರಿತು ಆಗ ಪ್ರಶ್ನೆಗಳು ಎದ್ದಿದ್ದವು. ಅಂತಹ ಯಾವುದಕ್ಕೂ ಕಾರ್ನಾಡರು ಅವಕಾಶ ಕೊಟ್ಟಿಲ್ಲ.

ಇಷ್ಟೇ ಅಲ್ಲದೇ, ಇನ್ನೂ ಕಾರ್ನಾಡರು ಮತ್ತೊಂದು ವಿಚಾರದಲ್ಲೂ ‘ಭಿನ್ನ’ ನಿಲುವನ್ನು ಹೊಂದಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋಗಳನ್ನು ಎಲ್ಲೆಡೆ ಕನ್ನಡ ಅಸ್ಮಿತೆಯ ಹೆಗ್ಗುರುತುಗಳಾಗಿ ಬಳಸುವುದನ್ನು ಅವರು ಒಪ್ಪಿರಲಿಲ್ಲ. ಜ್ಞಾನಪೀಠ ಪ್ರಶಸ್ತಿಯೊಂದೇ ಸಾಹಿತ್ಯ ಶ್ರೇಷ್ಠತೆಯ ಮಾನದಂಡವೂ ಅಲ್ಲ  ಎಂಬುದು ಅವರ ಅಭಿಪ್ರಾಯವಾಗಿತ್ತು. ಸ್ವತಃ ತಾವೇ ಜ್ಞಾನಪೀಠ ಪಡೆದುಕೊಂಡಿದ್ದರೂ, ಇಂತಹ ಅಭಿಪ್ರಾಯ ಅವರಲ್ಲಿತ್ತು ಮತ್ತು ಇದನ್ನು ಅವರು ಬಹಿರಂಗವಾಗಿಯೂ ಹೇಳಿದ್ದರು.

ಗಿರೀಶ್ ಕಾರ್ನಾಡರು ಈ ರೀತಿಯಾಗಿ ಸಾವಿನ ನಂತರದ ಸಂಗತಿಗಳ ಕುರಿತು ಮೊದಲೇ ಕುಟುಂಬದವರಿಗೆ ತಿಳಿಸಿ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...